ಚಂದ್ರಕಾಂತ ಬೆಲ್ಲದ ಅವರ ಅಭಿನಂದನಾ ಗ್ರಂಥ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ

Date:

“ನಾನು-ಚಂದ್ರಕಾಂತ ಬೆಲ್ಲದ ಗೋಕಾಕ್ ಚಳವಳಿಯ ಒಡನಾಡಿಗಳು. ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ ಅವರಿಗೆ ಅಪಾರ ನಂಬಿಕೆ ಇದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಂದ್ರಕಾಂತ ಗುರಪ್ಪ ಬೆಲ್ಲದ ಅಭಿನಂದನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ “ಅಲ್ಲಮಲೋಕ”, ” ದೊಡ್ಡಹೊಳೆ ದಾಟಿದವರು”, “ಬೆಲ್ಲದಚ್ಚು” ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತಾಡಿದರು.

ಮನುಷ್ಯರನ್ನು ಜಾತಿ-ಧರ್ಮಗಳಾಚೆಗೆ ಪರಸ್ಪರ ಪ್ರೀತಿಸುವ, ಗೌರವಿಸುವ ಸಂಸ್ಕೃತಿಯನ್ನು ಚಂದ್ರಕಾಂತ ಬೆಲ್ಲದ್ ಅವರು ತಮ್ಮ ಬದುಕಿನಲ್ಲಿ ಆಚರಿಸಿಕೊಂಡು ಬಂದಿದ್ದಾರೆ ಎಂದು ತಮ್ಮ ಮತ್ತು ಬೆಲ್ಲದ ಅವರ ನಡುವಿನ ಬಾಂಧ್ಯವ್ಯವನ್ನು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನೊಬ್ಬರ ಮನಸ್ಸಿಗೆ ನೋವು ಮಾಡುವಂತಹ ಮಾತುಗಳನ್ನು ಯಾವತ್ತೂ ಆಡದ ಚಂದ್ರಕಾಂತ ಬೆಲ್ಲದ ಅವರು ಅತ್ಯುನ್ನತ ಮನುಷ್ಯ ಗೌರವವನ್ನು ಹೊಂದಿದ್ದು, ಇವರದ್ದು ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತಹ ಅಪರೂಪದ ವ್ಯಕ್ತಿತ್ವ ಹೊಂದಿದ್ದಾರೆ” ಎಂದು ಮೆಚ್ಚುಗೆ ಸೂಚಿಸಿದರು.

“ಚಂದ್ರಕಾಂತ ಬೆಲ್ಲದ ಅವರು ಉದ್ಯಮಶೀಲತೆ, ಮನುಷ್ಯ ಪ್ರೀತಿ, ಮೂಲಕ ವಿಶಾಲವಾಗಿ ಬೆಳೆದಿದ್ದಾರೆ. ಎಲ್ಲಾ ವರ್ಗದ ಜನರಿಂದ ಅಪಾರ ಪ್ರೀತಿ ಗಳಿಸಿ ಅತ್ಯಂತ ನಿಷ್ಠುರ ನ್ಯಾಯಪರವಾದ ಪ್ರಾಮಾಣಿಕತೆ ವ್ಯಕ್ತಿತ್ವ ಹೊಂದಿದ್ದಾರೆ” ಎಂದು ಮೆಚ್ಚಿಕೊಂಡರು.

ಡಂಬಳದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಭಾಲ್ಕಿಯ ಡಾ.ಬಸವಲಿಂಗ ಪಟ್ಟದೇವರು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೋ.ರು.ಚನ್ನಬಸಪ್ಪ ವಹಿಸಿದ್ದರು.

ಕಾರ್ಮಿಕ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಂತೋಷ್ ಲಾಡ್, ಲೀಲಾವತಿ ಬೆಲ್ಲದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಅರವಿಂದ ಬೆಲ್ಲದ, ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ ಮಾನೆ , ಮಹೇಶ್ ಟೆಂಗಿನಕಾಯಿ ಉಪಸ್ಥಿತರಿದ್ದರು.

ಸಿದ್ದರಾಮಯ್ಯ

ಸಾಹಿತಿಗಳಾದ ನಾ.ಮೊಗಸಾಲೆ, ಡಾ.ಶಂಭು ಬಳಿಗಾರ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಅಭಿನಂದನ ಗ್ರಂಥದ ಸಂಪಾದಕಾರದ ಸಾಹಿತಿ ರಂಜಾನ್ ದರ್ಗಾ, ಇತರೆ ಗ್ರಂಥಗಳ ಸಂಪಾದಕರಾದ ಪ್ರೊ ಶಶಿಧರ ತೋಡಕರ, ದಿವಾಕರ ಹೆಗಡೆ ಮತ್ತು ಚಿತ್ರಕಲಾವಿದ ಚಂದ್ರು ಗಂಗೊಳ್ಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...