ಹುಬ್ಬಳ್ಳಿ-ಧಾರವಾಡದಂತೆ ಚನ್ನಪಟ್ಟಣ-ರಾಮನಗರ ಅಭಿವೃದ್ಧಿ: ಹೆಚ್‌ ಡಿ ಕುಮಾರಸ್ವಾಮಿ

Date:

ಹುಬ್ಬಳ್ಳಿ ಧಾರವಾಡ ಮಾದರಿಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಪಟ್ಟಣಗಳನ್ನು ಅವಳಿ ನಗರಗಳನ್ನಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ಚನ್ನಪಟ್ಟಣ ಕ್ಷೇತ್ರದ ನೀಲಕಂಠನಹಳ್ಳಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, “ಅವಳಿ ಪಟ್ಟಣಗಳನ್ನು ಅವಳಿ ನಗರಗಳನ್ನಾಗಿ ಪರಿವರ್ತಿಸಲಾಗುವುದು. ಇದರಿಂದ ಈ ಭಾಗದ ಆರ್ಥಿಕತೆಗೆ ಶಕ್ತಿ ಬರುವುದರ ಜತೆಗೆ ಜನಜೀವನ ಮಟ್ಟವೂ ಸುಧಾರಿಸುತ್ತದೆ. ಅಭಿವೃದ್ಧಿ ಮಾಡುವುದು ಎಂದರೆ ಯಾವುದೇ ದುರುದ್ದೇಶಕ್ಕೆ ಬೆಂಗಳೂರಿಗೆ ಸೇರುವುದಲ್ಲ. ಆಯಾ ಪ್ರದೇಶಗಳನ್ನು ಆಯಾ ಬೌಗೋಳಿಕ ವ್ಯಾಪ್ತಿಯಲ್ಲಿಯೇ ವಿಸ್ತೃತವಾಗಿ ಅಭಿವೃದ್ಧಿ ಮಾಡುವುದು” ಎಂದು ಪರೋಕ್ಷವಾಗಿ ವಿರೋಧಿಗಳಿಗೆ ಕುಟುಕಿದರು.

ಕಮೀಶನ್ ದುರಾಸೆಗೆ ಯುಜಿಡಿ ಯೋಜನೆ ನೆನೆಗುದಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚನ್ನಪಟ್ಟಣ ಕ್ಷೇತ್ರದಲ್ಲಿ ಒಳಚರಂಡಿ ವ್ಯವಸ್ಥೆ ಆಗಿಲ್ಲ. ನಾನು ಸಿಎಂ ಆಗಿದ್ದಾಗ ಯೋಜನೆಗೆ ಒಪ್ಪಿಗೆ ನೀಡಿದ್ದೆ. ₹97 ಕೋಟಿ ಹಣ ಬಿಡುಗಡೆಯಾಗಿ ಮೂರು ವರ್ಷವಾಗಿದೆ. ಟೆಂಡರ್ ಕರೆದು ಹಣ ಬಿಡುಗಡೆ ಮಾಡಿದರೆ ಕೆಲಸ ಆಗುತ್ತಿದೆ. ಅದನ್ನು ಮಾಡುವುದು ಬಿಟ್ಟು ಗುತ್ತಿಗೆದಾರರಿಗೆ ‘ಮನೆ ಹತ್ತಿರ ಬಂದು ನೋಡಿ’ ಎಂದು ತಾಕೀತು ಮಾಡುತ್ತಿದ್ದಾರೆ. ಅವರ ಕಮೀಶನ್ ದುರಾಸೆಗೆ ಯುಜಿಡಿ ಯೋಜನೆ ನೆನೆಗುದಿಗೆ ಬಿದ್ದಿದೆ” ಎಂದು ಕುಮಾರಸ್ವಾಮಿ ದೂರಿದರು.

ಗಾರ್ಮೆಂಟ್ಸ್ ಕಾರ್ಖಾನೆಗೆ ಸ್ಥಾಪನೆ

“ನೀಲಕಂಠನಹಳ್ಳಿ ಗ್ರಾಮದ ಹೆಣ್ಣು ಮಕ್ಕಳು ಗಾರ್ಮೆಂಟ್ಸ್ ಕಾರ್ಖಾನೆ ಬೇಕೆಂದು ಕೇಳಿದ್ದಾರೆ. ಅವರ ಮನವಿ ನಾನು ಸ್ಪಂದಿಸುತ್ತೇನೆ. ಹೆಣ್ಣು ಮಕ್ಕಳಿಗೆ ಟೈಲರಿಂಗ್ ತರಬೇತಿ ಕೊಡಿಸಿ, ಗಾರ್ಮೆಂಟ್ಸ್ ಕಾರ್ಖಾನೆ ಸ್ಥಾಪನೆ ಮಾಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಪ್ರಯತ್ನ ಮಾಡುತ್ತೇನೆ” ಎಂದರು.

ದಲಿತರನ್ನು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎತ್ತಿಕಟ್ಟುವ ಹೀನ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಅಂಬೇಡ್ಕರ್ ಅವರನ್ನು ಎರಡು ಸಾಲ ಸೋಲಿಸಿ ಅವರನ್ನು ರಾಜಕೀಯವಾಗಿ ನಿರ್ನಾಮ ಮಾಡಿದ್ದು ಕಾಂಗ್ರೆಸ್. ಆದರೆ, ಮೋದಿ ಅವರು ಅಂಬೇಡ್ಕರ್ ಅವರ ಹೆಸರನ್ನು ಚಿರಸ್ಥಾಯಿಗೊಳಿಸಲು ಸಂಕಲ್ಪ ತೊಟ್ಟಿದ್ದಾರೆ. ಸಂವಿಧಾನ ಅಂಗೀಕರಿಸಲಾದ ನವೆಂಬರ್ 26ನೇ ತಾರೀಖನ್ನು ಶಾಶ್ವತವಾಗಿ ಸಂವಿಧಾನ ದಿನವನ್ನಾಗಿ ಆಚರಿಸಲು ಅವರು ನಿರ್ಧಾರ ಮಾಡಿದ್ದಾರೆ” ಎಂದು ಹೇಳಿದರು.

ಮೈಸೂರು ಕೊಡಗು ಸಂಸದ ಯದುವೀರ್ ಕೃಷದತ್ತ ಒಡೆಯರ್, ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕರಾದ ಡಾ.ಅನ್ನದಾನಿ, ಚೌಡರೆಡ್ಡಿ ತೂಪಲ್ಲಿ, ನಿಸರ್ಗ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಸೇರಿದಂತೆ ಅನೇಕ ನಾಯಕರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...