ಚೆಕ್ ಬೌನ್ಸ್​ | ಸ್ನೇಹಮಯಿ ಕೃಷ್ಣ ಮೋಸ ಸಾಬೀತು, ಕಾಂಗ್ರೆಸ್‌ ನಾಯಕರು ಹೇಳುವುದೇನು?

Date:

2019ರಲ್ಲಿ ಮೈಸೂರಿನ ನಗರದ ಕೆ.ಆ‌ರ್. ಠಾಣೆಯ ರೌಡಿಗಳ ಪಟ್ಟಿಯಲ್ಲಿ ಸ್ನೇಹಮಯಿ ಕೃಷ್ಣ ಹೆಸರು ಸೇರಿಸಲಾಗಿದೆ. ವಂಚನೆ, ಬೆದರಿಕೆ ಮೊದಲಾದ ಆರೋಪಗಳ ಮೇಲೆ ಮೈಸೂರು ನಗರ ವ್ಯಾಪ್ತಿಯಲ್ಲಿ 17 ಪ್ರಕರಣ ಸೇರಿದಂತೆ ರಾಜ್ಯದ ವಿವಿಧೆಡೆ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳು ಇವರ ವಿರುದ್ಧ ದಾಖಲಾಗಿವೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಬಯಲಿಗೆಳೆದು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಹಲವು ರಾಜಕಾರಣಿಗಳನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಈಗ ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆಗೆ ಗುರಿಯಾಗಿದ್ದಾರೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್​​ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಆದರೆ, ಶಿಕ್ಷೆಯ ಪ್ರಮಾಣ ಶುಕ್ರವಾರ ಪ್ರಕಟವಾಗುವ ಸಾಧ್ಯತೆ ಇದೆ.

ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾ‌ರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್‌ ಬ್ಯಾಂಕ್‌ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್‌ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಸ್ನೇಮಹಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪ ಸಾಬೀತಾಗಿದ್ದರಿಂದ ಚೆಕ್ ಬೌನ್ಸ್​ಗೆ ಸಂಬಂಧಿಸಿದಂತೆ ಹಣ ಪಾವತಿ ಮಾಡಬೇಕು ಅಥವಾ ಆರು ತಿಂಗಳು ಕಾಲ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೌಡಿ ಪಟ್ಟಿಯಲ್ಲಿ ಸ್ನೇಹಮಯಿ ಕೃಷ್ಣ ಹೆಸರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ ಲೋಕಾಯುಕ್ತದಲ್ಲಿ ಎಫ್‌ಐಆ‌ರ್ ದಾಖಲಾಗುವಂತೆ ಮಾಡುವ ಮೂಲಕ ಸ್ನೇಹಮಯಿ ಕೃಷ್ಣ ಸದ್ಯ ಸುದ್ದಿಯಲ್ಲಿರುವ ವ್ಯಕ್ತಿ. ತಾವೇ ಹೇಳಿಕೊಳ್ಳುವಂತೆ ‘ನ್ಯಾಯಕ್ಕಾಗಿ ನಿರಂತರ ಹೋರಾಟ’ ಎನ್ನುವ ಸ್ನೇಹಮಯಿ ಕೃಷ್ಣ ಅವರಿಗೆ ಕ್ರಿಮಿನಲ್‌ ಹಿನ್ನೆಲೆಯೂ ಅಂಟಿಕೊಂಡಿದೆ.

2019ರಲ್ಲಿ ಮೈಸೂರಿನ ನಗರದ ಕೆ.ಆ‌ರ್. ಠಾಣೆಯ ರೌಡಿಗಳ ಪಟ್ಟಿಯಲ್ಲಿ ಸ್ನೇಹಮಯಿ ಕೃಷ್ಣ ಹೆಸರು ಸೇರಿಸಲಾಗಿದೆ. ವಂಚನೆ, ಬೆದರಿಕೆ ಮೊದಲಾದ ಆರೋಪಗಳ ಮೇಲೆ ಮೈಸೂರು ನಗರ ವ್ಯಾಪ್ತಿಯಲ್ಲಿ 17 ಪ್ರಕರಣ ಸೇರಿದಂತೆ ರಾಜ್ಯದ ವಿವಿಧೆಡೆ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳು ಇವರ ವಿರುದ್ಧ ದಾಖಲಾಗಿವೆ. ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಜಾ ಆಗಿದ್ದು, ಇನ್ನೂ ಕೆಲವು ವಿಚಾರಣೆಯ ಹಂತದಲ್ಲಿವೆ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸ್ನೇಹಮಯಿ ಕೃಷ್ಣ & ಗಂಗರಾಜು ಭಾವಚಿತ್ರಕ್ಕೆ ರಕ್ತಾಭಿಷೇಕ, ಪ್ರಕರಣ ತಡವಾಗಿ ಬೆಳಕಿಗೆ

ಮೈಸೂರು ನಗರದ ಬಂಡಿಪಾಳ್ಯ ನಿವಾಸಿಯಾದ ಸ್ನೇಹಮಯಿ ಕಷ್ಣ ಎರಡು ದಶಕಗಳಿಂದ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಪತ್ರಿಕೋದ್ಯಮ, ಸಿನಿಮಾ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದಾರೆ. ಹಲವು ಪ್ರಕರಣಗಳಲ್ಲಿ ಕಾನೂನು ಹೋರಾಟ ಕೈಗೊಂಡಿರುವ ಇವರು ಮೈಸೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಆಂಟೊ ಕೊಲೆ ಪ್ರಕರಣದಲ್ಲಿ ಪೊಲೀಸರು ನಿರಪರಾಧಿಗಳನ್ನು ಆರೋಪಿಗಳನ್ನಾಗಿ ಮಾಡಿ ನಿಜವಾದ ಆರೋಪಿಗಳನ್ನು ರಕ್ಷಿಸಿದ್ದ ಪ್ರಕರಣದಲ್ಲಿ ಅಮಾಯಕರ ಪರ ಹೋರಾಟ ನಡೆಸಿ ಗಮನ ಸೆಳೆದಿದ್ದರು. ಹಾಗೆಯೇ ಮೈಸೂರು ತಾಲ್ಲೂಕಿನ ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2014ರಲ್ಲಿ ಪೊಲೀಸರ ವಿರುದ್ಧವೇ ಕಳ್ಳತನದ ಪ್ರಕರಣ ದಾಖಲಾದಾಗ, ಪೊಲೀಸರ ಪರವಾಗಿ ನಿಂತು ನ್ಯಾಯ ದೊರಕಿಸಿಕೊಟ್ಟ ಉದಾಹರಣೆಯೂ ಇದೆ.

ಎಂ ಲಕ್ಷ್ಮಣ 1

ಕಸ್ಟಡಿಗೆ ಪಡೆದು ಜೈಲಿಗೆ ಹಾಕಬೇಕು: ಕಾಂಗ್ರೆಸ್​ ವಕ್ತಾರ ಎಂ.ಲಕ್ಷ್ಮಣ

‘ಸ್ನೇಹಮಯಿ ಕೃಷ್ಣ ಅಧಿಕೃತ ರೌಡಿಶೀಟರ್’​ ಎಂದು ಬಹಿರಂಗವಾಗಿ ಆರೋಪಿಸುವ ​ಕಾಂಗ್ರೆಸ್​ ವಕ್ತಾರ ಎಂ.ಲಕ್ಷ್ಮಣ ಅವರನ್ನು ಚೆಕ್ ಬೌನ್ಸ್ ಪ್ರಕರಣ ವಿಚಾರವಾಗಿ ಈ ದಿನ.ಕಾಮ್ ಮಾತನಾಡಿಸಿದಾಗ,‌ “ಸ್ವಯಂಘೋಷಿತ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ 2019ರಿಂದಲೂ ಒಬ್ಬ ರೌಡಿಶೀಟರ್. ಅವರ ವಿರುದ್ಧ 44 ‌ಕ್ರಿಮಿನಲ್ ಕೇಸ್​​ಗಳಿವೆ. ಬ್ಲ್ಯಾಕ್​ಮೇಲ್, ಕೊಲೆ, ಭೂ ಅವ್ಯವಹಾರ ಕೇಸ್ ದಾಖಲಾಗಿವೆ. ಗಡಿಪಾರಾದ ವ್ಯಕ್ತಿ. ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ನ್ಯಾಯಾಲಯ 420 ಎಂದು ಹೇಳಿ ಶಿಕ್ಷೆ ಜಾರಿ ಮಾಡಿದೆ. ಈ ತರ ಎಷ್ಟು ಜನಕ್ಕೆ ಇವನಿಂದ ಮೋಸವಾಗಿದೆ. ಇವನ ವೃತ್ತಿಯೇ ಬ್ಲ್ಯಾಕ್‌ ಮೇಲ್‌ ಮಾಡಿಕೊಂಡು ಜೀವನ ನಡೆಸುವುದು. ಶಿಕ್ಷೆಯ ಪ್ರಮಾಣ ಪ್ರಕಟವಾದ ಕೂಡಲೇ ಪೊಲೀಸರು ಈತನನ್ನು ಕಸ್ಟಡಿಗೆ ಪಡೆದು ಜೈಲಿಗೆ ಹಾಕಬೇಕು” ಎಂದು ಹೇಳಿದರು.

“ಸ್ನೇಹಮಯಿ ಕೃಷ್ಣ ಅರ್ಜಿ ಇ.ಡಿ ಅರ್ಜಿ ಸಲ್ಲಿಸಿದರೆ ಸಾಕು ಇ.ಡಿ ಅವರು ಕೋರ್ಟ್‌, ಸಿಬಿಐ ಹಾಗೂ ಕೇಂದ್ರ ಸರ್ಕಾರವೇ ನಿರ್ದೇಶನ ನೀಡಿದೆ ಎನ್ನುವಂತೆ ವಿಚಾರಣೆ ನಡೆಸುತ್ತಾರೆ. ಒಬ್ಬ ಸಾಮಾನ್ಯ ಜನರು ಹೀಗೆ ಜಾರಿ ನಿರ್ದೇಶನಾಲಯಕ್ಕೆ ಹೋಗಿ ದೂರು ಕೊಟ್ಟರೆ ಕೂಡಲೇ ವಿಚಾರಣೆ ನಡೆಸುತ್ತಾರಾ? ಸಾಧ್ಯವೇ ಇಲ್ಲ. ಸ್ನೇಹಮಯಿ ಕೃಷ್ಣ ಹಿಂದೆ ಬಿಜೆಪಿಯ ದೊಡ್ಡ ಪಡೆಯೇ ಬೆಂಬಲವಾಗಿ ನಿಂತಿದೆ. ಸುಪ್ರೀಂ ಕೋರ್ಟ್‌ ನ್ಯಾಯಾಧೀಶರು ಒಂದು ವಾದಕ್ಕೆ 22 ಲಕ್ಷ ಹಣ ತೆಗೆದುಕೊಳ್ಳುತ್ತಾರೆ. ಅಂತಹ ನ್ಯಾಯಾಧೀಶರನ್ನು ಇವರು ನೇಮಿಸಿಕೊಳ್ಳುತ್ತಾರೆ ಎಂದರೆ ಇವರ ಹಿಂದಿನ ಆರ್ಥಿಕ ಶಕ್ತಿ ಯಾವುದು ಎಂಬುದು ಅರ್ಥವಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಬ್ಲ್ಯಾಕ್‌ಮೇಲರ್‌ ವ್ಯಕ್ತಿಗೆ ಕೋರ್ಟ್‌ ಹೆಚ್ಚು ಪ್ರೋತ್ಸಾಹಿಸಬಾರದು. ಕಠಿಣ ಶಿಕ್ಷೆಗೆ ಗುರಿಪಡಿಸಬೇಕು” ಎಂದು ಆಗ್ರಹಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಮಸಿ ಬಳಿದು, ಅಧಿಕಾರದಿಂದ ಕೆಳಗೆ ಇಳಿಸಬೇಕು ಎಂಬುದು ಬಿಜೆಪಿಯ ಒನ್‌ ಲೈನ್‌ ಅಜೆಂಡಾ. ಇದಕ್ಕಾಗಿ ಸ್ನೇಹಮಯಿ ಕೃಷ್ಣನನ್ನು ಬಿಜೆಪಿಯವರು ಬಳಸಿಕೊಳ್ಳುತ್ತಿದ್ದಾರೆ. ಇವನಿಗೆ ಹಣಕೊಟ್ಟು ಪ್ರೋತ್ಸಾಹಿಸುತ್ತಿದ್ದಾರೆ. ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಹೋಗಿ ಅಧಿಕಾರಿಗಳನ್ನು ಹೆದರಿಸುತ್ತಾನೆ. ಕೋರ್ಟ್‌ ಈಗ ಇವನಿಗೆ ಸರಿಯಾಗಿ ಬುದ್ದಿ ಕಲಿಸಬೇಕು. ನಾವು ಎಷ್ಟೇ ಇವನ ವಿರುದ್ಧ ಆರೋಪ ಮಾಡಿದರೂ ಸರ್ಕಾರವನ್ನು ನಮ್ಮ ಪರವಾಗಿ ಬಳಸಿಕೊಂಡಿಲ್ಲ. ಇವನ ಅನಾಚಾರಗಳನ್ನು ತೆರದಿಡುವ ಪ್ರಯತ್ನ ಮಾಡಿದ್ದೇನೆ. ಇವನಿಂದ ಸಾಕಷ್ಟು ಜನ ನೊಂದಿದ್ದಾರೆ. ಸ್ನೇಹಮಯಿ ಕೃಷ್ಣ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದರೆ ಮುಡಾ ಸೀಲ್​​ಗಳು, ದಾಖಲೆಗಳು ಸಿಗುತ್ತವೆ. ಆ ಲೇವಲ್‌ಗೆ ಇವನು ಕ್ರಿಮಿನಲ್‌ ಇದ್ದಾನೆ” ಎಂದು ದೂರಿದರು.

ಎಸ್‌ ಮನೋಹರ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಮಾತನಾಡಿ, “ಸ್ನೇಹಮಯಿ ಕೃಷ್ಣ ಹಿಂದೆ ಬೆಂಬಲಾಗಿ ನಿಂತಿರುವುದೇ ಹೆಚ್‌ ಡಿ ಕುಮಾರಸ್ವಾಮಿ ಮತ್ತು ಬಿಜೆಪಿಯವರು. ಈಗ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಆರೋಪ ಸಾಬೀತಾಗಿದೆ. ಅಷ್ಟು ಹಣ ಕೊಡದ ವ್ಯಕ್ತಿ ಲಕ್ಷಾಂತರ ಹಣ ಕೊಟ್ಟು ಸುಪ್ರೀಂ ಕೋರ್ಟ್‌ ವಕೀಲರನ್ನು ಹೇಗೆ ನೇಮಿಸಿಕೊಳ್ಳುತ್ತಾನೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ನೇಹಮಯಿ ಕೃಷ್ಣನನ್ನು ಬಳಸಿಕೊಳ್ಳಲಾಗುತ್ತಿದೆ. ಯತ್ನಾಳ್‌ ಅವರು ಮಾಡಿರುವ ಆರೋಪಗಳು ಇ.ಡಿ, ಸಿಬಿಐ ಕಿವಿಗೆ ಬೀಳುವುದಿಲ್ಲ. ಸ್ನೇಹಮಯಿ ಕೃಷ್ಣ ಹೋದ ತಕ್ಷಣ ಇವನಿಗೆ ದೊಡ್ಡ ಗೌರವಕೊಟ್ಟು ಪ್ರಕರಣ ದಾಖಲಿಸಿಕೊಳ್ಳುತ್ತದೆ. ಇವನೊಬ್ಬ ಮೋಸಗಾರ ಎಂಬುದು ಈಗ ಸಾಬೀತಾಗಿದೆ. ಕಠಿಣ ಶಿಕ್ಷೆಯಾದಾಗಲೇ ಇಂತಹವರಿಗೆ ಜ್ಞಾನೋದಯವಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...