ಖರ್ಗೆ ಕುಟುಂಬದ ಕೊಲೆಗೆ ಸಂಚು ರೂಪಿಸಿದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್: ಆಡಿಯೋ ವೈರಲ್

Date:

  • ಎಐಸಿಸಿ ಅಧ್ಯಕ್ಷರ ಕುಟುಂಬದ ವಿರುದ್ಧ ಕೊಲೆ ಸಂಚು
  • ಮತ್ತೊಮ್ಮೆ ದಾಖಲಾದ ಬಿಜೆಪಿಯ ದ್ವೇಷ ರಾಜಕಾರಣ

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಸಾರಥ್ಯದಲ್ಲಿ ಕರ್ನಾಟಕದಲ್ಲಿ ದಿಗ್ವಿಜಯ ಸಾಧಿಸಲು ಹೊರಟಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಆರಂಭಿಸಿದೆ.

ಇಲ್ಲಿಯವರೆಗೂ ಪಕ್ಷದ ಮಟ್ಟದಲ್ಲೇ ಇದ್ದ ಬಿಜೆಪಿ ದ್ವೇಷಾಸೂಯೆ, ಈಗ ಖರ್ಗೆ ಕುಟುಂಬದ ವಿರುದ್ದ ನೇರವಾಗಿ ಕಾಣಿಸಿಕೊಂಡಿದೆ. ಚಿತ್ತಾಪುರದ ಬಿಜೆಪಿ ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿ ಮಣಿಕಂಠ ರಾಥೋಡ್ ದ್ವೇಷದ ಕಿಡಿ ಕಾರಿದ್ದಾನೆ.

ನನಗೇನಾದರೂ ಖರ್ಗೆ ಕುಟುಂಬವೇನಾದರೂ ಸಿಕ್ಕಿದರೆ ಅವರನ್ನು ಸಾಫ್ ಮಾಡುತ್ತೇನೆಂದು ಹೇಳಿಕೊಂಡಿದ್ದಾನೆ. ಆತ ಕಾರ್ಯಕರ್ತನೊಂದಿಗೆ ನಡೆಸಿರುವ ಫೋನ್ ಸಂಭಾಷಣೆ ಈಗ ಎಲ್ಲಡೆ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಭಾಷಣೆಯಲ್ಲೇನಿದೆ ?

ತನ್ನ ಪಕ್ಷದ ಕಾರ್ಯಕರ್ತನೊಂದಿಗೆ ಮಾತನಾಡುವ ವೇಳೆ ಮಣಿಕಂಠ ರಾಥೋಡ್ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾನೆ. ನನ್ನ ವಿರುದ್ದ 44 ಕ್ರಿಮಿನಲ್ ಕೇಸ್ ಇದೆ ಎಂದು ಹೇಳುವ ಖರ್ಗೆ ಅವೆಲ್ಲಿದೆ ಎಂದು ಹೇಳಲಿಕ್ಕೆ ಹೇಳು ಎಂದಿದ್ದಾನೆ.

ಅದಕ್ಕೆ ಆತ, ಅಣ್ಣಾ ನನ್ನ ಬಳಿ ಅವರ ನಂಬರ್ ಇಲ್ಲ ಕೊಡು ಕೇಳುವೆ ಎಂದಾಗ ಮರು ಉತ್ತರ ನೀಡಿದ ಮಣಿಕಂಠ ರಾಥೋಡ್, ನನ್ನ ಬಳಿ ನಂಬರ್ ಇದ್ದಿದ್ದರೆ ನಾನು ಖರ್ಗೆ ಹೆಂಡ್ರು, ಮಕ್ಕಳನ್ನ ಸಾಫ್ ಮಾಡ್ತಿದ್ದೆ. ನನ್ನ ಬಳಿ ಇಲ್ಲ, ನೀನೇ ಮಾತನಾಡು ಎಂದು ಹೇಳಿದ್ದಾನೆ. ಮುಂದುವರೆದು ಖರ್ಗೆ ಕುಟುಂಬದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾನೆ.

ಈ ಸುದ್ದಿ ಓದಿದ್ದೀರಾ? :ಖೆಡ್ಡಾಕ್ಕೆ ಬೀಳಬೇಡಿ, ನುಡಿ ನೋಡಬೇಡಿ – ನಡೆ ನೋಡಿ:…

ಇತ್ತ ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವ ಸಂಚು ರೂಪಿಸಿ ಪಾಪದ ಕೃತ್ಯ ಎಸಗಿದೆ.

ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ಸೇರಿದಂತೆ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಸಂಚು ರೂಪಿಸಿದೆ ಎಂದು ಆರೋಪಿಸಿದೆ.

ಮೋದಿ ಹಾಗೂ ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...