ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸರ್ಕಾರ ಸಂಪರ್ಕದಲ್ಲಿದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರತಿಪಾದಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಚಿರಾಗ್ ಪಾಸ್ವಾನ್, ಈ ವಿಷಯದಲ್ಲಿ ಸಂಸತ್ತಿನ ಕಲಾಪವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಪ್ರತಿಪಕ್ಷಗಳನ್ನು ಕಟುವಾಗಿ ಟೀಕಿಸಿದರು. ಇದು ದೋಷಪೂರಿತ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದರು.
“ನೀಟ್ ಪ್ರಕರಣವನ್ನು ಸಂಬಂಧಪಟ್ಟ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ವಿಷಯವು ನ್ಯಾಯಾಲಯದ ಮುಂದೆ ಇದೆ. ಅದೇನೇ ಇದ್ದರೂ, ಸರ್ಕಾರವು ಎಲ್ಲಾ ಮಧ್ಯಸ್ಥಗಾರರ ಜೊತೆ ಮಾತುಕತೆ ನಡೆಸುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದರು.
ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ| ನೀಟ್, ಯುಜಿಸಿ ನೆಟ್ ಪರೀಕ್ಷೆ ಅಕ್ರಮ ವಿರೋಧಿಸಿ ಎಸ್ಐಓ ಪ್ರತಿಭಟನೆ
“ಪ್ರತಿಪಕ್ಷಗಳು ದೋಷಪೂರಿತ ಮನಸ್ಥಿತಿಯನ್ನು ಪ್ರದರ್ಶಿಸುತ್ತಿವೆ. ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಬಯಸಿದರೆ, ಅದು ಸದನವನ್ನು ಸರಿಯಾಗಿ ನಡೆಸಲು ಮತ್ತು ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕು” ಎಂದು ಅಭಿಪ್ರಾಯಿಸಿದರು.





