ಚಿಲುಮೆ ವೋಟರ್‌ ಗೇಟ್‌ ಪ್ರಕರಣ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯಗೆ ರಮೇಶ್‌ ಬಾಬು ಆಗ್ರಹ

Date:

  • ಬಿಬಿಎಂಪಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಮತದಾರರ ಪಟ್ಟಿ ಲೋಪ
  • ರಾಜ್ಯ ಸರ್ಕಾರ ಯಾವುದೇ ಪ್ರಭಾವಕ್ಕೆ ಒಳಗಾಗದೆ ಉನ್ನತ ತನಿಖೆ ನಡೆಸಬೇಕು’

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಅವರು ಚಿಲುಮೆ ಸಂಸ್ಥೆಯ ಮೂಲಕ ಎಸಗಿದ ಮತದಾರರ ಪಟ್ಟಿಯ ಲೋಪವನ್ನು ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಅವರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಪತ್ರ ಬರೆದಿರುವ ಅವರು, “ಬಿಬಿಎಂಪಿ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿ ಪಾಲಿಕೆಯ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಅವರು ಚಿಲುಮೆ ಖಾಸಗಿ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ ಲೋಪವೆಸಗಿ, ಈ ಮೂಲಕ ಬಿಬಿಎಂಪಿ ವ್ಯಾಪ್ತಿಯ ಸುಮಾರು ನಾಲ್ಕರಿಂದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದಾರೆ” ಎಂದು ದೂರಿದ್ದಾರೆ.

“ಚಿಲುಮೆ ಸಂಸ್ಥೆಯ ಲೋಪದ ಸಂಬಂಧ ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿ ವರದಿಯನ್ನು ಪಡೆದುಕೊಂಡಿದ್ದರೂ ಈ ತನಿಖೆ ಪೂರ್ಣ ಪ್ರಮಾಣದಲ್ಲಿ ಆಗಿರುವುದಿಲ್ಲ. ತುಶಾರ್ ಗಿರಿನಾಥ್‌ ಅವರು ಕರ್ತವ್ಯಲೋಪ ಎಸಗಿದ್ದು, ಇವರು ಮಾಡಿರುವ ತಪ್ಪಿನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಚುನಾವಣಾ ಅಧಿಕಾರಿಯಾಗಿ ಇವರ ಕರ್ತವ್ಯಲೋಪವನ್ನು ಬೇರೆ ಅಧಿಕಾರಿಗಳ ಮೇಲೆ ವರ್ಗಾಯಿಸಲೂ ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉನ್ನತ ಮಟ್ಟದ ತನಿಖೆಯ ಮೂಲಕ ಇವರ ಅಕ್ರಮ ಬಯಲುಗೊಳಿಸುವುದರ ಜೊತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಮತ್ತೆ ಇಂತಹ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿರುತ್ತದೆ. ರಾಜ್ಯ ಸರ್ಕಾರವು ಯಾವುದೇ ಪ್ರಭಾವಕ್ಕೆ ಒಳಗಾಗದೆ ಇವರ ಮೇಲೆ ಪೂರ್ಣ ಮಟ್ಟದ ತನಿಖೆಯನ್ನು ನಡೆಸಬೇಕು. ತಾವು ದಯಮಾಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಆಗಿರುವ ಮತದಾರರ ಪಟ್ಟಿಯ ಲೋಪವನ್ನು ತನಿಖೆ ಮಾಡಲು ನಿರ್ದೇಶನ ನೀಡಬೇಕು” ಎಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...