ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ಮತ್ತು ಮಾನವ ಸಂಘರ್ಷ, ಕಾಫಿ ತೋಟದಲ್ಲಿ ಕಾರ್ಮಿಕ ಕೆಲಸ ಮಾಡುವ ವೇಳೆ ಕಾಡಾನೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಹ್ಯಾರಂಬಿಪುರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಮೃತ ವ್ಯಕ್ತಿ ಹಾವೇರಿ ಮೂಲದ ಯಲ್ಲಪ್ಪ ಎಂಬುವವರು. ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ತೋಟದ ಮಾಲೀಕ ನಾಗೇಶ್ ಗೌಡ ಎಂಬುವವರ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯಲ್ಲಪ್ಪ, ಕಾಡಾನೆ ಏಕಏಕಿಯಾಗಿ ದಾಳಿ ಮಾಡಿದೆ. ಕಾರ್ಮಿಕ ಯಲ್ಲಪ್ಪ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಈ ಘಟನೆ ಕುರಿತು ಬಾಳೆಹೊನ್ನೂರು ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | 7ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು
ಈ ಘಟನೆ ಕುರಿತು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯಿಂದ ಗ್ರಾಮಸ್ಥರು, ಮಲೆನಾಡಿನ ಜನರು ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.





