ಚಿತ್ರದುರ್ಗ | ವೃದ್ಧೆಯ ಮನೆಗೆ 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ ಸಿಎಂ ಕಚೇರಿ

Date:

  • ವೃದ್ಧೆಯ ಸಂಕಷ್ಟವನ್ನು ಟ್ವಿಟರ್ ಮೂಲಕ ಸಿಎಂ ಕಚೇರಿಗೆ ತಿಳಿಸಿದ್ದ ಸ್ಥಳೀಯ ಯುವಕ
  • ಮನವಿಗೆ ಸ್ಪಂದಿಸಿ ವಿದ್ಯುತ್ ಕಲ್ಪಿಸಲು ನೆರವಾದ ಸಿಎಂ ಕಚೇರಿ: ವ್ಯಾಪಕ ಮೆಚ್ಚುಗೆ

ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ವೃದ್ಧೆಯೊಬ್ಬರು ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರ ಕಚೇರಿ ನೆರವಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ವಿದ್ಯುತ್ ಸೌಲಭ್ಯದ ಫಲಾನುಭವಿ.

ವೃದ್ಧ ಮಹಿಳೆಯ ಸ್ಥಿತಿಯನ್ನು ಕಂಡಿದ್ದ ಸ್ಥಳೀಯ ಯುವಕ ಮಹೇಂದ್ರ ಎಂಬವರು ಟ್ವೀಟ್ ಮಾಡಿ, ‘ನಾಗರಿಕತೆ ಬೆಳೆದು ಶತಮಾನಗಳು ಕಳೆದರೂ, ಕರೆಂಟ್ ವೈರ್ ಹಾಕಿಸಿಕೊಳ್ಳಲು ಹಣವಿಲ್ಲದೆ ಇಂದಿಗೂ ದೀಪದ ಬೆಳಕಿನಲ್ಲಿ ದೋಣಮ್ಮ ಬದುಕುತ್ತಿರುವುದು ಈ ದೇಶದ ದುರಂತವೇ ಸರಿ’ ಎಂದು ಬರೆದು ಸಿಎಂ ಕಚೇರಿಯ ಗಮನಕ್ಕೆ ತಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಸ್ಪಂದಿಸಿದ ಸಿಎಂ ಕಚೇರಿ, ಸಂಬಂಧಪಟ್ಟ ವಿದ್ಯುತ್ ನಿಗಮದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ, ವೃದ್ಧೆಯ ಮನೆಗೆ ತೆರಳಿದ ಅಧಿಕಾರಿಗಳು ಕೇವಲ 24 ಗಂಟೆಗಳೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.

‘ಟ್ವೀಟ್ ಮಾಡಿ 24 ಗಂಟೆಗಳ ಒಳಗೆ ಸಂಬಂಧಪಟ್ಟ ಎಲ್ಲ ಇಲಾಖೆಯವರು ಹಾಜರಾಗಿದ್ದಾರೆ. ನಿನ್ನೆ ರಾತ್ರಿಯೇ ಕರೆಂಟ್ ವ್ಯವಸ್ಥೆ ಮಾಡಿದ್ದಾರೆ. ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ವೃದ್ಧೆಯ ಬಹುದಿನಗಳ ಕನಸಿಗೆ ನೆರವಾದ ಮಹೇಂದ್ರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿದ್ದ ವಿಚಾರವನ್ನು ಸ್ಥಳೀಯರಾದ ಮಹೇಂದ್ರ ಅವರು ನಮ್ಮ ಕಚೇರಿಯ ಗಮನಕ್ಕೆ ತಂದರು. ತಕ್ಷಣ ಅವರ ಮನವಿಗೆ ಸ್ಪಂದಿಸಿ, ಕೇವಲ 24 ಗಂಟೆಗಳ ಒಳಗೆ ಆ ತಾಯಿಯ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ. ಬದಲಾವಣೆ ಮೂಡಿಸಲು ನಾವು ಸಿದ್ಧರಿದ್ದೇವೆ. ನಮ್ಮ ಈ ಕಾರ್ಯಕ್ಕೆ ನಿಮ್ಮ ಸಹಕಾರವೂ ಇರಲಿ’ ಎಂದು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ಈ ಮೊದಲು @cmofkarnataka ಮತ್ತು @siddaramaiah ಎಂಬ ಎರಡು ಟ್ವಿಟರ್ ಖಾತೆಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯ, ಸಾರ್ವಜನಿಕರ ಅಹವಾಲು ಹಾಗೂ ದೂರನ್ನು ಸ್ವೀಕರಿಸಲು @osd_cmofkarnataka ಎಂಬ ಟ್ವಿಟರ್ ಖಾತೆ ತೆರೆದಿದ್ದಾರೆ. ಇದಕ್ಕೆ ಟ್ಯಾಗ್ ಮಾಡಿ ಬರುವ ದೂರುಗಳಿಗೆ ಸಿಎಂ ಕಚೇರಿಯ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ.

ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ಕಂಡು ಬಂದರೆ ಟ್ವಿಟರ್ ಮೂಲಕ ಮಾಹಿತಿ ನೀಡಲು ಸಿಎಂ ಕಚೇರಿಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...