ವಿಕ್ರಂ ಸಿಂಹ ಬಂಧನಕ್ಕೂ ಸಿಎಂ ಸಿದ್ದರಾಮಯ್ಯನವರಿಗೂ ಸಂಬಂಧವಿಲ್ಲ: ಗೃಹ ಸಚಿವ ಪರಮೇಶ್ವರ್

Date:

ಮರಗಳ್ಳತನ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಬಂಧನಕ್ಕೂ, ಸಿಎಂ ಸಿದ್ದರಾಮಯ್ಯನವರಿಗೂ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ವಿಕ್ರಂ ಸಿಂಹ ಬಂಧನದ ಬಳಿಕ ನಿನ್ನೆ ಮೈಸೂರಿನಲ್ಲಿ ಮಾತನಾಡುತ್ತಿದ್ದ ವೇಳೆ ಸಂಸದ ಪ್ರತಾಪ್ ಸಿಂಹ, “ಸಿಎಂ ಮಗನ ರಾಜಕೀಯ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನು ಮುಗಿಸಲು ಷಡ್ಯಂತ್ರ ರೂಪಿಸಲಾಗಿದೆ” ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ, ” ವಿಕ್ರಂ ಸಿಂಹ ಬಂಧನದಲ್ಲಿ ಯಾವುದೇ ರಾಜಕೀಯ ಇಲ್ಲ” ಎಂದು ಹೇಳಿದರು.

ಬೆಂಗಳೂರಿನಲ್ಲಿ ಪತ್ರಕರ್ತರು ಕೇಳಿದ್ದಕ್ಕೆ ಉತ್ತರಿಸಿದ ಪರಮೇಶ್ವರ್, “ಇದರಲ್ಲಿ ಯಾವುದೇ ರಾಜಕೀಯ ಪ್ರಶ್ನೆಯೇ ಬರಬಾರದು. ಯಾವುದೇ ಅನುಮತಿ ಇಲ್ಲದೆ ಅನಧಿಕೃತವಾಗಿ ಮರ ಕಡಿದಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಡಿದವರ ವಿರುದ್ಧ ಕಾನೂನು ಕ್ರಮ ಅಷ್ಟೇ ಕೈಗೊಂಡಿತ್ತು. ಇಂತಹ ಪ್ರಕರಣದಲ್ಲಿ ಯಾರೇ ಆಗಿದ್ದರೂ ಕ್ರಮ ಆಗುತ್ತದೆ. ಇದರಲ್ಲಿ ಪ್ರತಾಪ್ ಸಿಂಹ ಅವರ ಸಹೋದರ ಅಥವಾ ಇನ್ಯಾರೇ ಆಗಿರುವುದು ಅಪ್ರಸ್ತುತ. ಅದನ್ನು ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕೀಯ ಮಾಡಬಾರದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಡಿಕೆ ಶಿವಕುಮಾರ್ ಹೂಡಿಕೆ: ವಿವರ ಕೇಳಿದ ಸಿಬಿಐ

“ಸಿಎಂ ಸಿದ್ದರಾಮಯ್ಯನವರಿಗೂ ವಿಕ್ರಂ ಸಿಂಹ ಬಂಧನಕ್ಕೂ ಸಂಬಂಧವಿಲ್ಲ. ಇದರಲ್ಲಿ ಯಾವುದೇ ಒತ್ತಡ ಏನೂ ಇಲ್ಲ. ತಪ್ಪು ಮಾಡಿದವರನ್ನು ತನಿಖೆ ನಡೆಸಿದ ಬಳಿಕ ಬಂಧಿಸಿದ್ದಾರೆ. ಒಂದು ವೇಳೆ ಅವರು ಮರ ಕಡಿದದ್ದರಲ್ಲಿ ವಿಕ್ರಂ ಸಿಂಹ ಭಾಗಿಯಾಗಿಲ್ಲ ಅಂದಮೇಲೆ ಅದು ಅಲ್ಲಿಗೆ ಮುಗೀಯುತ್ತದಲ್ವಾ?” ಎಂದು ಕೇಳಿದ ಗೃಹ ಸಚಿವ ಪರಮೇಶ್ವರ್, “ಅದಕ್ಕೆ ಯಾಕೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಚರ್ಚೆಯಾಗಬೇಕೋ ನನಗಂತೂ ಗೊತ್ತಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...