ಖಾಸಗಿ ಶಾಲೆ, ಸಂಸ್ಥೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪರಿಶೀಲಿಸಲು ಸಚಿವ ಶಿವರಾಜ್‌ ತಂಗಡಗಿ ಸೂಚನೆ

Date:

  • ಇಲಾಖೆಗಳ ಮುಖ್ಯಸ್ಥರ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಸಚಿವರು
  • ಕನ್ನಡ ಅನುಷ್ಠಾನದ ವಿಧೇಯಕದ ನಿಯಮ ಶೀಘ್ರ ಜಾರಿಗೆ ಸೂಚನೆ

ರಾಜ್ಯದಲ್ಲಿನ ಖಾಸಗಿ ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಪ್ರಗತಿ ಪರಿಶೀಲಿಸಿ ಶೀಘ್ರ ವರದಿ ಸಲ್ಲಿಸುವಂತೆ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ಕನ್ನಡ ಸಂಸ್ಕೃತಿ ಇಲಾಖೆ ಕೇಂದ್ರ ಕಚೇರಿ, ಕನ್ನಡ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ಕನ್ನಡ ಭಾಷೆಯ ಅಸ್ಮಿತೆ ಜೊತೆಗೆ ನಾಡು-ನುಡಿ-ಪರಂಪರೆಯ ಉಳಿವಿಗೆ ಅಗತ್ಯ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಕರೆ ನೀಡಿದರು.

ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅನುಮೋದನೆಗೊಂಡ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಿ, ಕಾಲಮಿತಿಯಲ್ಲಿ ಕಾಯ್ದೆಗಳು ರೂಪುಗೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಮಟ್ಟದ ಉತ್ಸವಗಳನ್ನು ಇನ್ನೂ ಹೆಚ್ಚು ಆಕರ್ಷಣೀಯವಾಗಿಸುವಂತೆ ರೂಪುರೇಷೆ ಸಿದ್ಧಪಡಿಸಿ ಅದನ್ನು ರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕೆಂದು ಸೂಚಿಸಿದರು. ಈ ಉತ್ಸವಗಳ ಮೂಲಕ ಪ್ರತೀ ಜಿಲ್ಲೆಯ ಜೀವಂತಿಕೆ ಉಳಿಸಬೇಕು, ಹಾಗೆಯೇ ಇದಕ್ಕೆ ಪೂರಕವಾಗಿ ಪ್ರವಾಸೋದ್ಯಮ ಇಲಾಖೆಯ ಸಹಯೋಗ ಪಡೆಯಬೇಕೆಂದು ಹೇಳಿದರು.

ಇದೇ ವೇಳೆ ಖಾಸಗಿ ಸಂಸ್ಥೆಗಳಲ್ಲಿ ಹಾಗೂ ಖಾಸಗೀ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸುವುದರ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಇಲಾಖೆಗಳು ಪರಿಶೀಲನೆ ನಡೆಸಬೇಕು. ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ದೊರಕಿಸಬೇಕಾದ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಚ್ಚು ಶ್ರಮ ವಹಿಸಬೇಕು. ಅದಕ್ಕೆ ಸರ್ಕಾರದಿಂದ ಬೇಕಾದ ಕಾನೂನಾತ್ಮಕ ನೆರವನ್ನು ಒದಗಿಸಲು ಶೀಘ್ರದಲ್ಲಿ ಸಂಬಂಧಪಟ್ಟವರ ಸಭೆ ಕರೆಯಲಾಗುವುದೆಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಬೆಂಗಳೂರು ಅಭಿವೃದ್ಧಿಗಾಗಿ ಮಾಜಿ ಮೇಯರ್‌ಗಳ ಸಲಹೆ ಪಡೆದಿರುವೆ: ಡಿಸಿಎಂ ಶಿವಕುಮಾರ್‌

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲು ಕ್ರಮವಹಿಸಲಾಗುವುದು ಎಂದ ಅವರು ತಮ್ಮ ಭೇಟಿ ವೇಳೆ ಹಾರ ತುರಾಯಿ ಬದಲು ಪುಸ್ತಕ ನೀಡಿ, ನಾನದನ್ನು ಓದುವ ಮಕ್ಕಳಿಗೆ ಅಥವಾ ಗ್ರಂಥಾಲಯಕ್ಕೆ ನೀಡುವೆ. ಇದರ ಮೂಲಕ ಪುಸ್ತಕ ಪ್ರಕಾಶಕರಿಗೆ, ಮಾರಾಟಗಾರರಿಗೆ ಹಾಗೂ ಸಾಹಿತಿಗಳಿಗೆ ನೆರವಾಗುವುದಲ್ಲದೆ ಪುಸ್ತಕೋದ್ಯಮದ ಬೆಳವಣಿಗೆಗೂ ಅನುಕೂಲವಾಗುತ್ತದೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...