ಹೊಸ ಕಾನೂನುಗಳ ವಿರುದ್ಧ ಚಿದಂಬರಂ ಟೀಕೆ; ನಾವು ಅರೆಕಾಲಿಕ ವ್ಯಕ್ತಿಗಳೇ ಎಂದ ಉಪರಾಷ್ಟ್ರಪತಿ

Date:

ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಟೀಕಿಸಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರ ಹೇಳಿಕೆಗೆ ಉಪರಾಷ್ಟ್ರಪತಿ, ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿದಂಬರಂ ಅವರು ‘ಹೊಸ ಕಾನೂನುಗಳನ್ನು ವೃತ್ತಿಪರರು ರಚಿಸಿಲ್ಲ. ಅರೆಕಾಲಿಕ ವ್ಯಕ್ತಿಗಳು ರಚಿಸಿದ್ದಾರೆ’ ಎಂದು ಹೇಳಿದ್ದು, ಇದು ‘ಅವಹೇಳನಕಾರಿ, ಮಾನಹಾನಿಕರ,ಅವಮಾನಕರ ಹಾಗೂ ಅಕ್ಷ್ಯಮ್ಯ’ ಎಂದು ಧನಕರ್ ಹೇಳಿದ್ದಾರೆ. ನಾವು ಅರೆಕಾಲಿಕವೇ ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಚಿದಂಬರಂ, “ವೃತ್ತಿಪರರಲ್ಲದವರು ಹೊಸ ಕಾನೂನುಗಳನ್ನು ರಚಿಸಿರುವುದೇ ಎದುರಾಗಿರುವ ವಿರೋಧ, ಸಮಸ್ಯೆಗಳಿಗೆ ಕಾರಣ. ಅವರು ಸಮಿತಿಯ ಅರೆಕಾಲಿಕ ಸದಸ್ಯರಾಗಿದ್ದರು. ಇದಕ್ಕೆ ಕಾನೂನು ಆಯೋಗವು ಜರಡಿ ಹಿಡಿಯಬೇಕಿತ್ತು. ಈ ದೇಶದಲ್ಲಿ ಯಾವ ಪ್ರಮುಖ ಕಾನೂನನ್ನು ಕಾನೂನು ಆಯೋಗದ ಪರಾಮರ್ಶೆ ಇಲ್ಲದೆ, ಅಂಗೀಕರಿಸಲಾಗಿದೆ” ಎಂದು ಪ್ರಶ್ನಿಸಿದ್ದರು.

ತಿರುವನಂತಪುರಂನಲ್ಲಿ ನಡೆದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಅಂಡ್ ಟೆಕ್ನಾಲಜಿಯ 12ನೇ ಘಟಿಕೋತ್ಸವದಲ್ಲಿ ಮಾತನಾಡಿದ ಧನಕರ್, ಚಿದಂಬರಂ ಅವರ ಹೆಸರನ್ನು ಉಲ್ಲೇಖಿಸದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ವೇದಿಕೆಯಿಂದ ನಾನು ಅವರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಈ ಅವಹೇಳನಕಾರಿ, ಮಾನಹಾನಿಕರ ಮತ್ತು ಅತ್ಯಂತ ಅವಮಾನಕರ ಹೇಳಿಕೆಗಳನ್ನು ಹಿಂತೆಗೆದುಕೊಳ್ಳಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಬೆಳಿಗ್ಗೆ ನಾನು ಪತ್ರಿಕೆಯನ್ನು ಓದಿದಾಗ, ಈ ದೇಶದ ಹಣಕಾಸು ಸಚಿವ, ದೀರ್ಘಕಾಲ ಸಂಸದ ಮತ್ತು ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿದ್ದು ತಿಳುವಳಿಕೆಯುಳ್ಳ ವ್ಯಕ್ತಿಯ ಹೇಳಿಕೆ ನನ್ನನ್ನು ದಿಗ್ಭ್ರಮೆಗೊಳಿಸಿತು. ಈ ಸಂಸತ್ತು ಮಹತ್ತರವಾದ ಕೆಲಸವನ್ನು ಮಾಡಿದೆ ಎಂದು ನಾನು ತುಂಬಾ ಹೆಮ್ಮೆಪಡುತ್ತೇನೆ. ಯುಗಕಾಲದ ಆಯಾಮದ ಮೂರು ಕಾನೂನುಗಳನ್ನು ಜಾರಿಗೆ ತರುವ ಮೂಲಕ ಹೊಸ ಸರ್ಕಾರವು ನಮ್ಮನ್ನು ವಸಾಹತುಶಾಹಿ ಪರಂಪರೆಯಿಂದ ಹೊರತಂದಿದೆ” ಎಂದು ಅವರು ಹೇಳಿದರು.

“ಈ ಗೌರವಾನ್ವಿತ ಸಂಭಾವಿತ ವ್ಯಕ್ತಿ… ‘ಹೊಸ ಕಾನೂನುಗಳನ್ನು ಅರೆಕಾಲಿಕ ವ್ಯಕ್ತಿಗಳು ರಚಿಸಿದ್ದಾರೆ’ ಎಂದು ಹೇಳಿದ್ದಾರೆ. ನಾವು ಸಂಸತ್ತಿನಲ್ಲಿ ಅರೆಕಾಲಿಕವೇ? ಸಂಸತ್ತಿನ ಬುದ್ಧಿವಂತಿಕೆಗೆ ಅಕ್ಷಮ್ಯ ಅವಮಾನ,” ಎಂದರು.

ಸಂಸತ್ತಿನ ಸದಸ್ಯರಾಗಿರುವ ಇತರ ಹಿರಿಯ ವಕೀಲರು ತಮ್ಮ ಅಭಿಪ್ರಾಯವನ್ನು ಮಂಡಿಸಲು ಅವಕಾಶವಿದ್ದಾಗ ಮಸೂದೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ ಅವರು ಮಾತನಾಡಲಿಲ್ಲ. ತನ್ನ ಸಾಂವಿಧಾನಿಕ ಕರ್ತವ್ಯ ಮತ್ತು ಬಾಧ್ಯತೆಯನ್ನು ನಿರ್ವಹಿಸುವಲ್ಲಿ ಅವರು ವಿಫಲರಾಗಿದ್ದಾರೆ. ಈಗ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅವರ ಮಾತುಗಳಿಂದ ನಾನು ವಿವರಿಸಲಾಗದಷ್ಟು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳ ಬದಲಾಗಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ಜುಲೈ 1ರಿಂದ ಜಾರಿಗೆ ತರಲಾಗಿದೆ. ಈ ಹೊಸ ಕಾನೂನುಗಳಿಗೆ ದೇಶಾದ್ಯಂತ ವಿರೋಧ ವ್ಯಕ್ತವಾಗಿದ್ದು, ಹಲವು ರಾಜ್ಯ ಸರ್ಕಾರಗಳು ಈ ಕಾನೂನುಗಳಿಗೆ ತಮ್ಮದೇ ಆದ ತಿದ್ದುಪಡಿ ತರಲು ಮುಂದಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...