ಗಣಿ ಗುತ್ತಿಗೆ ಸಮಸ್ಯೆ ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸಲು ಸಿಎಂ ಸೂಚನೆ

Date:

ಗಣಿ ಗುತ್ತಿಗೆ ಸಂಸ್ಥೆಗಳಿಗೆ ಅರಣ್ಯ ತೀರುವಳಿ ಮತ್ತಿತರ ಸಮಸ್ಯೆಗಳನ್ನು ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ವ್ಯವಸ್ಥೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ರಾಜ್ಯದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಯ ಸಂಸ್ಥೆಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದರು.

ರಾಜ್ಯದಲ್ಲಿ ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ ಮತ್ತಿತರ ಅನುಮತಿ ಪತ್ರಗಳನ್ನು ನೀಡಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಪ್ರತಿ ತಿಂಗಳು ಇಲ್ಲವೆ ಎರಡು ತಿಂಗಳಿಗೆ ಒಮ್ಮೆ ಸಭೆ ನಡೆಸಿ ಏಕಗವಾಕ್ಷಿ ವ್ಯವಸ್ಥೆಯ ಮಾದರಿಯಲ್ಲಿ ಇತ್ಯರ್ಥಪಡಿಸುವಂತೆ ಮುಖ್ಯಮಂತ್ರಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ತೀರುವಳಿ ಪಡೆಯಲು ಬಹಳಷ್ಟು ಪ್ರಕರಣಗಳು ಬಾಕಿ ಇರುವ ಕುರಿತು ಚರ್ಚಿಸಲಾಯಿತು. ಇದಕ್ಕೆ ಗಣಿ ಗುತ್ತಿಗೆ ಪಡೆದ ಸಂಸ್ಥೆಗಳು ಅರಣ್ಯೀಕರಣಕ್ಕೆ ಪರ್ಯಾಯ ಭೂಮಿ ನೀಡದೆ ಇರುವುದು ಕಾರಣವೆಂದು ಗುರುತಿಸಲಾಯಿತು.

ಆನೆಗಳು ಮತ್ತಿತರ ವನ್ಯಜೀವಿಗಳ ಉಪಟಳದಿಂದಾಗಿ ಕೃಷಿ ಭೂಮಿ ಮಾರಲು ಸಿದ್ಧರಿರುವ ರೈತರು ಅರಸೀಕರೆ ಮತ್ತು ರಾಜ್ಯದ ಇತರ ಕೆಲವು ಭಾಗಗಳಲ್ಲಿದ್ದಾರೆ. ಇಂತಹ ರೈತರಿಗೆ ಈ ಸಂಸ್ಥೆಗಳು ಜಮೀನು ಖರೀದಿಸಿ ಅರಣ್ಯೀಕರಣಕ್ಕೆ ಒದಗಿಸಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ರಾಜ್ಯದಲ್ಲಿ ಖನಿಜ ಅನ್ವೇಷಣೆಯನ್ನು ಭಾರತ ಸರ್ಕಾರಿ ಸ್ವಾಮ್ಯದ ಕೆಐಓಸಿಎಲ್‌ ಮತ್ತು ಎಂಇಸಿಎಲ್‌ ಮೂಲಕ ಕೈಗೊಳ್ಳಲು ಅನುಮತಿಗಾಗಿ ಭಾರತ ಸರ್ಕಾರಕ್ಕೆ ಪ್ರವೇಶ್‌ ಪೋರ್ಟಲ್‌ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಗಳಿಗೆ ಇರುವ ಆಕ್ಷೇಪಣೆಗಳನ್ನು ಸರಿಪಡಿಸಿ ತ್ವರಿತವಾಗಿ ತೀರುವಳಿ ಪಡೆಯುವಂತೆ ಈ ಸಂಸ್ಥೆಗಳೊಂದಿಗೆ ಚರ್ಚಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೆ ಅಕ್ರಮ ಗಣಿಗಾರಿಕೆಯಿಂದ ಜಪ್ತಿ ಮಾಡಿರುವ 2.7 ದಶಲಕ್ಷ ಮೆಟ್ರಿಕ್‌ ಟನ್‌ ಅದಿರು ಅರಣ್ಯ ಪ್ರದೇಶದಲ್ಲಿದ್ದು, ಇವುಗಳ ವಿಲೇವಾರಿಗೆ ಕಾನೂನು ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ಉಡುಪಿಗೆ ಬಂದಿದೆ: ಡಾ. ಜಿ ಪರಮೇಶ್ವರ್‌

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಟಾಸ್ಕ್‌ ಫೋರ್ಸ್‌ ಅಡಿ ಬರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು. ಕಲ್ಲುಗಣಿ ಗುತ್ತಿಗೆದಾರರು ನಿಯಮಗಳ ಉಲ್ಲಂಘನೆ ಮಾಡಿರುವುದಕ್ಕೆ ವಿಧಿಸಿರುವ ದಂಡ ಸಂಗ್ರಹಿಸಲು ಒಟಿಎಸ್‌ ಯೋಜನೆ ಜಾರಿಗೆ ತರುವ ಕುರಿತ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಸೂಚಿಸಿದರು.

ಅರಣ್ಯ ಸಚಿವ ಈಶ್ವರ ಖಂಡ್ರೆ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕಟಾರಿಯಾ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...