52 ಸಾವಿರ ಮನೆಗಳ ಪೂರ್ಣಗೊಳಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಗಳ ಒಪ್ಪಿಗೆ: ವಸತಿ ಸಚಿವ ಜಮೀರ್

Date:

ರಾಜೀವ್ ಗಾಂಧಿ ವಸತಿ ನಿಗಮದಿಂದ ರಾಜ್ಯದೆಲ್ಲೆಡೆ ಬಡ ಕುಟುಂಬಗಳಿಗಾಗಿ ಪ್ರಧಾನ ಮಂತ್ರಿ ಅವಾಸ್ (ನಗರ ) ಯೋಜನೆಯಡಿ ನಿರ್ಮಿಸಲಾಗುತ್ತಿರುವ 52,189 ಮನೆಗಳ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯವಾದ ಅನುದಾನ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ 52,189 ಮನೆಗಳ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ವಂತಿಗೆ 2013 ಕೋಟಿ ರೂ. ಪಾವತಿ ಆಗಿಲ್ಲ, ಹೀಗಾಗಿ ಕಾಮಗಾರಿ ಪೂರ್ಣಗೊಳಿಸಲು 2168 ಕೋಟಿ ರೂ. ಅಗತ್ಯ ಇರುವ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿ ಹಂತ ಹಂತವಾಗಿ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಬೀಳುವ ಅನುದಾನ ಕುರಿತು ಸಂಪುಟ ಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

“2013 ರಿಂದ ಇದುವರೆಗೆ 52,189 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಫಲಾನುಭವಿಗಳ ವಂತಿಗೆ 2013 ಕೋಟಿ ರೂ. ಬರಬೇಕಿದ್ದು, 134 ಕೋಟಿ ರೂ. ಮಾತ್ರ ಪಾವತಿ ಆಗಿದೆ. ಫಲಾನುಭವಿಗಳು ಬಡವರಾಗಿದ್ದು, 4 ಲಕ್ಷ ಪಾವತಿ ಕಷ್ಟ ಆಗಿದೆ. ಬ್ಯಾಂಕ್ ಗಳಿಂದಲೂ ಸಾಲ ಸಿಗುತ್ತಿಲ್ಲ. ಕೊಳೆಗೇರಿ ಅಭಿವೃದ್ಧಿ ಮಂಡಳಿ ಯೋಜನೆಯಡಿ ಕೈಗೊಂಡಂತೆ ಫಲಾನುಭವಿಗಳು ಒಂದು ಲಕ್ಷ ರೂ. ಪಾವತಿಸಿ ಉಳಿದ ಹಣ ಸರ್ಕಾರ ಭರಿಸಿದರೆ ಮಾತ್ರ ಯೋಜನೆ ಪೂರ್ಣಗೊಂಡು ಬಡವರಿಗೆ ಮನೆ ನೀಡಲು ಸಾಧ್ಯ ವಾಗುತ್ತದೆ ಎಂದು ಮನವರಿಕೆ ಮಾಡಿಕೊಡಲಾಗಿ ಸಂಪುಟದ ಮುಂದೆ ಪ್ರಸ್ತಾವನೆ ತರುವಂತೆ ಸೂಚಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“100 ಕೋಟಿ ರೂ. ಹಣ ನೀಡಿದರೆ ಫೆಬ್ರವರಿ ವೇಳೆಗೆ 5 ಸಾವಿರ ಮನೆ ನೀಡಬಹುದು. ಅದೇ ರೀತಿ ಹಂತ ಹಂತವಾಗಿ 1879 ಕೋಟಿ ರೂ. ಫಲಾನುಭವಿಗಳ ವಂತಿಗೆ ಮೊತ್ತ ಹಾಗೂ ಮೂಲ ಸೌಕರ್ಯ ಕ್ಕೆ 289 ಕೋಟಿ ರೂ. ಒಟ್ಟು 2168 ಕೋಟಿ ರೂ. ನೀಡಿದರೆ ಮುಂದಿನ ಡಿಸೆಂಬರ್ ವೇಳೆಗೆ ಎಲ್ಲ ಮನೆಗಳ ಕಾಮಗಾರಿ ಪೂರ್ಣಗೊಳಿಸಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರಿಗೆ ತಿಳಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

“ಯೋಜನೆಯಡಿಯಲ್ಲಿ ಪ್ರತಿ ಮನೆಗೆ 7.50 ಲಕ್ಷ ರೂ. ವೆಚ್ಚ ಆಗಲಿದ್ದು 3.50 ಲಕ್ಷ ರೂ. ಸಬ್ಸಿಡಿ ಸಿಗಲಿದ್ದು 4 ಲಕ್ಷ ರೂ. ಫಲಾನುಭವಿ ಕಟ್ಟಬೇಕಿತ್ತು. ಇದೀಗ ಫಲಾನುಭವಿ ಒಂದು ಲಕ್ಷ ರೂ. ಕಟ್ಟಿದರೆ 3 ಲಕ್ಷ ರೂ. ಸರ್ಕಾರವೇ ಭರಿಸಲಿದೆ. ಇದೇ ಸಂದರ್ಭದಲ್ಲಿ ಸಂಪುಟದಲ್ಲಿ ಒಪ್ಪಿಗೆ ನೀಡಿರುವ ಕೊಳೆಗೇರಿ ಅಭಿವೃದ್ಧಿ ಮಂಡಳಿಯ 1.82 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಸಂಬಂಧ 500 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಅವರು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು” ಎಂದು ಹೇಳಿದರು.

“ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಗೆ 1000 ಸಾವಿರ ಕೋಟಿ ರೂ. ಪ್ರಸ್ತಾವನೆ ಸಿದ್ದಪಡಿಸಲು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮೊತ್ತ 60 ಕೋಟಿ ರೂ. ಪೈಕಿ ಇಲಾಖೆ ಅನುದಾನದಲ್ಲಿ 40 ಕೋಟಿ ರೂ. ಬಳಕೆಗೆ ಸಭೆ ಸೂಚನೆ ನೀಡಲಾಯಿತು” ಎಂದು ವಿವರಿಸಿದರು.

ಫಲಾನುಭವಿಗಳು ಒಂದು ಲಕ್ಷ ರೂ. ಮಾತ್ರ ಪಾವತಿ

ಇತ್ತೀಚಿಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿಯಡಿ ನಿರ್ಮಾಣ ಆಗುತ್ತಿರುವ 1.82 ಲಕ್ಷ ಮನೆ ನಿರ್ಮಾಣಕ್ಕೆ ಫಲಾನುಭವಿ ವಂತಿಗೆ ಸರ್ಕಾರದಿಂದಲೇ ಭರಿಸುವ ತೀರ್ಮಾನ ಸಂಪುಟದಲ್ಲಿ ಕೈಗೊಳ್ಳಲಾಗಿತ್ತು. ಅದೇ ರೀತಿ ಇದೀಗ ರಾಜೀವ್ ಗಾಂಧಿ ವಸತಿ ನಿಗಮದಿಂದ 2103 ರಿಂದ ಬಾಕಿ ಇದ್ದ 52 ಸಾವಿರ ಮನೆ ನಿರ್ಮಾಣಕ್ಕೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಪಾವತಿ ಮಾಡಲಿದ್ದು ಫಲಾನುಭವಿಗಳು ಒಂದು ಲಕ್ಷ ರೂ. ಮಾತ್ರ ಪಾವತಿಸಬೇಕಾಗುತ್ತದೆ.

ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದ ರಾಜು, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ಹಣಕಾಸು ಇಲಾಖೆ ಕಾರ್ಯದರ್ಶಿ ಜಾಫರ್,
ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಎರಡೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...