ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ರಾಜ್ಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಬುಧವಾರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.

ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ಸದ್ಯ ತೆಗೆದುಕೊಂಡಿರುವ ಕ್ರಮಗಳು

1 ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

2 ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.

3 ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.

4 ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...