ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

Date:

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಭಾನುವಾರ ಸಂಜೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಬಿಜೆಪಿ–ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಈ ಬಗ್ಗೆ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, “ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾಗಿರುವ ₹187 ಕೋಟಿ ಅವ್ಯವಹಾರವು ಕಾಂಗ್ರೆಸ್‌ನ ‘ಮಿಷನ್ ಕಮಿಷನ್‌’ಗೆ ತೆರೆ ಎಳೆದಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಅಹಿಂದ ಪರ ಎಂದು ಭಾಷಣ ಬಿಗಿಯುವ ಇವರು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಕಲ್ಲು ಹಾಕುವುದಲ್ಲದೇ, ಅಭಿವೃದ್ಧಿ ನಿಗಮದಿಂದ ಕೊಳ್ಳೆ ಹೊಡೆದು, ಅಲ್ಲಿನ ಅಮಾಯಕ ಅಧಿಕಾರಿಯೊಬ್ಬರು ಆತ್ಮಹತ್ಯೆಗೀಡಾಗುವಂತೆ ಮಾಡಿರುವುದು ದೌರ್ಭಾಗ್ಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಪರಿಯ ಅವ್ಯವಹಾರ ಇಲಾಖೆಯ ಸಚಿವರ ಮೂಗಿನಡಿಯಲ್ಲೇ ನಡೆದರೂ ಅವರಿಗೆ ಅರಿವಿಲ್ಲ ಎಂಬುದು ಹಾಸ್ಯಾಸ್ಪದ ಹಾಗೂ ನಂಬಲಸಾಧ್ಯ. ಬಿ.ನಾಗೇಂದ್ರ ಅವರನ್ನು ವಜಾಗೊಳಿಸಿ, ಪಾರದರ್ಶಕ ತನಿಖೆ ಈ ಕೂಡಲೇ ನಡೆಸಬೇಕು” ಎಂದು ಜೋಶಿ ಆಗ್ರಹಿಸಿದ್ದಾರೆ.

ಕೆ ಎಸ್‌ ಈಶ್ವರಪ್ಪ ವಾಗ್ದಾಳಿ

ಚಂದ್ರಶೇಖರ್‌ ಆತ್ಮಹತ್ಯೆ ವಿಚಾರವಾಗಿ ಮಾಜಿ ಸಚಿವ ಮತ್ತು ಬಿಜೆಪಿಯಿಂದ ಉಚ್ಚಾಟಿತವಾಗಿರುವ ನಾಯಕ ಕೆ ಎಸ್‌ ಈಶ್ವರಪ್ಪ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, “ಹಿಂದೆ ನನ್ನ ವಿರುದ್ಧ ಆರೋಪ ಬಂದಾಗ ರಾಜೀನಾಮೆ ನೀಡುವಂತೆ ಹೋರಾಟ ನಡೆಸಿದ್ರಲ್ಲ, ನಿಮಗೆ ನೈತಿಕತೆ ಇದ್ದರೆ, ನಿಮ್ಮ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆದು ಪ್ರಕರಣದ ತನಿಖೆ ನಡೆಸಿ, ದ್ವಿಮುಖ ನಿಲುವು ಯಾಕೆ” ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

“ಸಿವಿಲ್ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಾಗ ನನ್ನ ಮೇಲೆ ಆರೋಪ ಬಂದ ಸಂದರ್ಭದಲ್ಲಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಆಗ ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನನ್ನ ರಾಜೀನಾಮೆಗೆ ಆಗ್ರಹಿಸಿದ್ದರು. ಈಗ ನಿಮ್ಮ ಸರ್ಕಾರದ ಸಚಿವ ಬಿ. ನಾಗೇಂದ್ರ ಮೇಲೆ ಆರೋಪ ಕೇಳಿಬಂದಿದೆ. ಯಾರು ಬೇಕಾದರೂ ಸಾಯಲಿ ಎಂದು ಅಂದುಕೊಂಡಿದ್ದೀರಾ? ಯಾವ ನಿರ್ಧಾರ ತಳೆಯುವಿರಿ? ಮೊದಲು ರಾಜೀನಾಮೆ ಪಡೆದು, ತನಿಖೆ ನಡೆಸಿ” ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...