ಚಿತ್ರದುರ್ಗ | ಮತ್ತಷ್ಟು ರಂಗೇರಿದ ಚುನಾವಣಾ ರಣಕಣದಲ್ಲಿ ಇಪ್ಪತ್ತು ಅಭ್ಯರ್ಥಿಗಳು!

Date:

ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದ್ದು, ನಾಲ್ವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದು, ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 20 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ

 

ಮಾರ್ಚ್ 28ರಿಂದ ಪ್ರಾರಂಭವಾದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಎಪ್ರಿಲ್ 4ಕ್ಕೆ ಮುಗಿದಿದೆ. ಪರಿಶೀಲನೆ ಎಪ್ರಿಲ್ 5ರಂದು ಮುಗಿದಿದ್ದು, ವಾಪಾಸ್ ಪಡೆಯಲು ಎಪ್ರಿಲ್ 8ರ ಮಧ್ಯಾಹ್ನ 3ರವರೆಗೆ ಸಮಯ ನಿಗದಿಯಾಗಿತ್ತು.

ನಾಲ್ವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದು, ಅಂತಿಮ ಕಣದಲ್ಲಿ 20 ಅಭ್ಯರ್ಥಿಗಳು ಉಳಿದುಕೊಂಡಿದ್ದು ಅಧಿಕೃತವಾಗಿ ಮತದಾರರ ಮನವೊಲಿಕೆಗೆ ಕಸರತ್ತು ಪ್ರಾರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಜನತಾ ಪಾರ್ಟಿಯ ಗೋವಿಂದ ಎಂ ಕಾರಜೋಳ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್.ಚಂದ್ರಪ್ಪ, ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್, ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ ಟಿ, ಇಂಡಿಯನ್ ಮೂವ್‌ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ, ಕರುನಾಡ ಸೇವಕರ ಪಕ್ಷದ ಶಬರೀಶ್ ಆರ್, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ, ಪಕ್ಷೇತರ ಅಭ್ಯರ್ಥಿಗಳಾದ ಅಮೃತ ರಾಜ, ಗಣೇಶ್, ತುಳಸಿ ಹೆಚ್, ಎಂ.ಪಿ.ದಾರಕೇಶ್ವರಯ್ಯ, ಕೆ.ನರಸಿಂಹಮೂರ್ತಿ, ನಾಗರಾಜಪ್ಪ, ಭೂತರಾಜ ವಿ.ಎಸ್. ಮಂಜುನಾಥ ಸ್ವಾಮಿ ಟಿ, ರಘುಕುಮಾರ್ ಎಸ್, ಬಿ.ವೆಂಕಟೇಶ್, ಶ್ರೀನಿವಾಸ ಎಸ್.ಹೆಚ್, ಸುಧಾಕರ. ಆರ್ ಅವರು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರದಲ್ಲಿ ಕಳೆದ ಮೂರ್ನಾಲ್ಕು ಸಾರ್ವತ್ರಿಕ ಚುನಾವಣೆಗಳಂತೆ ಜಿಲ್ಲೆಯ ಹೊರಗಿನ ಅಭ್ಯರ್ಥಿಗಳೇ ಪ್ರಮುಖ ರಾಷ್ಟ್ರೀಯ ಪಕ್ಷಗಳ ಹುರಿಯಾಳುಗಳಾಗಿ ಕಣಕ್ಕಿಳಿದಿದ್ದು, ಕಾಂಗ್ರೆಸ್‌ನಿಂದ ಮಾಜಿ ಸಂಸದ ಬಿ ಎನ್ ಚಂದ್ರಪ್ಪ, ಭಾರತೀಯ ಜನತಾ ಪಕ್ಷದಿಂದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಚಂದ್ರಪ್ಪ ಅವರು ಟಿಕೆಟ್ ಹಂಚಿಕೆ ಮುನ್ನ ಸಾಕಷ್ಟು ಪೈಪೋಟಿ ಎದುರಿಸಿದರೂ, ಬಿ ಫಾರಂ ಪಡೆದ ನಂತರ ಪಕ್ಷದ ಎಲ್ಲರೂ ಒಗ್ಗೂಡಿ ಪ್ರಚಾರ ಕಾರ್ಯ ಕೈಗೊಂಡಿದ್ದು ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿರುವುದು ಗೆಲುವಿಗೆ ಸಹಕಾರಿಯಾಗುತ್ತದೆ ಎನ್ನಲಾಗಿದೆ.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾಕಷ್ಟು ಪ್ರತಿರೋಧದ ನಡುವೆ ಟಿಕೆಟ್ ಪಡೆದಿದ್ದು, ಕ್ಷೇತ್ರಕ್ಕೆ ಆಗಮಿಸಿದ ವೇಳೆ ಸ್ವಪಕ್ಷೀಯರಿಂದಲೇ ಗೋಬ್ಯಾಕ್ ಘೋಷಣೆ ಎದುರಿಸಿದ್ದರು. ನಂತರ ರಾಜ್ಯ ನಾಯಕರು ಮಧ್ಯ ಪ್ರವೇಶಿಸಿ ಟಿಕೆಟ್ ಆಕಾಂಕ್ಷಿ ರಘು ಚಂದನ್ ಹಾಗೂ ತಂದೆ ಶಾಸಕ ಚಂದ್ರಪ್ಪ ಅವರ ಮನವೊಲಿಸಿ ಬಂಡಾಯ ಶಮನಗೊಳಿಸಿದ್ದರು. ಆದರೂ ಬಿಜೆಪಿಗೆ ಒಳ ಏಟಿನ ಭಯ ಕಾಡುತ್ತಿದೆ. ಆದರೂ ಗೆಲುವಿಗೆ ಬಿಜೆಪಿ ಯಾವ ತಂತ್ರ ಹೆಣೆಯುತ್ತದೆ ಎಂದು ಕಾದುನೋಡಬೇಕಾಗಿದೆ.

ಭೋವಿ ಸಮಾಜದ ಮಾಜಿ ಸಚಿವ ಹೊಸದುರ್ಗದ ಗೂಳಿಹಟ್ಟಿ ಶೇಖರ್ ಪ್ರತಿ ಬಾರಿಯಂತೆ ಈ ಬಾರಿಯೂ ವಿರೋದ ವ್ಯಕ್ತಪಡಿಸಿದ್ದು, ಸಮುದಾಯದ ಮತಗಳ‌ ವಿಂಗಡನೆಯಾಗಲಿದೆ ಎನ್ನಲಾಗಿದೆ.

ಪಕ್ಷೇತರ ಹಾಗೂ ಇತರ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ  ಇತರೆ ಹದಿನೆಂಟು ಅಭ್ಯರ್ಥಿಗಳು ಕಣದಲ್ಲಿದ್ದು , ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಗೆ ಸವಾಲೆಸೆಯುವ ಸಾಮರ್ಥ್ಯ ಯಾವುದೇ ಅಭ್ಯರ್ಥಿಗಳ ಬಳಿಯಿಲ್ಲ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.

ಈ ಬಾರಿ ಚಿತ್ರದುರ್ಗದ ಮತದಾರರ ಚಿತ್ತ ಯಾರತ್ತ ಎನ್ನುವುದನ್ನು ತಿಳಿಯಲು ಜೂನ್ 4ರವರೆಗೆ ಕಾಯಲೇಬೇಕಾಗಿದೆ. ಏನೇ ಆಗಲಿ ಕ್ಷೇತ್ರದ ಮತ್ತು ಮತದಾರರ ಹಿತ ಕಾಯುವ ಅಭ್ಯರ್ಥಿ ಸಂಸದರಾಗಿ ಆಯ್ಕೆಯಾಗಿ ಬರಲಿ ಎನ್ನುವುದು ಚಿತ್ರದುರ್ಗದ ಸಾಮಾನ್ಯರ ಅಭಿಪ್ರಾಯ.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...