ದಿನವೊಂದಕ್ಕೆ 1 ಕೋಟಿ ಲೀಟರ್‌ ಹಾಲು ಉತ್ಪಾದನೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

Date:

ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಅವರು ಮಂಗಳವಾರ ಕೆಎಂಎಫ್‌ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾಧ್ಯಮದವರೊಂದಿಗೆ ಮಾತನಾಡಿ, “ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ. ಇತ್ತು” ಎಂದರು.

ಹಾಲಿನ ಸೊಸೈಟಿಗಳು ರೈತರ ಸಂಘಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

ರೈತರಿಗೆ ನೆರವು

“ರಾಜ್ಯದಲ್ಲಿ ಸುಮಾರು 16,000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2 ರೂಪಾಯಿ ಹೆಚ್ಚಿಸಲಾಗಿದೆ” ಎಂದರು.

ವಿಪಕ್ಷದ ಅಪಪ್ರಚಾರ

“ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ” ಎಂದು ಹೇಳಿದರು.

“2 ರೂ.ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೇ ಮಾತನಾಡುತ್ತಾರೆ. ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ” ಎಂದು ಪುನರುಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...