ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಪ್ರಧಾನಿ ಪಕ್ಷದ ಸಾಧನೆ ಎಂದಿರುವುದು ವಿಷಾದನೀಯ : ಸಿದ್ದರಾಮಯ್ಯ

Date:

  • ಸರಣಿ ಟ್ವೀಟ್ ಮೂಲಕ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
  • ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ ಎಂದ ಸಿದ್ದರಾಮಯ್ಯ

“ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಇಳಿದಿರುವುದು ವಿಷಾದನೀಯ ಮಾತ್ರವಲ್ಲ ಖಂಡನೀಯ” ಎಂದು ಪ್ರಧಾನಿಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಆದಿತ್ಯ ಎಲ್-1 ಉಡಾವಣೆಯ ಬಳಿಕ ಶನಿವಾರ ಸಂಜೆ ಸರಣಿ ಟ್ವೀಟ್ ಮಾಡಿರುವ ಅವರು, “ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು. ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ ಎಂದು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

“ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ” ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿರುವ ಸಿಎಂ, ಇನ್ನಾದರೂ ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು? ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ? ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ? ಹೇಳಿ ಎಂದು ಎನ್‌ಡಿಎ ಸರ್ಕಾರದ ಸಾಧನೆಯ ಬಗ್ಗೆ ತಿಳಿಸುವಂತೆ ಸವಾಲೆಸೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಭತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ. ಇನ್ನು ನಿಮ್ಮ ಈ ಆಟಗಳು ನಡೆಯುವುದಿಲ್ಲ ನರೇಂದ್ರ ಮೋದಿಯವರೇ” ಎಂದು ಟ್ವೀಟ್ ಮಾಡುವ ಮೂಲಕ ಪ್ರಧಾನಿಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಪ್ರಹಾರ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...