ಸಿಎಂ ಅಧಿಕಾರಾವಧಿ ವಿಚಾರ | ಎಂಬಿ ಪಾಟೀಲ್‌ಗೆ ಎಚ್ಚರಿಕೆ ನೀಡಿದ ಸಂಸದ ಡಿಕೆ ಸುರೇಶ್

Date:

  • ರಾಜ್ಯ ಕಾಂಗ್ರೆಸ್ ಶಾಂತಿ ಕದಡಿದ ಸಿಎಂ ಅಧಿಕಾರಾವಧಿ ವಿಚಾರ
  • ಶಾಸಕರ ನಡುವೆ ಪರ ವಿರೋಧ ಚರ್ಚೆ, ಬೇಡಿಕೆ ಅಸಮಾಧಾನ

ಐದು ವರ್ಷವೂ ಸಿದ್ಧಾರಾಮಯ್ಯ ಸಿಎಂ ಎಂಬ ಹೇಳಿಕೆ ನೀಡಿದ್ದ ಸಚಿವ ಎಂಬಿ ಪಾಟೀಲ್‌ಗೆ ಸಂಸದ ಡಿಕೆ ಸುರೇಶ್ ನೇರ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್, ಹೈ ಕಮಾಂಡ್ ವಲಯದಲ್ಲಾಗಿರುವ ನಿರ್ಧಾರದ ಬಗ್ಗೆ ಈಗ ಚರ್ಚೆ ಬೇಡ. ಈ ವಿಷಯದಲ್ಲಿ ಎಂಬಿ ಪಾಟೀಲ್ ಅವರಿಗೆ ತೀಕ್ಷ್ಣವಾಗಿ ಉತ್ತರ ಕೊಡಬಲ್ಲೆ, ಎಚ್ಚರಿಕೆಯನ್ನೂ ಕೊಡಬಲ್ಲೆ. ಆದರೆ ಈಗಲೇ ಅದೆಲ್ಲ ಬೇಡ ಎಂದರು.

ಹಾಗೆಯೇ ಮಾಧ್ಯಮದವರ ಮೂಲಕ ಎಂಬಿ ಪಾಟೀಲ್ ಗೆ ಸಂದೇಶ ನೀಡಿದ ಸಂಸದ ಸುರೇಶ್, ಎಂಬಿ ಪಾಟೀಲ್‌ಗೆ ಹೇಳಿ, ಇವೆಲ್ಲವು ಬೇಡ ಎಂದು. ಈ ವಿಚಾರದಲ್ಲಿಅವರಿಗೆ ಹೆಚ್ಚಿನ ಮಾಹಿತಿ ಬೇಕು ಅಂದರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಬಳಿ ಮಾತನಾಡಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆ ನಡುವೆಯೇ ಡಿಸಿಎಂ ಶಿವಕುಮಾರ್ ಅವರಿಗೂ ಸಿಎಂ ಸ್ಥಾನ ಕೊಡುವಂತೆ ಕುಣಿಗಲ್ ಶಾಸಕ ರಂಗನಾಥ್ ಪಕ್ಷ ಪ್ರಮುಖರನ್ನು ಆಗ್ರಹಿಸಿದರು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೋಡೆತ್ತುಗಳಂತೆ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ.

ಅದೇ ರೀತಿ ಕಾಂಗ್ರೆಸ್ ಇಷ್ಟು ಬಹುಮತ ಬರಲು ಡಿಕೆ ಶಿವಕುಮಾರ್ ಅವರ ಪಾತ್ರ ಕೂಡ ದೊಡ್ಡದಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಅವಕಾಶವನ್ನ ಕೊಡಿ ಎಂದರು.

ಈ ಸುದ್ದಿ ಓದಿದ್ದೀರಾ?:ಐದು ವರ್ಷ ಸಿಎಂ ಸಿದ್ದರಾಮಯ್ಯ | ವರಿಷ್ಠರು ಹೇಳಿದ್ದನ್ನೇ…

ನಾನು ಈ ಹಿಂದೆಯೂ ಈ ಮಾತನ್ನು ಹೇಳಿ, ಪ್ರಮುಖರನ್ನು ಆಗ್ರಹಿಸಿದ್ದೆ, ಈಗಲೂ ಅದನ್ನೇ ಹೇಳುತ್ತಿದ್ದೇನೆ. ಕಾಂಗ್ರೆಸ್ ಒಂದು ಸಮುದ್ರ ಇದ್ದಂತೆ. ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸಿಎಂ ಆಗಲು ಅವಕಾಶ ಮಾಡಿಕೊಡುತ್ತದೆ ಅನ್ನೋ ವಿಶ್ವಾಸ ಇದೆ ಎಂದು ರಂಗನಾಥ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...