ಚಂಡೀಗಢ | ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಕುತಂತ್ರ ಎಂದ ಎಎಪಿ-ಕಾಂಗ್ರೆಸ್‌

Date:

ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಹುದ್ದೆಗೆ ಗುರುವಾರ ನಡೆಯಬೇಕಿದ್ದ ಬಹುನಿರೀಕ್ಷಿತ ಚುನಾವಣೆಯನ್ನು ನಾಮನಿರ್ದೇಶಿತ ಅಧ್ಯಕ್ಷರ ‘ಅನಾರೋಗ್ಯ’ ಕಾರಣ ನೀಡಿ ಮುಂದೂಡಲಾಗಿದೆ. ಚುನಾವಣೆ ಮುಂದೂಡಿಕೆಯನ್ನು ಬಿಜೆಪಿಯ ಕುತಂತ್ರವೆಂದು ಕಾಂಗ್ರೆಸ್‌ ಮತ್ತು ಎಎಪಿ ಆರೋಪಿಸಿವೆ.

ಪಾಲಿಕೆಯಲ್ಲಿ 13 ಸ್ಥಾನಗಳನ್ನು ಹೊಂದಿರುವ ಎಎಪಿ ಮತ್ತು 7 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನಕ್ಕೆ ಹೋರಾಟ ನಡೆಸುತ್ತಿವೆ. ಈ ನಡುವೆ, ಚುನಾವಣೆ ಮುಂದೂಡಲಾಗಿದ್ದು, ಇದರ ವಿರುದ್ಧ ಪಾಲಿಕೆ ಕಟ್ಟಡದ ಬಳಿ ಎಎಪಿ-ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಪವನ್ ಕುಮಾರ್ ಬನ್ಸಾಲ್, ”ಬಿಜೆಪಿಗೆ ತಾವು ಸೋಲುತ್ತೇವೆ ಎಂದು ತಿಳಿದಿತ್ತು. ಅದಕ್ಕಾಗಿಯೇ ಅವರು ಈ ತಂತ್ರ ಹೆಣೆದಿದ್ದಾರೆ. ಅವರು ನ್ಯಾಯಯುತವಾಗಿದ್ದರೆ, ಅಧ್ಯಕ್ಷರು ಅನಾರೋಗ್ಯಕ್ಕೆ ಒಳಗಾಗಿದ್ದರೆ, ಅವರ ಸ್ಥಾನಕ್ಕೆ ಬೇರೊಬ್ಬರನ್ನು ತಕ್ಷಣವೇ ನೇಮಿಸಿ ಚುನಾವಣೆ ನಡೆಸುತ್ತಿದ್ದರು” ಎಂದು ಕಿರಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಬಿಜೆಪಿಯ ಗಿಮಿಕ್. ನಾವು ಹೈಕೋರ್ಟ್‌ಗೆ ಹೋಗುತ್ತೇವೆ. ನ್ಯಾಯಾಲಯದಿಂದ ನ್ಯಾಯ ಪಡೆಯುತ್ತೇವೆ. ಈ ಸಣ್ಣ ಚುನಾವಣೆಯಲ್ಲಿ ಬಿಜೆಪಿಯು ನಮ್ಮ ಮೈತ್ರಿಯ ಬಗ್ಗೆ ಭಯಪಡುತ್ತಿದೆ ಎಂದರೆ, ರಾಷ್ಟ್ರೀಯ ಮಟ್ಟದ ಮೈತ್ರಿಯ ಬಗ್ಗೆ ಯಾವ ಹಂತಕ್ಕೆ ಭಯಪಟ್ಟಿರಬಹುದು” ಎಂದು ಎಎಪಿ ನಾಯಕ, ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹೇಳಿದ್ದಾರೆ.

35 ಸ್ಥಾನಗಳನ್ನು ಹೊಂದಿರುವ ಚಂಡೀಗಢ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 14 ಸದಸ್ಯರನ್ನು ಹೊಂದಿದೆ. ಎಎಪಿ 13 ಹಾಗೂ ಕಾಂಗ್ರೆಸ್‌ 7 ಸದಸ್ಯರನ್ನು ಹೊಂದಿವೆ. ಅಲ್ಲದೆ, ಎಸ್‌ಎಡಿಯ ಒಬ್ಬರು ಸದಸ್ಯರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...