ಚಿಕ್ಕೋಡಿ | ಅಕ್ಕ ಪ್ರಿಯಾಂಕಾ ಬೆನ್ನಿಗೆ ನಿಂತ ತಮ್ಮ ರಾಹುಲ್, ʼಗೆಲುವು ಅಕ್ಕಂದೆʼ ಎನ್ನುತ್ತಿರುವ ಕಾರ್ಯಕರ್ತರು

Date:

ಹೆಣ್ಣಿನ ಜನುಮಕ್ಕೆ ಅಣ್ಣ ತಮ್ಮರು ಬೇಕು
ಬೆನ್ನು ಕಟ್ಟುವರು ಸಭೆಯೊಳಗೆ
ಬೆನ್ನು ಕಟ್ಟುವರು ಸಭೆಯೊಳಗೆ ಸಾವಿರ ಹೊನ್ನು ಕಟ್ಟುವರು ಉಡಿಯೊಳಗೆ…

ಜಾನಪದರು ಕಟ್ಟಿದ ಈ ಹಾಡು ಸಹೋದರ ಸಹೋದರಿಯರ ನಡುವಿನ ಸಹೋದರತ್ವ ಬಾಂಧವ್ಯ  ಎಂತಹುದು ಮತ್ತು ಸಹೋದರಿಯ ಪ್ರತಿ ಯಶಸ್ಸಿನ ಹಿಂದಿನ ಅಣ್ಣ ತಮ್ಮಂದಿರ ಪಾತ್ರದ ಪ್ರಾಮುಖ್ಯತೆಯನ್ನು ತಿಳಿಸುತ್ತದೆ.

ಜಾನಪದದ ಈ  ಪದ್ಯದ ಸಾಲುಗಳಂತೆ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ  ಸಚಿವ ಸತೀಶ ಜಾರಕಿಹೊಳಿಯವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದು, ಅಕ್ಕಾ ಪ್ರಿಯಾಂಕಾ ಬೆನ್ನಿಗೆ ತಮ್ಮ ರಾಹುಲ್ ನಿಂತಿದ್ದು ಇಬ್ಬರೂ  ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಅಕ್ಕನ ಗೆಲುವಿಗಾಗಿ ಸಹೋದರ ರಾಹುಲ್ ಜಾರಕಿಹೊಳಿ ಅಕ್ಕನೊಟ್ಟಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿದ್ದು ಅಕ್ಕ ತಮ್ಮನ ಪ್ರಚಾರದ ವೈಖರಿಗೆ ಭೇಷ್ ಎನ್ನುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಕಾರ್ಯಗಳಲ್ಲೂ ಅಕ್ಕಾ ತಮ್ಮ ಒಟ್ಟಿಗೆ

ಪ್ರಿಯಾಂಕಾ ಮತ್ತು ರಾಹುಲ್ ಕೇವಲ ರಾಜಕೀಯ ಮಾತ್ರವಲ್ಲದೆ ಅನೇಕ ಸಾಮಾಜಿಕ ಕಾರ್ಯಗಳಲ್ಲಿಯೂ ಸಹ ಒಟ್ಟಾಗಿ ಕೆಲಸ ಮಾಡಿದ್ದಾರೆ ಸತೀಶ ಜಾರಕಿಹೊಳಿ ಫೌಂಡೇಶನ್ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಒಟ್ಟಿಗೆ ಮಾಡಿ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದಾರೆ ನೆರೆ ಪ್ರವಾಹದ ಸಂದರ್ಭಗಳಲ್ಲಿ ಇಬ್ಬರೂ ಒಟ್ಟಾಗಿ ಪ್ರವಾಹ ಸಂತ್ರಸ್ತರೊಂದಿಗೆ ಜೊತೆಯಾಗಿ ನಿಂತಿದ್ದಾರೆ.

ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಬಲಾಬಲ

ಚಿಕ್ಕೋಡಿ ಲೋಕಸಭೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿದ್ದು, 3 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಬಿಜೆಪಿ ಪಕ್ಷದಿಂದ ಎರಡನೇ ಬಾರಿ ಅಣ್ಣಾ ಸಾಹೇಬ್ ಜೊಲ್ಲೆಯವರು ಸ್ಪರ್ಧಿಸಿದ್ದು ಹಾಗೂ ಸತೀಶ ಜಾರಕಿಹೋಳಿ, ಲಕ್ಷ್ಮಣ ಸವದಿ, ಪ್ರಕಾಶ ಹುಕ್ಕೇರಿಯಂತಹ ಘಟಾನುಘಟಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿದ್ದಾರೆ. ಅದೇ ರೀತಿ ರಮೇಶ ಕತ್ತಿ ಮತ್ತು ಶಶಿಕಲಾ ಜೊಲ್ಲೆಯವರ ವರ್ಚಸ್ಸು ಬಿಜೆಪಿಗೆ ಲಾಭವಾಗಬಹುದಾದರು ರಮೇಶ್ ಕತ್ತಿ ಅಭಿಮಾನಿಗಳು ಲೋಕಸಭಾ ಟಿಕೆಟ್ ರಮೇಶ್ ಕತ್ತಿಯವರಿಗೆ ನೀಡದಿರುವುದಕ್ಕೆ  ಮುನಿಸಿಕೊಂಡಿದ್ದು ಬಿಜೆಪಿಗೆ ನಷ್ಟವನ್ನುಂಟು ಮಾಡಬಹುದಾಗಿದೆ.

ಚಿಕ್ಕೋಡಿ ಲೋಕಸಭಾ ಜಾತಿ ಲೆಕ್ಕಾಚಾರ

ಚಿಕ್ಕೋಡಿ ಲೋಕಸಭಾ ಕ್ಷೇತ್ರದದಲ್ಲಿ ಒಟ್ಟು 17,41,758 ಮತದಾರರಿದ್ದು ಲಿಂಗಾಯತ ಮತ್ತು ಅಹಿಂದ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ.

ಕಿರಿಯ ವಯಸ್ಸಿನ ಸಂಸದೆಯಾಗಿ ಇತಿಹಾಸ ಸೃಷ್ಟಿಸುವರೆ

17ನೇ ಲೋಕಸಭಾ ಚುನಾವಣೆಯಲ್ಲಿ ಒಡಿಶಾದ 25ರ ಹರೆಯದ ಚಂದ್ರಾನಿ ಮರ್ಮು ಬಿಜೆಡಿ ಪಕ್ಷದಿಂದ ಗೆದ್ದು ಇತಿಹಾಸ ಸೃಷ್ಟಿಸಿದ್ದರು. ಅದರಂತೆ ಕರ್ನಾಟಕದಿಂದ ಚಿಕ್ಕೋಡಿ ಲೋಕಸಭೆಗೆ 27 ವಯಸ್ಸಿನ ಪ್ರಿಯಾಂಕಾ ಜಾರಕಿಹೊಳಿಯವರು ಗೆದ್ದು ಕಿರಿಯ ವಯಸ್ಸಿನ ಸಂಸದರ ಸಾಲಿಗೆ ಸೇರ್ಪಡೆಯಾಗುವರೇ ಎಂದು ಕಾದು ನೋಡಬೇಕಾಗಿದೆ.

ರಾಜಕೀಯ ಲೆಕ್ಕಾಚಾರಗಳೇನಾದರೂ ಇರಲಿ, ಅಕ್ಕನ ಬೆನ್ನಿಗೆ ತಮ್ಮ ನಿಂತಿದ್ದು ನೋಡಿ ಕಾಂಗ್ರೆಸ್ ಕಾರ್ಯಕರ್ತರು ಮಾತ್ರ ಇವರಿಬ್ಬರೂ ಒಟ್ಟಾಗಿ ನಿಂತರೆ ಗೆಲುವು ಅಕ್ಕಂದೆ ಎನ್ನುತ್ತಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...