ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು ಕೂಡಲೇ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯ ಸರಕಾರದ ತನಿಖಾ ಸಂಸ್ಥೆಗಳಿಂದ ಇದರ ಸಮಗ್ರ ನಿಷ್ಪಕ್ಷಪಾತ ತನಿಖೆ ಮಾಡಲು ಅಸಾಧ್ಯ. ಆದ್ದರಿಂದ ಕೇಂದ್ರ ಸರಕಾರದ ಏಜೆನ್ಸಿಗಳ ಮೂಲಕ ತನಿಖೆ ನಡೆಸಿ” ಎಂದು ಒತ್ತಾಯಿಸಿದರು.

“ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರು ಮಂತ್ರಿಗಳ ಮೌಖಿಕ ಆದೇಶದನ್ವಯ ಹಣ ವರ್ಗಾವಣೆ ಮಾಡಿದ್ದಾಗಿ ಬರೆದಿದ್ದಾರೆ. ಹಾಗಾದರೆ ಎಫ್‍ಐಆರ್‌ನಲ್ಲಿ ಸಚಿವರ ಹೆಸರು ಯಾಕೆ ಬಂದಿಲ್ಲ? ಇದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರಕಾರದ ಅಧೀನ ಸಂಸ್ಥೆಯಾದ ಸಿಐಡಿಯವರು ಮುಖ್ಯಮಂತ್ರಿಗಳು, ಸಚಿವರ ಬಗ್ಗೆ ತನಿಖೆ ಮಾಡಲು ಎಷ್ಟರಮಟ್ಟಿಗೆ ಸಾಧ್ಯ? ನೈತಿಕತೆ ಇದ್ದರೆ ಸಚಿವರು ರಾಜೀನಾಮೆ ಕೊಡಬೇಕಿತ್ತು. ಬ್ಯಾಂಕ್ ಖಾತೆಯು ಎಂ.ಡಿ. ಮತ್ತು ಅಕೌಂಟ್ಸ್ ಅಧಿಕಾರಿಯ ಜಂಟಿ ಖಾತೆಯಾಗಿರುತ್ತದೆ. ಮಾರ್ಚ್‍ನಲ್ಲಿ ಹಣ ವರ್ಗಾವಣೆ ಆಗಿದೆ. ಮಾರ್ಚ್ 4ರಂದು 25 ಕೋಟಿ, 6ರಂದು 25 ಕೋಟಿ, ಮಾರ್ಚ್ 21ರಂದು 44 ಕೋಟಿ ವರ್ಗಾವಣೆ ಆಗಿದೆ. ರಾಜ್ಯ ಹುಜೂರ್ ಖಜಾನೆಯಿಂದ 43.33 ಕೋಟಿ ವರ್ಗಾವಣೆ ಆಗಿದೆ. ಬಳಿಕ ಮೇ 21ರಂದು 50 ಕೋಟಿ ವರ್ಗಾವಣೆ ಆಗಿದೆ” ಎಂದು ವಿವರಿಸಿದರು.

“ಜಂಟಿ ಖಾತೆ ಇದ್ದಾಗ ಹೇಗೆ ವರ್ಗಾವಣೆ ಆಗಿದೆ? ಬ್ಯಾಂಕಿನ ಪ್ರತಿ ತಿಂಗಳ ವಿವರ- ಹುಜೂರ್ ಖಜಾನೆಯ ವಿವರವನ್ನು ಪುನರ್ ಪರಿಶೀಲಿಸಲಿಲ್ಲವೇ? ಎಂದ ಅವರು, ಮಾರ್ಚ್ 31ರಂದು ಹಣಕಾಸು ವರ್ಷ ಮುಕ್ತಾಯ ಆದ ಬಳಿಕ ಎಂ.ಡಿ. ಮತ್ತು ಇಲಾಖೆಯ ಸರಕಾರದ ಮಟ್ಟದ ಅಧಿಕಾರಿಗಳು ಅದನ್ನು ಪರಿಶೀಲಿಸಬೇಕಿತ್ತು. ಹಣ ಖರ್ಚಾದ ಕುರಿತು ಪರಿಶೀಲನಾ ಸಭೆ ಮಾಡಿಲ್ಲವೇ? ಸಭೆ ಮಾಡಿಲ್ಲವೆಂದಾದರೆ ಸರಕಾರವೇ ಇದರಲ್ಲಿ ಶಾಮೀಲಾಗಿರುವುದೇ ಕಾರಣ; ಸರಕಾರವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಇದನ್ನು ಮುಚ್ಚಿಟ್ಟಿದ್ದಾರೆ” ಎಂದು ಆರೋಪಿಸಿದರು.

ನಿಗಮದಲ್ಲಿ ನಡೆದಿರುವುದು ಹಗಲುದರೋಡೆ

“ಬಹುಶಃ ಇತ್ತೀಚಿನ ವರ್ಷಗಳಲ್ಲಿ ಸರಕಾರದ ಖಜಾನೆಯನ್ನೇ ಲೂಟಿ ಮಾಡಿದ ದೊಡ್ಡ ಹಗರಣವಿದು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು ಹಗಲುದರೋಡೆ. 187 ಕೋಟಿ ರೂ. ಹಗರಣದ ವಿಚಾರ ಗೊತ್ತಿದ್ದೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತ ಸರಕಾರವಿದು. ಹಗರಣದಲ್ಲಿ ಸಂಪೂರ್ಣವಾಗಿ ಭಾಗಿ ಆಗಿದ್ದರಿಂದಲೇ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು. ನಿರಪರಾಧಿ ಕೆ.ಎಸ್.ಈಶ್ವರಪ್ಪನವರನ್ನು ಬಲಿ ಪಡೆದಿರಿ; ಅವತ್ತು ನೀವು ಪ್ರತಿಪಕ್ಷದಲ್ಲಿ ಇದ್ದಾಗ ಯಾವ ರೀತಿ ಮಾತಾಡಿದ್ದೀರಿ ಎಂಬುದನ್ನು ನೆನಪಿಸಿಕೊಳ್ಳಿ” ಎಂದರು.

“ಎಸ್‍ಸಿ, ಎಸ್‍ಟಿಗಳಿಗೆ ಮೀಸಲಿಟ್ಟ 24 ಸಾವಿರ ಕೋಟಿ ಹಣವನ್ನು ಅನ್ಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳೇ ಹೊರಬೇಕು ಎಂದು ಒತ್ತಾಯಿಸಿದರು. ಈ ಹಣವನ್ನು ವಾಪಸ್ ಇಲಾಖೆಗೆ ಕೊಡಬೇಕು. ಈ ವಿಷಯದಲ್ಲಿ ತೀವ್ರ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಹರೀಶ್, ಬೆಂಗಳೂರು ಕೇಂದ್ರ ಜಿಲ್ಲೆಯ ಅಧ್ಯಕ್ಷ ಸಪ್ತಗಿರಿ ಗೌಡ ಅವರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...