ಸಿಎಂ ಜನಸ್ಪಂದನ | ಪ್ರಜೆಗಳ ಪಡಿಪಾಟಲು ಸಾರುತ್ತಿರುವ ಚಿತ್ರಗಳು

Date:

ನಾಡಿನ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸಾಗರವೇ ಹರಿದುಬಂದಿದೆ.

ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದ್ದು, ಬೆಳಗ್ಗೆಯಿಂದಲೇ ಸಾವಿರಾರು ಜನ ತಮ್ಮ ಸಮಸ್ಯೆಯನ್ನು ಸಿಎಂ ಸಿದ್ದರಾಮಯ್ಯನವರ ಬಳಿ ಹೇಳಲು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಖುದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಜನರ ಬಳಿ ಧಾವಿಸಿ ಅವವಾಲು ಸ್ವೀಕರಿಸುತ್ತಿದ್ದು, ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಿತ್ತಿದ್ದಾರೆ. ಸಂಜೆ 6ರವರೆಗೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜೆಗಳ ಪಡಿಪಾಟಲು ಸಾರುತ್ತಿರುವ ಚಿತ್ರಗಳು..

 

CM-1

ಜನಸ್ಪಂದನ-1
ಡಬ್ಬಲ್ ಡಿಗ್ರಿ ಮುಗಿಸಿರುವ ಬೆಂಗಳೂರಿನ ನಿವಾಸಿ ವಿಶಿಷ್ಠ ಚೇತನ ನವ್ಯಶ್ರೀ ಅವರು ತಾಯಿ ರಮಾಮಣಿ ಅವರ ಜತೆ ಬಂದು ಉದ್ಯೋಗಕ್ಕಾಗಿ CM ಗೆ ಮನವಿ ಮಾಡಿದರು. ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಜನಸ್ಪಂದನ-2
ರಾಯಚೂರಿನ ಮೂರು ವರ್ಷದ ಶುಶಾಂತ್ ಥಲೆಸ್ಸೆಮಿಯಾ ಕಾಯಿಲೆ ಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ಒದಗಿಸಲಾಗುವುದು ಎಂದು ಅರ್ಜಿಯನ್ನು ಸ್ವೀಕರಿಸಿ ಭರವಸೆ ನೀಡಿದರು.
ಜನಸ್ಪಂದನ 3
ಬೆಂಗಳೂರಿನ ಜೆ.ಜೆ ನಗರ ನಿವಾಸಿ ಎಂ.ಶ್ರೀಧರ್ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಇವರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡುವ ಭರವಸೆ ನೀಡಿದರು.
ಜನಸ್ಪಂದನ 4
ಬೆಂಗಳೂರಿನ ಮಹಾಭೋದಿ ಸಂಶೋಧನಾ ಕೇಂದ್ರ ಇವರು ಬೌದ್ಧ ಜನಾಂಗದ ಅಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ ೨೦ ಲಕ್ಷ ರೂ.ಗಳ ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು ೨೦೨೪-೨೫ ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ೧೦೦ ಕೋಟಿ ರೂ.ಗಳ ಅನುದಾನವನ್ನು ನೀಡಿ, ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...