ಚೀನಾ ವಶದಲ್ಲಿ ಭಾರತದ ಭೂಮಿ, ಸುಳ್ಳು ಹೇಳುತ್ತಿರುವ ಪ್ರಧಾನಿ: ರಾಹುಲ್‌ ಗಾಂಧಿ

Date:

ಭಾರತದ ಭೂಮಿಯನ್ನು ಚೀನಾ ವಶಪಡಿಸಿಕೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಡಾಖ್‌ನ ಕಾರ್ಗಿಲ್‌ನಲ್ಲಿ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಲಡಾಖ್‌ನ ಒಂದು ಇಂಚಿನಷ್ಟು ಚೀನಾ ವಶಪಡಿಸಿಕೊಂಡಿಲ್ಲ ಎಂದು ವಿರೋಧ ಪಕ್ಷದ ಸಭೆಯಲ್ಲಿ ಪ್ರಧಾನಿ ಹೇಳಿರುವುದು ದುಃಖಕರ ಸಂಗತಿ. ಇದು ಸಂಪೂರ್ಣ ಸುಳ್ಳು. ಇದು ನಮ್ಮ ಭೂಮಿಯ ವಿಷಯ. ಅವರು ನಮ್ಮ ಭೂಮಿಯನ್ನು ಕಸಿದುಕೊಳ್ಳಲು ಬಯಸಿದ್ದಾರೆ. ದೇಶದ ಗಡಿ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ ಎಂಬುದು ಇಲ್ಲಿರುವ ಪ್ರತಿಯೊಬ್ಬ ನಾಗರಿಕರಿಗೂ ತಿಳಿದಿರುವ ವಿಷಯ” ಎಂದು ಆರೋಪಿಸಿದರು.

ತಮ್ಮ ರ‍್ಯಾಲಿಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಳ್ಳಲಾದ ಭಾರತ್ ಜೋಡೋ ಯಾತ್ರೆಯ ಕುರಿತು ಮಾತನಾಡಿದರು. ಇದು ದೇಶದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಹರಡುವ ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ನಿಲ್ಲುವ ಗುರಿಯಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಎನ್‌ಸಿಪಿಯಲ್ಲಿ ಯಾವುದೇ ಒಡಕಿಲ್ಲ, ಅಜಿತ್‌ ಪವಾರ್‌ ಈಗಲು ಎನ್‌ಸಿಪಿ ನಾಯಕ ಎಂದ ಶರದ್‌ ಪವಾರ್‌

“ನಾನು ಯಾತ್ರೆಯಿಂದ ಕಂಡುಕೊಂಡ ಸಂದೇಶವೆಂದರೆ ‘ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ಹೊರಟಿದ್ದೇವೆ ಎಂಬುದು’. ಕಳೆದ ಕೆಲವು ದಿನಗಳಲ್ಲಿ, ನಾನು ಇದನ್ನು ಸ್ವತಃ ನೋಡಿದೆ. ಯಾತ್ರೆಯ ಸಮಯದಲ್ಲಿ, ಚಳಿಗಾಲದಲ್ಲಿ ಹಿಮದ ಕಾರಣ ನಾನು ಲಡಾಖ್‌ಗೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಲಡಾಖ್‌ನಲ್ಲಿ ಯಾತ್ರೆಯನ್ನು ನಡೆಸುವುದು ನನ್ನ ಹೃದಯದಲ್ಲಿತ್ತು ಮತ್ತು ನಾನು ಅದನ್ನು ಈ ಬಾರಿ ಮೋಟಾರ್‌ಬೈಕ್‌ನಲ್ಲಿ ಮುನ್ನಡೆಸಿದೆ” ಎಂದು ರಾಹುಲ್‌ ಗಾಂಧಿ ತಿಳಿಸಿದರು.

“ನಿಮ್ಮ ಕಷ್ಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ನಿಮ್ಮೊಂದಿಗೆ ಇರಲಿದೆ. ಅದು ರಕ್ಷಣೆಯ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ್ದ ವಿಷಯಗಳಾಗಿರಬಹುದು. ಲಡಾಖ್ ನೈಸರ್ಗಿಕ ಸಂಪನ್ಮೂಲದಿಂದ ಸಮೃದ್ದವಾಗಿದೆ. 21ನೇ ಶತಮಾನವು ಸೌರಶಕ್ತಿಯಿಂದ ಕೂಡಿದ್ದು, ಲಡಾಖ್‌ಗೆ ಯಾವುದೇ ಕೊರತೆ ಕಾಡುತ್ತಿಲ್ಲ” ಎಂದು ಕಾಂಗ್ರೆಸ್ ನಾಯಕ ಹೇಳಿದರು.

“ಗೌತಮ್ ಅದಾನಿಗಾಗಿ ನಿಮ್ಮ ನೆಲವನ್ನು ಸ್ವಾಧೀನಪಡಿಸಿಕೊಳ್ಳಲು ಬಿಜೆಪಿ ಬಯಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ನಾವು ಅದನ್ನು ಕಾರ್ಯಗತಗೊಳಿಸಲು ಬಿಡುವುದಿಲ್ಲ. ಕೆಲವರು ತಮ್ಮ ಹೃದಯದಲ್ಲಿರುವುದರ ಬಗ್ಗೆ ಮಾತನಾಡುತ್ತಾರೆ. ಆದರೆ ನಾನು ಇಲ್ಲಿ ನಿಮ್ಮ ಹೃದಯದಲ್ಲಿ ಏನಿದೆ ಎಂಬುದನ್ನು ತಿಳಿಯಲು ಬಂದಿದ್ದೇನೆ. ಗಾಂಧಿ ಮತ್ತು ಕಾಂಗ್ರೆಸ್‌ನ ಸಿದ್ಧಾಂತವು ಲಡಾಖ್ ಜನರ ರಕ್ತದಲ್ಲಿ ಮತ್ತು ಡಿಎನ್ಎಯಲ್ಲಿ ಅಡಗಿದೆ” ಎಂದು ರಾಹುಲ್‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...