ದೇವರಾಜ​ ಅರಸು ದಾಖಲೆ ಸರಿಗಟ್ಟಿದ ಸಿಎಂ ಸಿದ್ದರಾಮಯ್ಯ

Date:

ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಸಿದ್ದರಾಮಯ್ಯ ಮಂಗಳವಾರ (ಜ. 6) ಸರಿಗಟ್ಟಲಿದ್ದಾರೆ.ಆ ಮೂಲಕ, ಅತಿ ಹೆಚ್ಚು ಅವಧಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಗರಿಮೆಗೆ ಅವರು ಪಾತ್ರರಾಗಲಿದ್ದಾರೆ.

ಈ ಹಿರಿಮೆಯ ಹೊರತಾಗಿ, ಅತಿ ಹೆಚ್ಚು 16 ಬಾರಿ ಬಜೆಟ್​ ಮಂಡಿಸಿದ ದಾಖಲೆಯನ್ನೂ ಸಿದ್ದರಾಮಯ್ಯ ಹೊಂದಿದ್ದಾರೆ. ಅಲ್ಲದೆ, 2026-27ನೇ ಸಾಲಿನಲ್ಲಿ ತಮ್ಮ 17ನೇ ಬಜೆಟ್‌ ಮಂಡಿಸುವ ಉತ್ಸಾಹದಲ್ಲಿದ್ದಾರೆ.

ಈ ಸಂತಸವನ್ನು ಸಂಭ್ರಮಿಸಲು ರಾಜ್ಯದಾದ್ಯಂತ ಇರುವ ಸಿದ್ದರಾಮಯ್ಯ ಅವರ ಅಭಿಮಾನಿಗಳು, ಬೆಂಬಲಿಗರು, ಹಿತೈಷಿಗಳು ಸಾಲು ಸಾಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ನೆಲಮಂಗಲದಲ್ಲಿ ಸುಮಾರು 10 ಸಾವಿರ ಜನರಿಗೆ ನಾಟಿಕೋಳಿಯ ಭೋಜನವನ್ನು ಅವರ ಅಭಿಮಾನಿಗಳು ಮಂಗಳವಾರ ಆಯೋಜಿಸಿದ್ದಾರೆ. ವಿಜಯಪುರ, ಕಲಬುರಗಿ,‌ ಹಾಸನ, ಮೈಸೂರು ಸೇರಿದಂತೆ ಹಲವೆಡೆ ರಕ್ತದಾನ ಶಿಬಿರ, ಸಮಾವೇಶಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸಾಮಾಜಿಕ ನ್ಯಾಯ’ದ ನಾಯಕರಾಗಿ ಗುರುತಿಸಿಕೊಂಡಿದ್ದ ದೇವರಾಜ​ ಅರಸು 2,789 ದಿನಗಳು, ಅಂದರೆ 7 ವರ್ಷ 239 ದಿನ (ಎರಡು ಅವಧಿಗೆ) ಮುಖ್ಯಮಂತ್ರಿ ಆಗಿದ್ದರು. ಈ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೆನೆಜುವೆಲಾ ಮೇಲೆ ‘ಅಮೆರಿಕ’ ಹಿಡಿತ: ಮೂರನೇ ವಿಶ್ವಯುದ್ಧದ ಕಾರ್ಮೋಡ

ಅರಸು​ ಅವರು 1972ರ ಮಾರ್ಚ್​ 20ರಿಂದ 1980 ಜನವರಿ 7ರವರೆಗೆ ಸತತ ಏಳೂವರೆ ವರ್ಷ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಸಿದ್ದರಾಮಯ್ಯ 2013ರಿಂದ 2018ರ ಅವಧಿಯಲ್ಲಿ ಮೊದಲ ಬಾರಿ 1,829 ದಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದರು. 2023ರ ಮೇ 20ರಿಂದ ಎರಡನೇ ಬಾರಿಮುಖ್ಯಮಂತ್ರಿ ಆಗಿದ್ದಾರೆ. ಮುಖ್ಯಮಂತ್ರಿಯ ಅಧಿಕಾರಾವಧಿ ಲೆಕ್ಕ ಮಾಡುವಾಗ ಪ್ರಮಾಣವಚನ ಸ್ವೀಕರಿಸಿದ ದಿನದಿಂದ ಪರಿಗಣಿಸಲಾಗುತ್ತದೆ ಎಂದು ವಿಧಾನಸಭೆ ಸಚಿವಾಲಯದ ಮೂಲಗಳು ತಿಳಿಸಿವೆ.

ಅರಸು ಮತ್ತು ಸಿದ್ದರಾಮಯ್ಯ ಇಬ್ಬರೂ ತಮ್ಮ ವರ್ಚಸ್ಸು, ಸಂಘಟನಾ ಚಾತುರ್ಯದಿಂದ ರಾಜ್ಯ ರಾಜಕೀಯದಲ್ಲಿ ಬೆಳೆದವರು. ಅಲ್ಪಸಂಖ್ಯಾತ,ಹಿಂದುಳಿದ, ದಲಿತ (ಅಹಿಂದ) ಸಂಯೋಜನೆಯನ್ನು ಸಮರ್ಥವಾಗಿ ಬಳಸಿಕೊಂಡವರು. ಒಕ್ಕಲಿಗರು ಮತ್ತು ಲಿಂಗಾಯತರ ಪ್ರಾಬಲ್ಯದ ನಡುವೆ, ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಪಟ್ಟದಲ್ಲಿ ಉಳಿಯಲು ಕೂಡ ಈ ಸಂಯೋಜನೆಇಬ್ಬರಿಗೂ ಸಹಾಯ ಮಾಡಿದೆ. ಸಿದ್ದರಾಮಯ್ಯ ಅವರು ಅಹಿಂದ ನಾಯಕರೆಂದೇ ಹೆಸರು ಗಳಿಸಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳ ಬಲ ಕುಗ್ಗಿಸಲು ಅವರು ಈ ‘ಅಸ್ತ್ರ’ವನ್ನು ಸಮರ್ಥವಾಗಿ ಬಳಸಿಕೊಂಡಿದ್ದಾರೆ ಎಂಬ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿದೆ.

ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಕೋಮುವಾದಿ ವಿರೋಧಿ ನಿಲುವುಗಳನ್ನು ಬಲವಾಗಿ ಪ್ರತಿಪಾದಿಸುತ್ತಲೇ ಬಂದಿರುವ ಸಿದ್ದರಾಮಯ್ಯ, ಅಹಿಂದ ಗುಂಪುಗಳ ಕಡೆಗೆ ವಿಶೇಷ ಪ್ರೀತಿ ತೋರಿದರು. ತಮ್ಮ ಅಧಿಕಾರಾವಧಿಯಲ್ಲಿ ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಹಲವು ‘ಭಾಗ್ಯ’ಗಳ ಜೊತೆಗೆ, ಹಲವು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ. ಈ ಅವಧಿಯಲ್ಲಿ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ಪಂಚ ಗ್ಯಾರಂಟಿ’ಗಳನ್ನು ಅನುಷ್ಠಾನ ಮಾಡಿದೆ.

ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಜನತಾಪಕ್ಷ, ಜನತಾದಳ ಮತ್ತು 2006ರಿಂದ ಕಾಂಗ್ರೆಸ್‌ನಲ್ಲಿ ಮುಂದುವರಿದಿದೆ. ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾದವರಲ್ಲಿ ದೇವರಾಜ ಅರಸು ಅವರ ನಂತರ ಎಸ್. ನಿಜಲಿಂಗಪ್ಪ(7 ವರ್ಷ 175 ದಿನ), ರಾಮಕೃಷ್ಣ ಹೆಗಡೆ (5 ವರ್ಷ 216 ದಿನ), ಬಿ.ಎಸ್. ಯಡಿಯೂರಪ್ಪ (5 ವರ್ಷ 82 ದಿನ) ಇದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...