ವಾಲ್ಮೀಕಿ ನಿಗಮದ ಇಡೀ ಹಗರಣ ಹೊಣೆ ಸಿಎಂ ಸಿದ್ದರಾಮಯ್ಯ ಹೊರಬೇಕು: ಸಿ ಟಿ ರವಿ ಆಗ್ರಹ

Date:

ಎಸ್‍ಐಟಿಯು ನಾಗೇಂದ್ರರ ಹೆಸರನ್ನು ಉಲ್ಲೇಖಿಸದೆ ಇರುವುದು, ನಾಗೇಂದ್ರರನ್ನು ತನಿಖೆಗೆ ಒಳಪಡಿಸದೆ ಇರುವುದು ಗಮನಿಸಿದಾಗ ವಾಲ್ಮೀಕಿ ನಿಗಮದ ಇಡೀ ಹಗರಣವನ್ನು ಮುಚ್ಚಿ ಹಾಕುವ ಸಂಚನ್ನು ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖರು ಮಾಡಿದಂತಿದೆ. ಇಲ್ಲವಾದರೆ ಎಸ್‍ಐಟಿ ಮತ್ತು ಇ.ಡಿ. ಚಾರ್ಜ್‍ಶೀಟಿಗೆ ಹೀಗೆ ಅಜಗಜಾಂತರ ಇರಲು ಹೇಗೆ ಸಾಧ್ಯ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಪ್ರಶ್ನಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಬೆಂಗಳೂರಿನಲ್ಲಿ ಇಂದು (ಸೆ.10) ಮಾತನಾಡಿದ ಅವರು, “ನಾಗೇಂದ್ರರ ಮೌಖಿಕ ಸೂಚನೆಯ ಕುರಿತು ತಿಳಿಸಿದ್ದೆವು. ಚುನಾವಣೆಗೆ ಹಣ ಬಳಕೆ, ಬಾರ್‌ಗಳಿಗೆ ಹಣ ಹೋಗಿರುವುದರ ಕುರಿತು ಆರೋಪಿಸಿದ್ದೆವು. ನೆಕ್ಕುಂಟಿ ನಾಗರಾಜ್ ಮತ್ತು ಸಿದ್ದರಾಮಯ್ಯನವರಿಗೆ ಇರುವ ಸಂಬಂಧ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾಗೇಂದ್ರ- ನೆಕ್ಕುಂಟಿ ಸಂಬಂಧ ಬಗ್ಗೆಯೂ ಕೂಡ ಫೋಟೊ ಸಹಿತ ಬೆಳಕು ಚೆಲ್ಲಿದ್ದೆವು. ಎಸ್‍ಐಟಿ ಚಾರ್ಜ್‍ಶೀಟಿನಲ್ಲಿ ನಾಗೇಂದ್ರ- ಬಸನಗೌಡ ದದ್ದಲ್ ಹೆಸರೇ ಇಲ್ಲ” ಎಂದು ಆಕ್ಷೇಪಿಸಿದರು.

“ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರಕಾರ ಆರೋಪ ಮುಕ್ತವಾಗಲು ಮತ್ತು ಕ್ಲೀನ್ ಚಿಟ್ ಪಡೆಯಲು ಎಸಿಬಿಯನ್ನು ಬಳಸಿಕೊಂಡಿತ್ತು. ಅದೇ ಥರ ಎಸ್‍ಐಟಿಯನ್ನು ಬಳಸಿಕೊಂಡದ್ದು ವ್ಯಕ್ತವಾಗುತ್ತಿದೆ. ಇ.ಡಿ. ಚಾರ್ಜ್‍ಶೀಟಿನಲ್ಲಿ ಹಣದ ಬಳಕೆ, ಮಾಸ್ಟರ್‍ಮೈಂಡ್ ಯಾರೆಂಬ ಕುರಿತು ಉಲ್ಲೇಖಿಸಿದ್ದಾರೆ. ನಾಗೇಂದ್ರ, ಸತ್ಯನಾರಾಯಣವರ್ಮ ಎಲ್ಲರೂ ಸೇರಿ ಸಂಚು ನಡೆಸಿದ್ದಾಗಿ ಹೇಳಿದ್ದಾರೆ ಎಂದರು. ಇದರ ನೈತಿಕ ಹೊಣೆಯನ್ನು ಮುಖ್ಯಮಂತ್ರಿಗಳೇ ಹೊರಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕುರಿತು ಎನ್‍ಐಎ ತನ್ನ ಚಾರ್ಜ್‍ಶೀಟಿನಲ್ಲಿ ಅವರ ಹುನ್ನಾರ, ವಿಧ್ವಂಸಕ ಕೃತ್ಯ ನಡೆಸಲು ಮಾಡಿದ್ದ ಸಂಚು, ಐಸಿಸ್ ಜೊತೆಗಿನ ಸಂಬಂಧ, ಬಿಜೆಪಿ ರಾಜ್ಯ ಕಚೇರಿ ಗುರಿಯಾಗಿ ಇಟ್ಟುಕೊಂಡು ಬಾಂಬ್ ಸ್ಫೋಟ ಮಾಡಲು ನಡೆಸಿದ ಯೋಜನೆ ಕುರಿತು ವಿವರವಾಗಿ ತಿಳಿಸಿದ್ದಾರೆ. ಇಷ್ಟಾದ ಮೇಲೆಯೂ ಕೆಲವರಿಗೆ ಅವರು ಶಾಂತಿದೂತರು ಅನಿಸಿದರೆ, ಶಾಂತಿಗಾಗಿಯೇ ಇಸ್ಲಾಂ ಇರುವುದು ಎಂದು ಅನಿಸಿದರೆ, ಭಯೋತ್ಪಾದನೆ ಮತ್ತು ಇಸ್ಲಾಂಗೆ ಇರುವ ಸಂಬಂಧ ಅರ್ಥವಾಗದೆ ಇದ್ದರೆ ನಮ್ಮ ದೇಶ ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...