ಚಿಕ್ಕಬಳ್ಳಾಪುರ ಲೋಕಸಭೆ | ಸುಮಲತಾ ಅಂಬರೀಷ್‌ಗೆ ಟಿಕೆಟ್ ಚರ್ಚೆ, ಸ್ಥಳೀಯ ನಾಯಕರಿಂದ ವಿರೋಧ

Date:

ಒಕ್ಕಲಿಗ ಮತಗಳೆ ನಿರ್ಣಾಯಕವಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸುಮಲತಾ ಅಂಬರೀಷ್‌ಗೆ ಟಿಕೆಟ್ ನೀಡಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದು, ಸ್ಥಳೀಯ ನಾಯಕರನ್ನು ಕೆರಳುವಂತೆ ಮಾಡಿದೆ. ಈ ಹಿಂದಿನಿಂದ ಪಕ್ಷ ಸಂಘಟಿಸಿ ಪಕ್ಷಕ್ಕಾಗಿ ದುಡಿದ ಸ್ಥಳೀಯ ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ.

ಈ ಹಿಂದೆ ಮಂಡ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ವಿರುದ್ಧ ಶಕ್ತಿ ಪ್ರದರ್ಶಿಸಿ ಜಯಗಳಿಸಿದ್ದ ಮೊದಲ ಪಕ್ಷೇತರ ಮಹಿಳಾ ಸಂಸದೆ ಸುಮಲತಾ ಅಂಬರೀಷ್‌ ಅವರನ್ನು ದಿಲ್ಲಿಗೆ ಬುಲಾವ್ ಮಾಡಿರುವ ಬೆನ್ನಲ್ಲೇ ಸುಮಲತಾ ದಿಲ್ಲಿ ನಾಯಕರನ್ನು ಭೇಟಿ ಮಾಡಿದ್ದಾರೆ. ಬಹುತೇಕ ಸುಮಲತಾ ಅವರಿಗೆ ಬಿಜೆಪಿ ಟಿಕೆಟ್ ಖಚಿತ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿವೆ.

ಒಕ್ಕಲಿಗ ಸಮುದಾಯದ ಪರಾಜಿತ ಅಭ್ಯರ್ಥಿ ಡಾ.ಕೆ.ಸುಧಾಕರ್ ಈ ಬಾರಿ ಟಿಕೆಟ್ ನನಗೆ ದೊರೆಯಲಿದೆ ಎಂದು ಈಗಾಗಲೇ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಕ್ಷೇತ್ರ ಪರ್ಯಟನೆಯನ್ನು ಶುರು ಮಾಡಿದ್ದಾರೆ. ಅದೇ ಸಮುದಾಯದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೂಡ ತನ್ನ ಮಗನ ರಾಜಕೀಯ ಭವಿಷ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಟೊಂಕಕಟ್ಟಿ ನಿಂತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವ ಡಾ ಕೆ ಸುಧಾಕರ್‌ಗೆ ಪಕ್ಷದಲ್ಲಿ ಪ್ರಬಲ ಬೆಂಬಲ ಸಿಗದಾಗಿದೆ. ಅಧಿಕಾರದಲ್ಲಿದ್ದಾಗ ಸುಧಾಕರ್ ಅವರ ಹಿಟ್ಲರ್ ವರ್ತನೆ ಮುಖಂಡರ ಬೇಸರಕ್ಕೆ ಕಾರಣವಾಗಿದೆ. ಸ್ವಪಕ್ಷೀಯರಲ್ಲೆ ವಿರೋಧಿ ಅಲೆ ಎದ್ದಿದೆ. ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಸುಮಾರು 25ಕೋಟಿ ರೂಪಾಯಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪಗಳು ಸಹ ಸುಧಾಕರ್ ಮೇಲಿವೆ. ರಾಜ್ಯಮಟ್ಟದ ಸುದ್ದಿಸಂಸ್ಥೆಗಳು ಸಚಿವರ ಹಗರಣ ಕುರಿತು ಸುದ್ದಿ ಬಿತ್ತರಿಸಿದ್ದವು.

ಇದೆಲ್ಲ ಗೊತ್ತಿದ್ದರೂ ಮತ ನೀಡುವಷ್ಟು ಜನ ದಡ್ಡರಲ್ಲ ಎಂಬುದನ್ನು ಮನಗಾಣಬೇಕಿದೆ. ಅದಲ್ಲದೆ ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್.ಅರ್.ವಿಶ್ವನಾಥ್ ನಡುವಿನ ತಿಕ್ಕಾಟಕ್ಕೆ ಜನರು ರೋಸಿಹೋಗಿದ್ದಾರೆ. ಹಾಗಾಗಿಯೇ ವರಿಷ್ಠರು ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಇರಾದೆ ಹೊಂದಿದ್ದಾರೆ ಎಂದರು ತಪ್ಪಾಗಲಾರದು.

ಈಗಾಗಲೇ 20 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿ ಸೋಲು ಗೆಲುವಿನ ಲೆಕ್ಕಾಚಾರ ಹಾಕಿ ಟಿಕೆಟ್ ನೀಡಿದೆ. ಹಲವೆಡೆ ಬಿಜೆಪಿಯ ಬಹುನಿರೀಕ್ಷಿತ ಅಭ್ಯರ್ಥಿಗಳಿಗೆ ಟಿಕೆಟ್ ಕೈತಪ್ಪಿಸಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 1.80ಲಕ್ಷ ಬಲಿಜ ಸಮುದಾಯದ ಮತಗಳನ್ನು ಹೊಂದಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅದೇ ಸಮುದಾಯದ ಸುಮಲತಾ ಅವರನ್ನು ತಂದರೆ ಸಮುದಾಯದ ಬೆಂಬಲ ಸಿಗಬಹುದು. ಜತೆಗೆ ಒಕ್ಕಲಿಗ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳಬಹುದು ಎಂಬುದು ಬಿಜೆಪಿ ವರಿಷ್ಠರ ಗೆಲುವಿನ ಲೆಕ್ಕಾಚಾರ ಇದ್ದಂತಿದೆ.

ಆದರೆ, ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿ ರಕ್ಷಾ ರಾಮಯ್ಯ ಸಹ ಬಲಿಜ ಸಮುದಾಯದವರೆ ಆಗಿರುವುದರಿಂದ ಸಹಜವಾಗಿ ಸಮುದಾಯದ ಬೆಂಬಲ ಸಿಗಲಿದ್ದು, 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರೇ ಇರುವ ಕಾರಣ ಎಲ್ಲಾ ಕ್ಷೇತ್ರಗಳಲ್ಲೂ ಪ್ರಬಲ ಬೆಂಬಲ ದೊರೆತರೆ ಗೆಲುವು ನಿಶ್ಚಿತ ಎಂದೇ ಹೇಳಬಹುದು.
ಆದರೆ, ಜಿಲ್ಲೆಯ ಜನರಲ್ಲಿ ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ತರುವ, ರಾಜಕೀಯ ಮುಖಂಡರಿಗೆ, ಗುತ್ತಿಗೆದಾರರಿಗೆ ಉತ್ತಮ ಆರ್ಥಿಕ ಲಾಭ ಮಾಡಿಕೊಡುವ ಅಭ್ಯರ್ಥಿಯನ್ನು ನಿರೀಕ್ಷೆ ಇರುವುದು ಸಹಜ. ಆ ಲೆಕ್ಕಾಚಾರದಲ್ಲಿ ಹೊರಗಿನವರಾದ, ಕ್ಷೇತ್ರದ ಪರಿಚಯ ಇಲ್ಲದ ಸುಮಲತಾ ಅವರಿಗೆ ಕ್ಷೇತ್ರವನ್ನು ದಕ್ಕಿಸಿಕೊಳ್ಳುವುದು ತುಸು ಕಷ್ಟ ಆಗಬಹುದು.

ಬಿಜೆಪಿಯಲ್ಲಿ ಒಕ್ಕಲಿಗರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇದು ಮುಂದುವರಿದರೆ ಸಮುದಾಯ ನಿಮ್ಮ ಬೆಂಬಲಕ್ಕೆ ನಿಲ್ಲುವುದಿಲ್ಲ. 28 ಕ್ಷೇತ್ರಗಳ ಪೈಕಿ ಮಿಕ್ಕುಳಿದಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಾದರೂ ಸ್ಥಳಿಯವಾಗಿರುವ ಒಕ್ಕಲಿಗ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಕೋನಪ್ಪ ರೆಡ್ಡಿ ಸಮುದಾಯದ ಒತ್ತಾಸೆಯನ್ನು ಈಗಾಗಲೇ ಬಿಚ್ಚಿಟ್ಟಿದ್ದಾರೆ. ಆದ್ದರಿಂದ ಸ್ಥಳೀಯರಿಗೆ ಆದ್ಯತೆ ನೀಡದಿದ್ದರೆ ಒಕ್ಕಲಿಗರ ವಿರೋಧ ಗ್ಯಾರಂಟಿ.

ಹೊರಗಿನವರಿಗೆ ನಾಯಕರ ವಿರೋಧ

ಸುಧಾಕರ್ ಅಥವಾ ನನ್ನ ಮಗ ಅಲೋಕ್ ಇಬ್ಬರಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಪರವಾಗಿಲ್ಲ. ಆದರೆ ಹೊರಗಿನವರಿಗೆ ಟಿಕೆಟ್ ಕೊಡಬೇಡಿ ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಸುಮಲತಾ ಬರುವಿಕೆಗೆ ನೇರವಾಗಿಯೇ ವಿರೋಧ ವ್ಯಕ್ತಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿರುವ ಸುಧಾಕರ್ ಗೆ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್ ನತ್ತ ಮುಖ ಮಾಡುವ ಸಾಧ್ಯತೆಗಳು ಇವೆ. ಇದರಿಂದ ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರದ ಗೆಲುವು ಅಸಾಧ್ಯವಾಗಲಿದೆ.

?s=150&d=mp&r=g
ವಿಜಯ್ ಕುಮಾರ್ ಗಜ್ಜರಹಳ್ಳಿ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...