ತಂದೆ-ತಾಯಿ, ಹಿರಿಯರನ್ನು ನೋಡಿಕೊಳ್ಳದಿದ್ದರೆ ಆಸ್ತಿಯಲ್ಲಿ ಪಾಲು ಸಿಗಲ್ಲ: ಕಂದಾಯ ಸಚಿವ

Date:

ತಂದೆ-ತಾಯಿ ಹಾಗೂ ಮನೆಯಲ್ಲಿನ ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರ ಅಸ್ತಿಯಲ್ಲಿ ಮಕ್ಕಳಿಗೆ ಪಾಲು ನೀಡದೇ ಇರಲಿ ಅವಕಾಶವಿದೆ. ಹಿರಿಯರು ತಮ್ಮ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ್ದ ವಿಲ್-ದಾನಪತ್ರವನ್ನು ರದ್ದು ಮಾಡಲು ಕೇಂದ್ರ ಸರ್ಕಾರದ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007’ರಲ್ಲಿ ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಕೃಷ್ಣ ಬೈರೇಗೌಡ ಉತ್ತರಿಸಿದರು. ‘ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ಧಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು.

ಈ ವರದಿ ಓದಿದ್ದೀರಾ?: ‘ರಾಜ್ಯಕ್ಕೆ ತೆರಿಗೆ ಪಾಲನ್ನೂ ನೀಡದೆ, ಸೆಸ್-ಸರ್ಚಾರ್ಜ್‌ಗಳನ್ನೂ ಹೆಚ್ಚಿಸಿಕೊಂಡು ನುಂಗುತ್ತಿದೆ ಮೋದಿ ಸರ್ಕಾರ’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರ 2007 ರಲ್ಲೇ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು” ಎಂದು ತಿಳಿಸಿದರು.

“ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ಧಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...