ಚಿಕ್ಕಮಗಳೂರು | KPS ಮ್ಯಾಗ್ನೆಟ್ ಯೋಜನೆ ಕೈಬಿಡದಿದ್ದರೆ ರಾಜ್ಯವ್ಯಾಪಿ ಹೋರಾಟ; AIDSO ಎಚ್ಚರಿಕೆ

Date:

KPS ಮ್ಯಾಗ್ನೆಟ್‌ ಹೆಸರಿನಲ್ಲಿ ತಂದಿರುವ ಯೋಜನೆಯನ್ನು ಸರ್ಕಾರ ಕೂಡಲೇ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಾಗುವುದು ಎಂದು AIDSO (All India Democratic Students’ Organization) ಎಚ್ಚರಿಸಿದೆ.

ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯಡಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 KPS ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ. ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500 ಶಾಲೆಗಳನ್ನು ಗುರುತಿಸಿ ಆದೇಶ ಹೊರಡಿಸಲಾಗಿದೆ. ತಾಲೂಕು ಒಂದರಲ್ಲೇ 237 ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಪಟ್ಟಿ ಮಾಡಲಾಗಿದೆ. 226 ಗ್ರಾ.ಪಂ ಶಾಲೆಗಳಿಗೆ 1002 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ನೂರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲು ತಯಾರಾಗಿದ್ದಾರೆ. ಇದರಿಂದ ಸಾವಿರಾರು ಬಡ ಮಕ್ಕಳ ಶಿಕ್ಷಣವನ್ನು ಕಸಿಯಲು ಮುಂದಾಗಿದೆ ಎಂದು ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಈ ಯೋಜನೆಯನ್ನು Pilot project ಅಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ, 77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, 82 ದೊಡ್ಡಿ ಶಾಲೆ, 31 ಅಮ್ಮಳ್ಳಿ ದೊಡ್ಡಿ ಶಾಲೆ, 100 ಸಂತೆಮೊಗೇನಹಳ್ಳಿ ಶಾಲೆ, 20 ಮೊಗೇನಹಳ್ಳಿ ದೊಡ್ಡಿ, 80 ವಿದ್ಯಾರ್ಥಿಗಳಿರುವ ಸುಣ್ಣಘಟ್ಟ ಶಾಲೆಗಳನ್ನು ಹೊಂಗನೂರಿನ  KPSಗೆ ತುರ್ತಾಗಿ ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಕಾರಣಕ್ಕೂ ತಮ್ಮ ಊರಿನ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಮತ್ತು ಅದೇ ಶಾಲೆಗಳನ್ನು ಅಭಿವೃದ್ಧಿಪಡಿಸಿ ಊರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕೆಂದು ಸುತ್ತ ಹಳ್ಳಿಗಳ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಇದೇ ರೀತಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ 40,000ಕ್ಕೂ ಅಧಿಕ ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯ, ಹಳ್ಳಿಗಳ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ. ಹಾಗೆಯೇ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದು ಸುಭಾಷ್ ಆರೋಪಿಸಿದರು.

ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಇತರ ಕೆಲಸಗಳಿಗೆ ವಿನಿಯೋಗಿಸಲು ಸರ್ಕಾರವು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸುವುದಾಗಿ ಹೇಳಿತ್ತು. ಪ್ರತಿಷ್ಠಿತ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಸರ್ಕಾರಿ ಶಾಲಾ ಕಟ್ಟಡಗಳನ್ನು ಸ್ವಸಹಾಯ ಗುಂಪುಗಳಿಗೆ ನೀಡಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಒಂದೇ ಒಂದು ಶಾಲೆಯನ್ನು ಮುಚ್ಚದಿದ್ದ ಮೇಲೆ ಸರ್ಕಾರಿ ಶಾಲೆಗಳನ್ನು ಬೇರೆ ಉದ್ದೇಶಕ್ಕೆ ವಿನಿಯೋಗಿಸುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ? ಹಾಗೆಯೇ, ಈ ದೇಶದಲ್ಲಿ ಶಿಕ್ಷಣಕ್ಕಾಗಿ ಧ್ವನಿಯೆತ್ತಿದ ಮಹಾನ್ ನವೋದಯ ಚಿಂತಕ ಈಶ್ವರ್ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಸಾವಿತ್ರಿಬಾಯಿ ಫುಲೆ  ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ನಮ್ಮ ನಾಡಿನ ಕುವೆಂಪು, ಕುದ್ಮುಲ್ ರಂಗರಾವ್, ಪಂಡಿತ್ ತಾರಾನಾಥ್ ಮುಂತಾದ ಮಹನೀಯರ ಹೆಸರುಗಳನ್ನು ಶಾಲೆಗೆ ಇಡಲಾಗುತ್ತಿತ್ತು. ಈಗ ಹಣ ಕೊಟ್ಟು ಯಾರು ಕಟ್ಟಡ ನಿರ್ಮಿಸುತ್ತಾರೋ ಅಂತಹ ವ್ಯಕ್ತಿಗಳ ಹೆಸರಿಡುತ್ತಿದ್ದಾರೆಂದು ಎಐಡಿಎಸ್ಒ ಸಂಚಾಲಕಿ ಚೈತ್ರ ಆರೋಪಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಎಸ್ಪಿ ವಿಕ್ರಂ ಅಮಟೆ ವರ್ಗಾವಣೆ; ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

ನಾಡಿನ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿ ಜನತೆಗೆ ಸರ್ಕಾರವು ಸವಾಲು ಎಸಗಿದೆ. ಇತಿಹಾಸದ ಎಲ್ಲ ಮಹಾನ್ ವ್ಯಕ್ತಿಗಳ ಕರೆಗೆ ಓಗೊಟ್ಟು ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟಕ್ಕೆ ಮುಂದಾಗುವಂತೆ ಹೋರಾಟಕ್ಕೆ ಕರೆ ನೀಡಲಾಗಿದೆ. ಈ ವೇಳೆ AIDSO ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಸಂಚಾಲಕಿ ಚೈತ್ರ ಹಾಗೂ ಸಹಸಂಚಾಲಕಿ ಸುಷ್ಮಾ ಉಪಸ್ಥಿತರಿದ್ದರು.

ಚಿಕ್ಕಮಗಳೂರಿನ ಹಳ್ಳಿ ಹಳ್ಳಿಗಳಲ್ಲೂ ಈ ಹೋರಾಟ ಮುಂದುವರೆಯುತ್ತದೆ. ನಿಮ್ಮ ಹಳ್ಳಿಯಲ್ಲೂ ಸರ್ಕಾರಿ ಶಾಲೆ ಮುಚ್ಚುತ್ತಿದ್ದರೆ ತಪ್ಪದೆ ಈ ಕೆಳಗಿನ ನಂಬರನ್ನು ಸಂಪರ್ಕಿಸಿ ಮಾಡಿ. ( ಚೈತ್ರ-8088548485)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...