ಬಾಲ್ಯ ವಿವಾಹ | ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಳವಳ

Date:

ಬಾಲ್ಯ ವಿವಾಹ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ದುರದೃಷ್ಟಕರ ಬೆಳವಣಿಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, “ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಯಾಗಿ, ನನಗೂ ತಲೆ ತಗ್ಗಿಸುವ ವಿಚಾರವಿದು. ಬಾಲ್ಯ ವಿವಾಹದಲ್ಲಿ ಬಳ್ಳಾರಿ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಹಾಗೂ ಬೆಳಗಾವಿ ಎರಡನೇ ಸ್ಥಾನದಲ್ಲಿದೆ ಎಂದು ಹೇಳಲೂ ನಾಚಿಕೆ ಆಗುತ್ತದೆ” ಎಂದರು.

“ಬಾಲಕಿಯರು ಗರ್ಭಿಣಿಯಾಗುವುದನ್ನು ಹಾಗೂ ಬಾಲ್ಯವಿವಾಹವನ್ನು ಬೇರು ಮಟ್ಟದಿಂದ ಹೋಗಲಾಡಿಸಲು ಕ್ರಮ ವಹಿಸುತ್ತೇವೆ. ಇದಕ್ಕೆಲ್ಲ ನಮ್ಮ ಇಲಾಖೆಯಲ್ಲಿರುವ ದೋಷಗಳು‌ ಮಾತ್ರ ಕಾರಣವಲ್ಲ. ಸ್ಥಳೀಯ ಗ್ರಾಮ ಪಂಚಾಯಿತಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಎಸ್‌ಡಿಎಂಸಿಗಳು, ಕಾನೂನು ಇಲಾಖೆ, ‌ಆರೋಗ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆಗಳ ಸಹಕಾರದಿಂದ ಹಾಗೂ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಬಾಲ್ಯ ವಿವಾಹ ತಡೆಯಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಲ್ಯವಿವಾಹವನ್ನು ಮೂಢನಂಬಿಕೆಯಿಂದ ಮಾಡುತ್ತಾರೋ, ಏನೋ ಎಂದೇ ಗೊತ್ತಾಗುತ್ತಿಲ್ಲ. ಇದನ್ನು ಇರುವ ಜಿಲ್ಲಾ ಮಟ್ಟದ ಸಮಿತಿಗಳು, ವಕೀಲರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಬಾಲ್ಯ ವಿವಾಹದ ವಿಚಾರ ಗೊತ್ತಾದ ತಕ್ಷಣವೇ ಎಫ್‌ಐಆರ್‌ ದಾಖಲಿಸಬೇಕು” ಎಂದು ತಿಳಿಸಿದರು.

ಕರ್ನಾಟಕದಲ್ಲಿ 70ಸಾವಿರಕ್ಕೂ ಅಧಿಕ ಅಂಗನವಾಡಿಗಳಿದ್ದು, ಅವುಗಳಲ್ಲಿ 20 ಸಾವಿರ ಅಂಗನವಾಡಿಗಳಲ್ಲಿ ಸರ್ಕಾರ ಮೊಂಟೆಸ್ಸರಿಗಳನ್ನು ಪ್ರಾರಂಭಿಸಲಿದೆ. ಅಂಗನವಾಡಿ ಕಾರ್ಯಕರ್ತೆಯರಲ್ಲಿ ಸುಮಾರು 15 ಸಾವಿರದಷ್ಟು ಪದವೀಧರೆಯರು ಹಾಗೂ 2 ಸಾವಿರದಷ್ಟು ಸ್ನಾತಕೋತ್ತರ ಪದವೀಧರೆಯರು ಇದ್ದಾರೆ. ಇವರಿಗೆ ಇನ್ನಷ್ಟು ತರಬೇತಿ ನೀಡಲಾಗುವುದು” ಎಂದರು.

ವಾಲ್ಮೀಕಿ ನಿಗಮ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, “ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಪೂರ್ಣಗೊಳ್ಳಲಿ. ಈ ಬಗ್ಗೆ ಈಗ ಪ್ರತಿಕ್ರಿಯಿಸುವುದು ಸರಿಯಲ್ಲ. ವಿರೋಧ ಪಕ್ಷಗಳು ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸುವುದು ರಾಜಕೀಯ ಪ್ರೇರಿತ. ಮಾಡಬಾರದ ಹಗರಣಗಳನ್ನು ಮಾಡಿದ್ದರಿಂದಲೇ ಬಿಜೆಪಿ ಶಾಸಕರ ಸಂಖ್ಯೆ 60ಕ್ಕೆ ಇಳಿಸಿದೆ. ಏನಾದರೂ ಹೋರಾಟ ಮಾಡಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...