ಗೋಸುಂಬೆ ತರ ಬಣ್ಣ ಬದಲಾಯಿಸಿ ಮಾತನಾಡುವುದು ಸರಿಯಲ್ಲ: ಕುಮಾರಸ್ವಾಮಿಗೆ ಹರಿಪ್ರಸಾದ್‌ ತಿರುಗೇಟು

Date:

ಕಾಲ ಕಾಲಕ್ಕೆ ಗೋಸುಂಬೆ ರೀತಿಯಲ್ಲಿ ಬಣ್ಣ ಬದಲಾಯಿಸಿಕೊಂಡು ಮಾತಾಡುವುದು ಸರಿಯಲ್ಲ. ನಾಗಮಂಗಲ ಘಟನೆಗೆ ಸರ್ಕಾರದ ವೈಫಲ್ಯ ಕಾರಣ ಅಲ್ಲ, ಕೆಲ ಸಂಘಟನೆಗಳು ಕೋಮುಗಲಭೆ ಮಾಡಲೆಂದೇ ಹುಟ್ಟಿಕೊಂಡಿವೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್ ಕಿಡಿಕಾರಿದರು.

‘ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಓಲೈಕೆ, ತುಷ್ಟೀಕರಣ ಮಾಡುತ್ತಿರುವುದರಿಂದ ನಾಗಮಂಗಲ ಗಲಾಟೆ ನಡೆದಿದೆ” ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಗೆ ಬೆಂಗಳೂರಿನಲ್ಲಿ ಹರಿಪ್ರಸಾದ್ ತಿರುಗೇಟು ನೀಡಿದರು.

“ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ತುಷ್ಠೀಕರಣ ಎಂಬ ಆರೋಪ ಮಾಡುವವರು ಕೇಂದ್ರ ಸರ್ಕಾರಕ್ಕೂ ತುಷ್ಟಿಕರಣಕ್ಕೂ ಸಂಬಂಧವೇ ಇಲ್ಲವೇ? ಬಿಜೆಪಿ ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಕೋಮು ಗಲಭೆಯನ್ನು ಸೃಷ್ಟಿ ಮಾಡಲು ನಿರಂತರ ಪ್ರಯತ್ನ ನಡೆಸುತ್ತಿದೆ” ಎಂದು ನೇರವಾಗಿ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಮು ಗಲಭೆಗೆ ಮಂಡ್ಯ ಜಿಲ್ಲೆಯ ಜನರು ಆಸ್ಪದ ಕೊಡುತ್ತಿರಲಿಲ್ಲ. ಆದರೆ ಇದೀಗ ಬಿಜೆಪಿ ಮಂಡ್ಯ ಜಿಲ್ಲೆಗೆ ಕಾಲಿಟ್ಟ ಬಳಿಕ ಕೋಮು ಗಲಭೆ ಸೃಷ್ಟಿ ಮಾಡಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಟ್ಟ ಹೆಸರು ತರಲು ಪ್ರಯತ್ನ

“ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿದ್ದಾರೆ.
ಬಿಜೆಪಿ ಅವರಿಗೆ ಕೋಮುಗಲಭೆಗಳು ಇಲ್ಲದಿದ್ದರೆ ಹೊಟ್ಟೆಯೇ ತುಂಬಲ್ಲ” ಎಂದು ಲೇವಡಿ ಮಾಡಿದರು.

ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ

“ನಾಗಮಂಗಲ ಗಲಭೆ ಪ್ರಕರಣದಲ್ಲಿ ಆರೋಪಿಗಳು ಎಷ್ಟೇ ದೊಡ್ಡವರು ಆಗಿದ್ದರು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಚೌಕಟ್ಟು ಮೀರಿ ಹೋದವರಿಗೆ ಸರಿಯಾದ ಬುದ್ಧಿ ಕಲಿಸಬೇಕು. ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಕುರಿತಾಗಿ ನಾನು ಆಗ್ರಮ ಮಾಡುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...