ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಸಾಲದ ಕೊರತೆ, ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು.

ಸಿಎಂ ಮನವಿಯಲ್ಲಿ ಏನಿದೆ?

2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ 35ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿಯನ್ನು ಹೊಂದಿದೆ. 2023-24ನೇ ಹಣಕಾಸು ವರ್ಷದಲ್ಲಿ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ ಕರ್ನಾಟಕದಲ್ಲಿ 22,902 ಕೋಟಿ ರೂ. ಅಲ್ಪಾವಧಿ ಕೃಷಿ ಸಾಲವನ್ನು ವಿತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024-25ನೇ ಸಾಲಿನಲ್ಲಿ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ 9,162 ಕೋಟಿ ರೂ. ಕೃಷಿ ಸಾಲ ಮಿತಿಗೆ ಅನುಮೋದನೆ ನೀಡುವಂತೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ ನಬಾರ್ಡ್‌ಗೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

2023-24ನೇ ಸಾಲಿನಲ್ಲಿ ನಬಾರ್ಡ್‌ ಕೃಷಿ ಚಟುವಟಿಕೆಗಳಿಗೆ 5,600 ಕೋಟಿ ರೂ. ಮೊತ್ತದ ರಿಯಾಯಿತಿ ದರದ ಸಾಲದ ಮಿತಿಗೆ ಅನುಮೋದನೆ ನೀಡಿತ್ತು. 2024-25ನೇ ಸಾಲಿನಲ್ಲಿ 9,162 ಕೋಟಿ ರೂ.ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರೂ, ನಬಾರ್ಡ್‌ ಕೃಷಿ ಚಟುವಟಿಕೆಗಳಿಗೆ ಕೇವಲ 2,340 ಕೋಟಿ ರೂ. ರಿಯಾಯಿತಿ ದರದ ಸಾಲವನ್ನು ಅನುಮೋದಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ.58ರಷ್ಟು ಕಡಿಮೆಯಾಗಿದೆ. ಆರ್‌ಬಿಐ ಸಾಮಾನ್ಯ ಸಾಲದ ಮಿತಿ (ಎಲ್ಒಸಿ)ಯನ್ನು ಕಡಿಮೆಗೊಳಿಸಿರುವುದೇ ಪ್ರಸ್ತುತ ವರ್ಷ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿಮೆಗೊಳಿಸಲು ಕಾರಣ ಎಂದು ನಬಾರ್ಡ್‌ ಮಾಹಿತಿ ನೀಡಿದೆ.

ನಬಾರ್ಡ್‌ ಕರ್ನಾಟಕ ರಾಜ್ಯಕ್ಕೆ ಅನುಮೋದಿಸಿರುವ ಕೃಷಿ ಸಾಲದ ಮಿತಿ ವಿವರ

ನಬಾರ್ಡ್‌ ಸಾಲ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಯಾಕಿಲ್ಲ?

ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಾನ್ಸೂನ್‌ ಮಳೆಯಾಗಿದ್ದು, ರೈತರು ಕೃಷಿ ಸಹಕಾರಿ ಚಟುವಟಿಕೆಗಳಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಹೆಚ್ಚಿಸುವಂತೆ ಬೇಡಿಕೆ ಇರಿಸಿದ್ದಾರೆ. ಆದರೆ ಕರ್ನಾಟಕಕ್ಕೆ 2024-25ನೇ ಸಾಲಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿತಗೊಳಿಸಿರುವುದು ಅಲ್ಪಾವಧಿ ಕೃಷಿ ಸಹಕಾರಿ ಸಾಲದ ವಿತರಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಈ ಎಲ್ಲ ಹಿನ್ನೆಲೆಯಲ್ಲಿ, ಕರ್ನಾಟಕದ ರೈತರ ಹಿತದೃಷ್ಟಿಯಿಂದ ಅವರು ಉತ್ತಮ ಬೆಳೆಯನ್ನು ಬೆಳೆಯಲು ಅನುಕೂಲವಾಗುವಂತೆ 2024-25 ನೇ ಸಾಲಿನಲ್ಲಿ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವಂತೆ ನಬಾರ್ಡ್‌ ಹಾಗೂ ಆರ್‌ಬಿಐಗೆ ದಯವಿಟ್ಟು ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಕೋರಿದ್ದಾರೆ.

ಮನವಿ ಸಲ್ಲಿಸುವ ವೇಳೆ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...