ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

Date:

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ ಹೋಗಿರುವುದು ಕರ್ನಾಟಕ ಸರ್ಕಾರ ತಲೆತಗ್ಗಿಸಬೇಕಾದ ವಿಚಾರ. ದೆಹಲಿಗೆ ಹೋಗುವ ಮೂಲಕ “ನಮಗಿಲ್ಲ ನ್ಯಾಯ ಸಿಗುವುದಿಲ್ಲ” ಎಂಬ ಅವರ ಘೋಷಣೆ ರಾಜ್ಯ ಸರ್ಕಾರಕ್ಕೆ ಮಾಡಿ ವಕಪಾಳ ಮೋಕ್ಷವಿದ್ದಂತೆ. ಇದಕ್ಕೆ ಕಾರಣವಾಗಿರುವ ಕರ್ನಾಟಕದ ಕ್ಯಾಬಿನೆಟ್ ಒಮ್ಮೆ ಮುಟ್ಟಿ ನೋಡಿಕೊಳ್ಳಬೇಕು.

ಕೊನೆ ಭರವಸೆಯಾಗಿ ಅಲೆಮಾರಿಗಳು ತನ್ನನ್ನು ಹುಡುಕಿ ಬಂದಿದ್ದಾರೆ, ಅವರ ನಿರೀಕ್ಷೆಯನ್ನು ಹುಸಿಗೊಳಿಸಬಾರದು ಎಂಬ ವಾಸ್ತವವನ್ನು ರಾಹುಲ್ ಗಾಂಧಿಯವರು ಗಂಭೀರವಾಗಿ ಅರ್ಥಮಾಡಿಕೊಳ್ಳಬೇಕು. ಕೂಡಲೇ ಕರ್ನಾಟಕದ ಕ್ಯಾಬಿನೆಟ್ಟಿಗೆ ಕಿವಿಹಿಂಡಿ ಅವರು ಮಾಡಿರುವ ತಪ್ಪನ್ನು ಮನವರಿಕೆ ಮಾಡಿಸಬೇಕು.

‘ಅಲೆಮಾರಿಗಳಿಗೆ ನ್ಯಾಯ ಸಿಗಬೇಕಾದರೆ ಜಾತಿ ಜನಗಣತಿ ತನಕ ಕಾಯಬೇಕು’ ಎಂಬಂತಹ “ನಾಳೆ ಬಾ” ಉತ್ತರವನ್ನು ನೀಡದೆ 1% ಮೀಸಲಾತಿಯನ್ನು ಕೂಡಲೇ ಜಾರಿಮಾಡುವ ಧೃಡ ತೀರ್ಮಾನವನ್ನು ತೆಗೆದುಕೊಳ್ಳಬೇಕು. ಪರಿಶಿಷ್ಟ ಜಾತಿಗಳಿಗೆ ನಿಗದಿಯಾಗಿರುವ ಶೇ. 17 ಮೀಸಲಾತಿಯನ್ನು ಶೇ. 18 ಕ್ಕೆ ಏರಿಸುವ ಮೂಲಕ ಈ ಸಮಸ್ಯೆಯನ್ನು ಇತ್ಯಾರ್ಥಪಡಿಸಬೇಕು. ಅಲ್ಲದೆ ಅಲೆಮಾರಿ ಸಮುದಾಯಗಳ ವಸತಿ, ಉದ್ಯೋಗ, ಶಿಕ್ಷಣ, ಪ್ರಾತಿನಿಧ್ಯ ಹಾಗೂ ಮೂಲಭೂತ ಸೌಕರ್ಯಗಳನ್ನು ಖಾತ್ರಿಪಡಿಸಲು ಸಮಗ್ರ ಪರಿಣಾಮಕಾರಿ ಪ್ಯಾಕೇಜನ್ನು ಘೋಷಣೆ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲೆಮಾರಿಗಳ ಹೋರಾಟದ ಜೊತೆ ನಾವೆಲ್ಲರೂ ಇದ್ದೇವೆ. ಕರ್ನಾಟಕ ಸರ್ಕಾರದ ನಡತೆಯನ್ನು ಆಳವಾದ ನೋವಿನ ಜೊತೆ ಖಂಡಿಸುತ್ತಿದ್ದೇವೆ. ಇನ್ನೂ ಕಾಯಿಸದೆ ರಾಹುಲ್ ಗಾಂಧಿಯವರು ಅಲೆಮಾರಿ ಪ್ರತಿನಿಧಿಗಳನ್ನು ಭೇಟಿಯಾಗಿ ಸಮಸ್ಯೆಯನ್ನು ಬಗೆಹರಿಸಿ ವಾಪಾಸ್ ಕಳುಹಿಸಬೇಕೆಂದು ನಾಗರೀಕರಾದ ನಾವು ಬಲವಾಗಿ ಒತ್ತಾಯಿಸುತ್ತಿದ್ದೇವೆಂದು ಎದ್ದೇಳು ಕರ್ನಾಟಕ ಸದಸ್ಯರಾದ ಸುರೇಶ್ ಗಡಿಕಲ್ ಈದಿನ. ಕಾಮ್ ಗೆ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l 17 ವರ್ಷದ ಬಾಲಕನ ಮೇಲೆ ಹಲ್ಲೆ; ಆರೋಪಿಗಳನ್ನು ಬಂಧಿಸುವಂತೆ ಎಸ್‌ಡಿಪಿಐ ಆಗ್ರಹ

1.ಸಾರ್ಮಾಕ ನ್ಯಾಯ’ ಬರಿ ಮಾತಿನಲ್ಲಿ ಅಲ್ಲ, ನಿಮ್ಮ ಕೃತಿಯಲ್ಲಿ ಕಾಣುವಂತಾಗಲಿ 2.ರಾಹುಲ್ ಗಾಂಧಿವರು ಕರ್ನಾಟಕ ಸರ್ಕಾರದ ಕ್ಯಾಬಿನೆಟ್ಟಿಗೆ ಕಿವಿ ಹಿಂಡಿ ಬುದ್ದಿ ಹೇಳಲಿ. 3.ದೆಹಲಿಯಲ್ಲಿಯೇ ಹೋರಾಟ ಮುಂದುವರಿಸಿರುವ ಅಲೆಮಾರಿ ಬಂಧುಗಳು ನ್ಯಾಯಪಡೆದು ಮರಳುವಂತಾಗಲಿ. 4.ಅಲೆಮಾರಿ ಸಮುದಾಯಗಳಿಗೆ ಅವರ ನ್ಯಾಯಸಮ್ಮತ 1% ಮೀಸಲಾತಿ ಕೂಡಲೇ ಜಾರಿಯಾಗಲೀ, ಅವರ ಸಮಗ್ರ ಅಭಿವೃದ್ಧಿಗೆ ಪರಿಣಾಮಕಾರಿ ಪ್ಯಾಕೇಜ್ ಘೋಷಣೆಯಾಗಲಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...