ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ

Date:

ಜಾತ್ಯಾತೀತ ಜನತಾದಳ ಪಕ್ಷದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಇದಲ್ಲದೇ, ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ.

ಇಂದು ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಎಲ್ಲಾ ಸದಸ್ಯರು, ಇತರ ರಾಜ್ಯ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ, ತಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದರೂ ತನ್ನನ್ನು ಪರಿಗಣಿಸದೆ ದೆಹಲಿಗೆ ತೆರಳಿ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಅಲ್ಲದೆ, ಮೈತ್ರಿ ಮಾಡಿಕೊಳ್ಳದಂತೆ ಒತ್ತಡ ಹೇರುತ್ತಲೇ ಇದ್ದರು.

ಆದಾಗ್ಯೂ, ಜೆಡಿಎಸ್​​ ಪಕ್ಷದಿಂದ ಇಬ್ರಾಹಿಂ ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ ಅವರು ಇತ್ತೀಚೆಗೆ ಆದೇಶಿಸಿದ್ದರು.ಅಲ್ಲದೇ, ಅದರ ಉಸ್ತುವಾರಿಯನ್ನು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ವಹಿಸಿದ್ದರು.

ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಅಲ್ಲದೆ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ.

ಈ ವಿಚಾರವಾಗಿ ನಡೆದ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಾಭಾಸದ ಹೇಳಿಕೆ ನೀಡುತ್ತಿದ್ದರು ಎಂದು ಜೆಡಿಎಸ್ ತಿಳಿಸಿತ್ತು.

ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದರು. ಬಳಿಕ ಪಕ್ಷದ ಉಸ್ತುವಾರಿಯನ್ನು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...