ಕೇಂದ್ರ ಸರ್ಕಾರ ಪಂಜಾಬ್ ಅನ್ನು ನಿರ್ಲಕ್ಷಿಸುತ್ತಿದೆ: ಸಿಎಂ ಮಾನ್ ಆರೋಪ

Date:

ಕೇಂದ್ರ ಸರ್ಕಾರವು ಪಂಜಾಬ್ ಅನ್ನು ನಿರ್ಲಕ್ಷಿಸುತ್ತಿದೆ. ಪಂಜಾಬ್ ಬಗ್ಗೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ.

ಪಟಿಯಾಲಾದ ಪೋಲೋ ಮೈದಾನದಲ್ಲಿ ನಡೆದ 76 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರೀಯ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ನಂತರ ಸಭೆಯನ್ನುದ್ದೇಶಿಸಿ ಪಂಜಾಬ್ ಸಿಎಂ ಮಾತನಾಡಿದರು.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರವು ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು ಎಂದು ಮಾನ್ ಒತ್ತಾಯಿಸಿದ್ದಾರೆ. ಸರ್ಕಾರದ ನಿರಾಸಕ್ತಿ ಧೋರಣೆಯಿಂದಾಗಿ ಗಣರಾಜ್ಯೋತ್ಸವದಂದು ಕೂಡ ರೈತರು ಆಂದೋಲನ ನಡೆಸುವಂತೆ ಮಾಡಲಾಗಿದೆ ಎಂದು ದೂರಿದರು.

“ಹೊಲಗಳ ರಾಜನಾಗಿರುವ ಟ್ರ್ಯಾಕ್ಟರ್, ಕೇಂದ್ರ ಸರ್ಕಾರದ ನಿರ್ದಯ ವರ್ತನೆಯಿಂದಾಗಿ ಆಹಾರ ಧಾನ್ಯಗಳನ್ನು ಉತ್ಪಾದಿಸುವ ಬದಲು ದೆಹಲಿಯ ಕಡೆಗೆ ರಸ್ತೆಗಳಲ್ಲಿ ಓಡಾಡಬೇಕಾಗಿದೆ” ಎಂದು ತಿಳಿಸಿದರು.

“ಸ್ವಾತಂತ್ರ್ಯದ ನಂತರದ ಏಳು ದಶಕಗಳಿಗೂ ಹೆಚ್ಚು ಕಾಲ, ಪಂಜಾಬ್ ಕೇಂದ್ರ ಸರ್ಕಾರಗಳಿಂದ ಹಿಂಜರಿತ ಮತ್ತು ವಿನಾಶಕಾರಿ ನೀತಿಗಳ ರೂಪದಲ್ಲಿ ವಿವರಿಸಲಾಗದ ತಾರತಮ್ಯವನ್ನು ಅನುಭವಿಸಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಂಗನಾ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಪಂಜಾಬ್‌ನಲ್ಲಿ ನಿಷೇಧಿಸಿ: ಸಿಎಂ ಮಾನ್‌ಗೆ ಎಸ್‌ಜಿಪಿಸಿ ಪತ್ರ

ಆಹಾರ ಉತ್ಪಾದನೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಿದ ರೈತರು ಗಣರಾಜ್ಯೋತ್ಸವದಂದು ಕೂಡ ಆಂದೋಲನ ನಡೆಸುವಂತೆ ಮಾಡಿರುವುದು ದುರದೃಷ್ಟಕರ. ಕೇಂದ್ರ ಸರ್ಕಾರದ ನಿರಾಸಕ್ತಿ ಧೋರಣೆಯಿಂದಾಗಿ, ದೇಶಕ್ಕೆ ಆಹಾರವನ್ನು ನೀಡುವ ಕೈಗಳು ಈಗ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಉಪವಾಸ ಸತ್ಯಾಗ್ರಹ ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ತಿಳಿಸಿದರು.

ರೈತರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಬೇಕು. ಇದರಿಂದ ಅವರು ದೇಶಕ್ಕೆ ಉತ್ತಮವಾಗಿ ಸೇವೆ ಸಲ್ಲಿಸಬಹುದು. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೈತರ ಸ್ಥಿತಿ ಹೇಗಿದೆ ಎಂದರೆ ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆ ಇರುವ ಪ್ರತಿಯೊಬ್ಬ ಭಾರತೀಯನಿಗೂ ನೋವುಂಟು ಮಾಡುತ್ತದೆ ಎಂದರು.

“ಕೇಂದ್ರ ಸರ್ಕಾರ ಪಂಜಾಬ್ ಮತ್ತು ಅದರ ಕಷ್ಟಪಟ್ಟು ದುಡಿಯುವ ಜನರ ಬಗ್ಗೆ ಮಲತಾಯಿ ಧೋರಣೆಯನ್ನು ನಿಲ್ಲಿಸಬೇಕು” ಎಂದರು. ಕೇಂದ್ರ ಸರ್ಕಾರ ಪಂಜಾಬ್ ಬಗ್ಗೆ ಅಸಡ್ಡೆ ಧೋರಣೆಯ ಮತ್ತೊಂದು ಉದಾಹರಣೆಯನ್ನು ಉಲ್ಲೇಖಿಸಿದ ಮಾನ್, “ಕೇಂದ್ರ ಸರ್ಕಾರವು ಆರ್‌ಡಿಎಫ್‌ನ ರಾಜ್ಯದ ಬಾಕಿ ಪಾಲನ್ನು ಬಿಡುಗಡೆ ಮಾಡಿಲ್ಲ. ಇದು 5,500 ಕೋಟಿ ರೂಪಾಯಿ ಮೌಲ್ಯದ್ದಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...