ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ನ್ಯಾಯಾಲಯ ಮಹತ್ವದ ಆದೇಶ

Date:

“ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ” ಎಂದು ಬೆಂಗಳೂರಿನ ನ್ಯಾಯಾಲಯ ಇಂದು ಮಹತ್ವದ ಆದೇಶ ನೀಡಿದೆ.

ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಸಿಎಂ ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ದೇವೇಗೌಡ ಕುಟುಂಬದ ವಿರುದ್ಧವೇ ತೊಡೆ ತಟ್ಟಿದ್ದ ಸಿಎಂ ಇಬ್ರಾಹಿಂ ಅವರಿಗೆ ಈ ಮೂಲಕ ಹಿನ್ನಡೆಯಾಗಿದೆ.

ಇತ್ತೀಚೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದಿದ್ದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ, ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆದರೆ ಜೆಡಿಎಸ್‍ನಿಂದ ಉಚ್ಚಾಟನೆ ಮಾಡಲಾಗಿದ್ದರೂ, ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿಹ್ನೆ ಬಳಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೀಗ ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಆದೇಶ ನೀಡುವುದರ ಜೊತೆಗೆ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಇಷ್ಟು ಮಾತ್ರವಲ್ಲದೇ ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ” ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಇದನ್ನು ಓದಿದ್ದೀರಾ? ಹಾವೇರಿ ಗ್ಯಾಂಗ್ ರೇಪ್ ಪ್ರಕರಣ | ಎಸ್‌ಐಟಿ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಇದರ ವಿರುದ್ಧ ಪಕ್ಷದ ಅಧ್ಯಕ್ಷರಾಗಿದ್ದ ಸಿ ಎಂ ಇಬ್ರಾಹಿಂ ಬಂಡಾಯವೆದ್ದಿದ್ದರು. ಬಳಿಕ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಉಚ್ಚಾಟನೆಯ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸಿಎಂ ಇಬ್ರಾಹಿಂ, ಎಚ್​​.ಡಿ.ದೇವೇಗೌಡ, ಎಚ್.ಡಿ ಕುಮಾರಸ್ವಾಮಿ ಅವರನ್ನ ಪ್ರತಿವಾದಿಯಾಗಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷ ನೇಮಕ ಕಾನೂನು ಬಾಹಿರವಾಗಿದ್ದು, ಅನೂರ್ಜಿತಗೊಳಿಸಿ ಅಂತ ಮನವಿ ಮಾಡಿದ್ದರು.

ಹೆಚ್ ​​​ಡಿ ದೇವೇಗೌಡರಿಗೆ ಪರ್ಯಾಯವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ‌.ಕೆ ನಾಣು ಅವರನ್ನು ಸಿ ಎಂ ಇಬ್ರಾಹೀಂ ಆಯ್ಕೆ ಮಾಡಿದ್ದರು. ಅಲ್ಲದೇ, ತೆನೆ ಹೊತ್ತ ಮಹಿಳೆ ಗುರುತು ನಮಗೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಕೂಡ ಬರೆಯಲಾಗಿದೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...