ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

Date:

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ. ಗೆಲ್ಲುವ ಭರವಸೆಯನ್ನು ಹೊಂದಿದ್ದ ಕಾಂಗ್ರೆಸ್ ನಿರಾಸೆ ಅನುಭವಿಸಿದೆ.

ಅತಿ ಹಿಂದುಳಿದ ಬುಡಕಟ್ಟು ಸಮುದಾಯಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಘೋಷಿಸಿದ ಯೋಜನೆಗಳ ಜೊತೆಗೆ ಆಡಳಿತ ವಿರೋಧಿ ಅಲೆ ಮತ್ತು ಹಗರಣಗಳಿಗೆ ಸಿಲುಕಿದ ಕಾಂಗ್ರೆಸ್‌ ಬಿಜೆಪಿ ಎದುರು ನೆಲಕಚ್ಚಿದೆ.

ಮಿಷನ್ ಆದಿವಾಸಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿಯವರು ನವೆಂಬರ್ 15 ರಂದು ನಿರ್ದಿಷ್ಟವಾಗಿ ಹಿಂದುಳಿದ ಬುಡಕಟ್ಟು ಗುಂಪುಗಳನ್ನು (PVTGs) ಗುರಿಯಾಗಿಟ್ಟುಕೊಂಡು ಹೊಸ ಅಭಿವೃದ್ಧಿ ಕಾರ್ಯಕ್ರಮವನ್ನು ಆರಂಭಿಸಿದರು.

₹ 24,000 ಕೋಟಿ ಮೌಲ್ಯದ ಈ ಮಿಷನ್, ದೂರದ ಪ್ರದೇಶಗಳಲ್ಲಿನ ಸ್ಥಳೀಯ ಸಮುದಾಯಗಳಿಗೆ ರಸ್ತೆ ಅಭಿವೃದ್ಧಿ ಮತ್ತು ಸಂವಹನ, ಶಿಕ್ಷಣ, ಆರೋಗ್ಯ, ಪೋಷಣೆಯ ವಿಷಯದಲ್ಲಿ ಸೌಕರ್ಯವನ್ನು ಒದಗಿಸುವ ಗುರಿಯನ್ನು ಈ ಮಿಷನ್ ಹೊಂದಿತ್ತು.

ಹೆಚ್ಚಿದ ಬಿಜೆಪಿ ಮತ ಹಂಚಿಕೆ

ಛತ್ತೀಸ್‌ಗಢದಲ್ಲಿ ಬಿಜೆಪಿ ಸತತ ಮೂರು ವಿಧಾನಸಭಾ ಚುನಾವಣೆಗಳನ್ನು ಗೆದ್ದಿತ್ತು (2003, 2008, ಮತ್ತು 2013). ಆದರೆ ಈ ಚುನಾವಣೆಗಳಲ್ಲಿ ಶೇಕಡಾ ಒಂದಕ್ಕಿಂತ ಕಡಿಮೆ ಅಂತರದಿಂದ ವಿಜಯ ಸಾಧಿಸಿತ್ತು. ಆದರೆ 2018 ರಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಿತ್ತು. ಈ ಬಾರಿ, ಬಿಜೆಪಿ ಮತಗಳಿಕೆಯು 45.80%ರಷ್ಟಿದೆ. ಕಾಂಗ್ರೆಸ್ ಪಕ್ಷ 41.89% ಮತಗಳನ್ನು ಪಡೆದಿದೆ.

ಹಗರಣಗಳ ಸರಮಾಲೆ

ಛತ್ತೀಸಗಡ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮೊದಲು ಬಿಜೆಪಿ ಮಹತ್ತರವಾದ ಆರೋಪವನ್ನು ಮಾಡಿತು. ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ಭಾಗೇಲ್ ಅವರು ಮಹಾದೇವ್ ಆ್ಯಪ್‌ನಿಂದ ₹ 508 ಕೋಟಿ ಅನಧಿಕೃತವಾಗಿ ಪಡೆದಿದ್ದಾರೆಂದು ದೂರಿತು. ಇದರ ಜೊತೆಗೆ ಕಸ್ಟಮ್ ಮಿಲ್ಲಿಂಗ್ ಹಗರಣದಲ್ಲಿ, ರಾಜ್ಯ ಮಾರ್ಕ್‌ಫೆಡ್‌ನ ಮಾಜಿ ನಿರ್ದೇಶಕರು ಮತ್ತು ರಾಜ್ಯ ರೈಸ್ ಮಿಲ್ಲರ್ಸ್ ಅಸೋಸಿಯೇಷನ್‌ನ ಕೆಲವು ಅಧಿಕಾರಿಗಳು ಪ್ರಬಲ ವ್ಯಕ್ತಿಗಳಿಂದ ₹175 ಕೋಟಿ ಲಂಚ ಸ್ವೀಕರಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ದೂರಿತ್ತು.

ಗಣಿಗಾರಿಕೆ ಹಗರಣ

ಛತ್ತೀಸ್‌ಗಢದಲ್ಲಿ ಸಾಗಿಸುವ ಪ್ರತಿ ಟನ್ ಕಲ್ಲಿದ್ದಲಿಗೆ ಅಕ್ರಮವಾಗಿ ₹ 25 ರೂಗಳನ್ನು ಹಿರಿಯ ಅಧಿಕಾರಿಗಳು, ಉದ್ಯಮಿಗಳು, ರಾಜಕಾರಣಿಗಳು ಮತ್ತು ಮಧ್ಯವರ್ತಿಗಳನ್ನು ಒಳಗೊಂಡ ಕೂಟವು ಸಂಗ್ರಹಿಸುತ್ತಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಖನಿಜ ನಿಧಿ ಹಗರಣವನ್ನು ಕೈಗೆತ್ತಿಕೊಂಡಿತ್ತು.

ಪಿಎಸ್‌ಸಿ ಹಗರಣ

ಛತ್ತೀಸ್‌ಗಢ ಸಾರ್ವಜನಿಕ ಸೇವಾ ಆಯೋಗ (ಪಿಎಸ್‌ಸಿ) ನಡೆಸಿದ 2021 ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶವನ್ನು ಬಿಜೆಪಿ ಪ್ರಶ್ನಿಸಿತು. ಹಲವಾರು ಸರ್ಕಾರಿ ಅಧಿಕಾರಿಗಳ ಸಂಬಂಧಿಕರೇ ಆಯ್ಕೆಯಾಗಿದ್ದಾರೆಂದು ಬಿಜೆಪಿ ಆರೋಪಿಸಿತು.

ಬಿಜೆಪಿಯ ಆಕ್ರಮಣಕಾರಿ ತಂತ್ರ

ಚುನಾವಣಾ ಪ್ರಚಾರದ ಸಮಯದಲ್ಲಿ, ಬಿಜೆಪಿಯು ಭಾಗೇಲ್ ಸರ್ಕಾರದ ಭ್ರಷ್ಟಾಚಾರದತ್ತ ಕೇಂದ್ರೀಕರಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೂಪೇಶ್ ಬಘೇಲ್ ಅವರ ಸರ್ಕಾರದ ವಿರುದ್ಧ ‘ಆರೋಪ ಪತ್ರ’ ಬಿಡುಗಡೆ ಮಾಡಿದರು.

“ಬಘೇಲ್‌ ಅವರು ಹಗರಣಗಳು ಮತ್ತು ಲೂಟಿಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದ ಜನರ ವಿರುದ್ಧ ದೌರ್ಜನ್ಯ ಎಸಗಿದ್ದಾರೆ. ಛತ್ತೀಸ್‌ಗಢವನ್ನು ಗಾಂಧಿ ಕುಟುಂಬದ ಎಟಿಎಂ ಆಗಿ ಪರಿವರ್ತಿಸಿದ್ದಾರೆ. ಎಲ್ಲಾ ಭ್ರಷ್ಟಾಚಾರದ ದಾಖಲೆಗಳನ್ನು ಈ ಸರ್ಕಾರ ಮುರಿದಿದೆ” ಎಂದು ದೂರಿದರು.

ಹಗರಣಗಳು ಫಲಿತಾಂಶಗಳ ಮೇಲೆ ಪ್ರಭಾವ ಬೀರಿವೆ ಎಂದು ಸಂಪೂರ್ಣ ಖಚಿತವಾಗಿ ಹೇಳಲಾಗದಿದ್ದರೂ, ಈ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...