ಚನ್ನಪಟ್ಟಣ | ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ ಕೆ ಶಿವಕುಮಾರ್

Date:

ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರʼ ಸರಣಿ ಕಾರ್ಯಕ್ರದಲ್ಲಿ ಮನೆ, ನಿವೇಶನ ಹಂಚಿಕೆ ಬಗ್ಗೆ ನಾಗರಿಕರಿಗೆ ಡಿಸಿಎಂ ಶಿವಕುಮಾರ್ ಅವರು ಈ ಹಿಂದೆ ಭರವಸೆ ನೀಡಿದ್ದರು. ಅದರಂತೆ ನಿವೇಶನಗಳಿಗಾಗಿ ಸ್ಥಳ ವೀಕ್ಷಣೆಗೆ ಗುರುವಾರ ತಾಲ್ಲೂಕಿನ ಹನುಮಂತನಗರ, ಪಟ್ಲು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಜನತೆಗೆ ಆದಷ್ಟು ಬೇಗ ಅನುಕೂಲ ಮಾಡಿಕೊಡುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈಗ ಇರುವ ಜಮೀನುಗಳ ಅಕ್ಕಪಕ್ಕ ಖಾಸಗಿಯವರು ಜಮೀನು ನೀಡಿದರೆ ಸರ್ಕಾರದಿಂದ ಖರೀದಿಸಲಾಗುವುದು. ಈಗಾಗಲೇ ಚನ್ನಪಟ್ಟಣ ತಾಲ್ಲೂಕು ಸೇರಿದಂತೆ ಒಟ್ಟು ಮೂರು ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಮೂಲ ಸೌಕರ್ಯ ಅಭಿವೃದ್ದಿಗೆ ತಲಾ 100 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನಕಪುರದಲ್ಲಿ ನೂರಾರು ಎಕರೆ ಹಂಚಿದ್ದೇನೆ. ನಾನೇ ಖುದ್ದಾಗಿ ವಾರ್ಡ್ ಮಟ್ಟದಲ್ಲಿ ನಿವೇಶನ ಹಂಚಿಕೆ ಮಾಡಿದ್ದೇನೆ. ಇಲ್ಲಿಯೂ ಇದೇ ರೀತಿ ಹಂಚಿಕೆ ಮಾಡಲಾಗುವುದು. ಉತ್ತಮ ದರ್ಜೆಯ ಲೇಔಟ್ ಗಳನ್ನು ನಿರ್ಮಾಣ ಮಾಡಿ, ಒಳಚರಂಡಿ, ಕುಡಿಯುವ ನೀರು, ಶಾಲೆ, ಅಂಗನವಾಡಿ, ದೇವಸ್ಥಾನ, ರಸ್ತೆ ಸೇರಿದಂತೆ ಎಲ್ಲ ಸೌಕರ್ಯ ನೀಡಲಾಗುವುದು” ಎಂದು ಹೇಳಿದರು.

ಉಪಚುನಾವಣೆ ಮುಂಚಿತವಾಗಿಯೇ ಹಂಚಿಕೆ ಮಾಡಲಾಗುವುದೇ ಎಂದಾಗ, “ಈಗಾಗಲೇ ಸ್ಕೆಚ್ ಕೂಡ ಮಾಡಲಾಗಿದೆ. ಚನ್ನಪಟ್ಟಣ ನಗರ ಮಾತ್ರವಲ್ಲ, ಆಯಾಯ ಹಳ್ಳಿಗಳಲ್ಲಿ ಅಲ್ಲಲ್ಲಿಯೇ ನಿವೇಶನ ಹಂಚಿಕೆ ಮಾಡಲಾಗುವುದು. ಅವೇರಗಳ್ಳಿ, ಸುಳ್ಳೇರಿ, ಶಿಬನಹಳ್ಳಿ, ವಂದಾರಗುಪ್ಪೆ, ಅಲ್ಲಾಳುಸಂದ್ರ ಸೇರಿದಂತೆ ಬ್ರಹ್ಮಿಣೀಪುರದಲ್ಲಿ 9 ಎಕರೆ, ಪಟ್ಲು ಗ್ರಾಮದಲ್ಲಿ 22ಎಕರೆ ಸೇರಿದಂತೆ ಆಯಾಯ ಗ್ರಾಮಮಟ್ಟದಲ್ಲಿ ಎಷ್ಟು ಭೂಮಿ ಲಭ್ಯತೆ ಇದೆಯೋ ಅವುಗಳನ್ನು ಗುರುತಿಸಲಾಗಿದೆ” ಎಂದರು.

ಕುಮಾರಸ್ವಾಮಿ ಅವರ ಸ್ವಚ್ಛತೆ ಬಗ್ಗೆ ತಿಳಿಸಲಿ

“ನಮ್ಮ ಸಮಾವೇಶಕ್ಕೆ ಬಿಜೆಪಿ, ಜೆಡಿಎಸ್ ಉತ್ತರ ನೀಡಲಿ. ನಾವು ಕೇವಲ ಉತ್ತರ ನೀಡಿ ಎಂದಷ್ಟೇ ಕೇಳುತ್ತಿದ್ದೇವೆ. ಮಾಧ್ಯಮವೊಂದರಲ್ಲಿ ಗಣಿ ವಿಚಾರವಾಗಿ ಸುದ್ದಿ ಬಿತ್ತರವಾಗುತ್ತಿತ್ತು. ಮೈನಿಂಗ್ ಮಿನಿಸ್ಟರ್ ಮೈನಿಂಗ್ ಹೇಗೆ ಕೊಟ್ಟರು ಎಂದು ಚರ್ಚೆಯಾಗುತ್ತಿತ್ತು. ಮೈನಿಂಗ್, ಸ್ಟೀಲ್, ಕಬ್ಬಿಣ ಸಚಿವರು ಅನುಮತಿ ಕೊಟ್ಟರು ಎನ್ನುವ ವಿಚಾರವಿದೆ. ಡೀನೋಟಿಫಿಕೇಶನ್ ಸೇರಿದಂತೆ ಇತರೇ ಆರೋಪಗಳಿಗೆ ಉತ್ತರ ನೀಡಲಿ. ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರಲ್ಲವೇ, ಅವರ ಸ್ವಚ್ಛತೆ ಬಗ್ಗೆ ತಿಳಿಸಲಿ” ಎಂದು ಸವಾಲು ಹಾಕಿದರು.

ಮೈಸೂರಿನಲ್ಲಿ ನಡೆಯಲಿರುವ ಜನಾಂದೋಲನ ಸಭೆಯ ಪೋಸ್ಟರ್ ಅಲ್ಲಿ ಕೆಪಿಸಿಸಿ ಅಧ್ಯಕ್ಷರ ಫೋಟೊ ಕಣ್ಮರೆಯಾಗಿರುವ ಬಗ್ಗೆ ಕೇಳಿದಾಗ “ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿ. ಹಿಂದುಳಿದ ವರ್ಗದ ನಾಯಕ ಎಂದು ಗುರಿ ಮಾಡಲಾಗುತ್ತಿದೆ. ಇಲ್ಲಿ ನನ್ನ ಅವಶ್ಯಕತೆ ಏನಿಲ್ಲ. ನಮ್ಮ ಸರ್ಕಾರದ ನಾಯಕರು ಅವರು, ನಾನು ಪಕ್ಷದ ಅಧ್ಯಕ್ಷ ಇದರಲ್ಲಿ ಸಮಸ್ಯೆ ಏನಿದೆ?” ಎಂದು ಮರು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...