ಚನ್ನಪಟ್ಟಣ ಉಪಚುನಾವಣೆ | ನಾನು ಸ್ಪರ್ಧೆ ಮಾಡಲ್ಲ, ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವೆ: ಡಿ‌ ಕೆ ಸುರೇಶ್

Date:

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್​ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್ ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.

ರಾಮನಗರದಲ್ಲಿ ಸೋಮವಾರ ಮಾತನಾಡಿದ ಅವರು, “ಡಿಕೆ ಸುರೇಶ್​​ನ ಸೋಲಿಸಿಬಿಟ್ಟಿದ್ದೇವೆ. ಏನೋ ಆಗಿಬಿಡುತ್ತದೆ ಅನ್ನೋದಾದರೆ ಅದು ಭ್ರಮೆ. ನಾನು ನನ್ನ ಕಾರ್ಯಕರ್ತರ ಜೊತೆಗಿದ್ದೇನೆ. ಯಾರಿಗೂ ನಾನು ವೈಯಕ್ತಿಕವಾಗಿ ತೊಂದರೆ ಕೊಟ್ಟವನಲ್ಲ. ಈ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಮಾತನಾಡಿರಬಹುದು, ವಿನಃ ಯಾರನ್ನೂ ಕೆಟ್ಟದಾಗಿ ನಡೆಸಿಕೊಂಡಿಲ್ಲ” ಎಂದರು.

“ನನ್ನ ನಡೆಯಿಂದ ಯಾರಿಗಾದರೂ ಮನಸ್ಸಿಗೆ ನೊವಾಗಿದ್ದರೆ, ಪಕ್ಷದ ಕಾರ್ಯಕರ್ತರ ಪರವಾಗಿ, ನನ್ನ ಪರವಾಗಿ ಕ್ಷಮೆ ಕೇಳುತ್ತೇನೆ. ನನಗೆ ಯಾರೂ ಶತ್ರುಗಳಿಲ್ಲ. ನನಗೆ ನಾನೇ ಶತ್ರು. ನಾನೂ ಒಂದು ವಿರಾಮ ನಿರೀಕ್ಷೆ ಮಾಡಿದ್ದೆ. ಈಗ ವಿರಾಮ. ಜಾತಿ, ಧರ್ಮ, ಭಾವನಾತ್ಮಕ ವಿಚಾರಗಳು ಅಸೂಯೆ ನನ್ನ ಸೋಲಿಗೆ ಕಾರಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಕೆಲಸ‌ ಮಾಡಿದ್ದೇನೆ. ನನಗೆ ರಾಮನಗರ ಮಾಧ್ಯಮದವರು ಪ್ರೋತ್ಸಾಹ ಕೊಟ್ಟಿದ್ದಾರೆ. ರಾಜಕೀಯದಲ್ಲಿ ನನಗೆ ಆಸಕ್ತಿ ಇರಲಿಲ್ಲ. ಉಪ‌ಚುನಾವಣೆ ನಡೆದಾಗ ಜಿಲ್ಲೆ ಹಾಗೂ ರಾಜ್ಯದ ನಾಯಕರು ನನ್ನನ್ನು ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದರು. ಡಿಕೆ ‌ಶಿವಕುಮಾರ್ ಅವರಿಗೆ ಒತ್ತಡ ತಂದು ನಾಯಕರು ನನಗೆ ಅವಕಾಶ ಕೊಟ್ಟಿದ್ದರು. ಹತ್ತು ವರ್ಷ ಎಂಟು ತಿಂಗಳುಗಳ ಕಾಲ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ. ಅವಕಾಶಕ್ಕೆ ತಕ್ಕಂತೆ ಬಡವರು, ದೀನ ದಲಿತರು, ಮಹಿಳೆಯರ ಅಭಿವೃದ್ಧಿಗೆ ನನ್ನ ಗಮನಕ್ಕೆ ಬಂದಿದನ್ನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರ ಸರ್ಕಾರ ಆಗಲಿ, ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪುವ ಹಾಗೆ ಹಗಲಿರುಳು ಶ್ರಮಿಸಿದ್ದೇನೆ” ಎಂದು ತಿಳಿಸಿದರು.

“ಸಾಮಾನ್ಯ ಕಾರ್ಯಕರ್ತನಾಗಿ ನಾನು ಕೆಲಸ ಮಾಡುತ್ತೇನೆ. ಇನ್ನು ಮುಂದೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ ಕೊಟ್ಟ ಮಾತಿಂದ ಹಿಂದೆ ಸರಿಯುವ ಮಾತಿಲ್ಲ. ನಾನು ಹೊಸದಾಗಿ ಬಂದಾಗ ಜನ ಕೆಲಸ ಮಾಡ್ತಾರೆ ಅಂತ ಗೆಲ್ಲಿಸಿದ್ರು. ಡಾಕ್ಟರ್ ಬಂದಾಗ ಡಾಕ್ಟರ್ ಅವರನ್ನೂ ಗೆಲ್ಲಿಸಿದ್ದಾರೆ. ಅವರಿಗೆ ನಾನು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದೇನೆ. ಮಾಧ್ಯಮಗಳು ನನ್ನನ್ನು ಹೇಗೆ ಬಿಂಬಿಸಿದವು, ಅವರನ್ನು ಹೇಗೆ ಬಿಂಬಿಸಿದವು ಎಂಬುದು ಗೊತ್ತಿದೆ. ಹೀಗಾಗಿ ಮಾಧ್ಯಮಗಳಿಗೂ ಅಭಿನಂದನೆ ಅರ್ಪಿಸುತ್ತೇನೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...