ಶ್ರೀಕಾಂತ್‌ ಪೂಜಾರಿ ವಿಚಾರದಲ್ಲಿ ಹಸಿ ಸುಳ್ಳು ಹೇಳಿದ ಸಿಎಂ ಸಿದ್ದರಾಮಯ್ಯ: ವಿಪಕ್ಷ ನಾಯಕ ಅಶೋಕ್ ಆರೋಪ

Date:

“ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ನೈತಿಕತೆ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದ ಅವರು, “ಮುಖ್ಯಮಂತ್ರಿಯವರಿಗೆ ಒಂದೋ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈ ತಪ್ಪಿ, ಕಾಣದ ಕೈಗಳು ದಿಕ್ಕು ತಪ್ಪಿಸುತ್ತಿವೆ. ಇಲ್ಲವೆಂದರೆ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. ಇವೆರಡರಲ್ಲಿ ಯಾವುದು ಸತ್ಯವಾದರೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಕಳೆದುಕೊಂಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ತಪ್ಪನ್ನು ಒಪ್ಪಿಕೊಂಡು ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಜನರಲ್ಲಿ ಕ್ಷಮಾಪಣೆ ಕೋರಿ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಬ್ಬ ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶ್ರೀಕಾಂತ್ ಪೂಜಾರಿ ಅವರ ಮೇಲೆ ಇದ್ದ 16 ಪ್ರಕರಣಗಳಲ್ಲಿ 15 ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯ ಕಂಡಿದ್ದು, ಬಾಕಿ ಇರುವ ಒಂದು ಪ್ರಕರಣ ಸಹ 1992ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು. ಆದರೆ ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ಅವರನ್ನು ಆ ಪ್ರಭು ಶ್ರೀರಾಮ ಕ್ಷಮಿಸುವುದಿಲ್ಲ” ಎಂದು ತಿಳಿಸಿದರು.

“ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಕರಾಳೆ ಛಾಯೆಯನ್ನು ಮೂಡಿಸುತ್ತಿದೆ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರನ್ನು ಮೆಚ್ಚಿಸಲು ಕರಸೇವಕರನ್ನು ಹುಡುಕಿ ಹಳೆಯ ಪ್ರಕರಣಗಳಲ್ಲಿ ಬಂಧಿಸಲಾಗುತ್ತಿದೆ. ಹುಬ್ಬಳ್ಳಿಯಂತೆಯೇ ಚಿಕ್ಕಮಗಳೂರು, ಕಲಬುರ್ಗಿ ಮೊದಲಾದ ಕಡೆಗಳಲ್ಲಿ ಹೀಗೆಯೇ ಆಗುತ್ತಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಸರ್ಕಾರ ಹೇರಿದೆ” ಎಂದು ದೂರಿದರು.

“ರಾಮಭಕ್ತರ ಉತ್ಸಾಹ, ಮೆರವಣಿಗೆ, ಮಂತ್ರಾಕ್ಷತೆ ವಿತರಣೆ ಮೊದಲಾದವು ಕಾಂಗ್ರೆಸ್‌ ನಾಯಕರ ತಲೆ ಕೆಡುವಂತೆ ಮಾಡಿದೆ. ಕರಸೇವಕರನ್ನು ಬಂಧಿಸುವ ನೀಚತನವನ್ನು ಸರ್ಕಾರ ತೋರಿದೆ. ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್‌.ಯಡಿಯೂರಪ್ಪ, ಪಿ.ಸಿ.ಮೋಹನ್‌, ರವಿಕುಮಾರ್‌ ಸೇರಿದಂತೆ ನಾವೆಲ್ಲರೂ ಕರಸೇವಕರಾಗಿದ್ದು, ತಾಕತ್ತಿದ್ದರೆ ಸರ್ಕಾರ ನಮ್ಮನ್ನೂ ಕೂಡ ಬಂಧಿಸಲಿ. ರಾಜ್ಯದಲ್ಲಿ ಎಲ್ಲ ಜೈಲುಗಳನ್ನು ತೆರೆದು ನಮ್ಮೆಲ್ಲರನ್ನೂ ಕಳುಹಿಸಲಿ. ರಾಮಭಕ್ತರನ್ನು ತಡೆಯುವ ಶಕ್ತಿ ಇದೆಯೇ ಎಂಬುದನ್ನು ಸರ್ಕಾರ ತೋರಿಸಲಿ” ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಸವಾಲೆಸೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...