ವಿಬಿ-ಜಿ ರಾಮ್ ಜಿ ಕಾಯ್ದೆ: ಮನರೇಗಾ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Date:

ಮನರೇಗಾವನ್ನು ರದ್ದುಗೊಳಿಸಿ ಸದ್ಯ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ವಿಬಿ-ಜಿ ರಾಮ್ ಜಿ ಕಾಯ್ದೆಯಲ್ಲಿ ಇರುವ ಸಾಂವಿಧಾನಿಕ, ಹಣಕಾಸು ಮತ್ತು ಆಡಳಿತಾತ್ಮಕವಾದ ಗಂಭೀರ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.

“ಮನರೇಗಾ ರದ್ದತಿಯು ದುಡಿಯುವವರ ಹಕ್ಕನ್ನು ದುರ್ಬಲಗೊಳಿಸುತ್ತದೆ. ರಾಜ್ಯಗಳ ಮೇಲೆ ಅನ್ಯಾಯದ ಹೊರೆಯನ್ನು ಹೇರುತ್ತದೆ. ಆದ್ದರಿಂದ ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನವನ್ನು ಸ್ಥಗಿತಗೊಳಿಸಿ, ರಾಜ್ಯ ಸರ್ಕಾರಗಳೊಂದಿಗೆ ಸಾಂವಿಧಾನಿಕವಾಗಿ ಕಡ್ಡಾಯವಾಗಿ ನಡೆಯಬೇಕಾದ ಸಮಾಲೋಚನೆಗಳನ್ನು ಪ್ರಾರಂಭಿಸಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ವಿಬಿ ಜಿ ರಾಮ್‌ ಜಿ ಅಂಗೀಕಾರ: ಕೇಂದ್ರದ ವಿರುದ್ಧ ಡಿ.22ರಂದು ಬೃಹತ್ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಬಿ-ಜಿ ರಾಮ್‌ಜಿ ಕಾಯ್ದೆಯು ಬೇಡಿಕೆ ಆಧಾರಿತ, ಹಕ್ಕು ಆಧಾರಿತ ಮೂಲ ಉದ್ಯೋಗ ಖಾತರಿಯ ಉದ್ದೇಶವನ್ನೇ ಸೋಲಿಸುವ ಅಪಾಯವನ್ನುಂಟುಮಾಡುತ್ತದೆ. ಹೊಸ ವಿಬಿ-ಜಿ ರಾಮ್‌ಜಿ ಕಾಯ್ದೆ ಕೆಲಸದ ದಿನಗಳನ್ನು 100 ರಿಂದ 125 ದಿನಕ್ಕೆ ಹೆಚ್ಚಿಸಿದೆ. ಆದರೆ ಇದು ಕೇಂದ್ರ ಬದಲು ರಾಜ್ಯದ ಮೇಲೆ ಹೊರೆ ಹಾಕಲಾಗುತ್ತದೆ. ಕೇಂದ್ರ ಸರ್ಕಾರ ಬರೀ ಶೇಕಡ 60ರಷ್ಟು ಕೊಡುಗೆ ನೀಡುತ್ತದೆ. 125 ದಿನಗಳ ಕೆಲಸದ ಕಾನೂನು ಖಾತರಿ ಎಂಬುದು ಉದ್ಯೋಗ ಖಾತರಿಯ ತತ್ವವನ್ನೇ ಹಾಳು ಮಾಡುತ್ತದೆ. ಬೇಡಿಕೆಯಿದ್ದರೂ ಅನೇಕ ಗ್ರಾಮ ಪಂಚಾಯತ್‌ಗಳು ಹಣವಿಲ್ಲದೆ ಉಳಿಯುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.

“ಇದು ಮನರೇಗಾ ಮನೋಭಾವಕ್ಕೆ ವಿರುದ್ಧವಾಗಿದೆ ಮತ್ತು 73 ನೇ ತಿದ್ದುಪಡಿಯ ಅಡಿಯಲ್ಲಿ ವಿಕೇಂದ್ರೀಕರಣದ ಸಾಂವಿಧಾನಿಕ ದೃಷ್ಟಿಕೋನವನ್ನು ದುರ್ಬಲಗೊಳಿಸುತ್ತದೆ. ಹಣಕಾಸಿನ ಮಾದರಿಯಲ್ಲಿನ ಬದಲಾವಣೆಯೂ ಅಷ್ಟೇ ಕಳವಳಕಾರಿಯಾಗಿದೆ. ಅಸ್ತಿತ್ವದಲ್ಲಿರುವ ಮನರೇಗಾದಲ್ಲಿ ರಾಜ್ಯಗಳು 90:10 ಕೇಂದ್ರ-ರಾಜ್ಯ ಹಂಚಿಕೆ ವ್ಯವಸ್ಥೆಯನ್ನು ಅನುಸರಿಸುತ್ತವೆ. ಹೊಸ ಕಾಯಿದೆಯು ಹೆಚ್ಚಿನ ರಾಜ್ಯಗಳಿಗೆ ಈ ಹಂಚಿಕೆಯನ್ನು 60:40ರಂತೆ ಮಾಡುತ್ತದೆ. ಇದು ರಾಜ್ಯಗಳಿಗೆ ಹಣಕಾಸಿನ ಹೊರೆಯನ್ನು ಹೇರುತ್ತದೆ. ಈಗಾಗಲೇ ರಾಜ್ಯಗಳು ಹಣಕಾಸು ವಿಕೇಂದ್ರೀಕರಣದಿಂದಾಗಿ ಒತ್ತಡದಲ್ಲಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಹೊಸ ಕಾಯಿದೆಯು ಹಂಚಿಕೆಯನ್ನು ಮೀರಿದ ಯಾವುದೇ ವೆಚ್ಚವನ್ನು ಕೇಂದ್ರವು ಸೂಚಿಸಿದ ಕಾರ್ಯವಿಧಾನಗಳ ಪ್ರಕಾರ ರಾಜ್ಯ ಸರ್ಕಾರವು ಭರಿಸುತ್ತದೆ ಎಂದು ಹೇಳುತ್ತದೆ. ಇದು ಕೇಂದ್ರೀಯವಾಗಿ ನಿಗದಿಪಡಿಸಿದ ಮಿತಿಯನ್ನು ಮೀರಿದ ಬೇಡಿಕೆಗೆ ರಾಜ್ಯಗಳು ಶೇಕಡ 100ರಷ್ಟು ಹೊಣೆಗಾರಿಕೆ ಎದುರಿಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

“ಉದ್ಯೋಗ ಖಾತರಿ ಕಾನೂನು ಕೇವಲ ಕಲ್ಯಾಣ ಯೋಜನೆಯಲ್ಲ. ಇದು ಐತಿಹಾಸಿಕ, ಜಾಗತಿಕವಾಗಿ ಮೆಚ್ಚುಗೆ ಪಡೆದ ಹಕ್ಕು ಆಧಾರಿತ ಶಾಸನವಾಗಿದ್ದು, ಗ್ರಾಮ ಸ್ವರಾಜ್ ಮತ್ತು ಅಂತ್ಯೋದಯದ ಸಾಕಾರ ರೂಪವಾದ ಮಹಾತ್ಮ ಗಾಂಧಿಯವರ ಹೆಸರನ್ನು ಹೊಂದಿರುವ ಯೋಜನೆ. ಈ ಕಾನೂನಿನಿಂದ ಅವರ ಹೆಸರನ್ನು ಅಳಿಸುವುದು ದುರದೃಷ್ಟಕರ. ಕಾನೂನಿನ ನೈತಿಕ ಅಧಿಕಾರವನ್ನು ದುರ್ಬಲಗೊಳಿಸುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಿಸಿದ್ದಾರೆ.

“ಆದ್ದರಿಂದ ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ಸ್ಥಗಿತಗೊಳಿಸಿ, ರಾಜ್ಯ ಸರ್ಕಾರಗಳೊಂದಿಗೆ ಸಾಂವಿಧಾನಿಕವಾಗಿ ಕಡ್ಡಾಯವಾಗಿ ನಡೆಯಬೇಕಾದ ಸಮಾಲೋಚನೆಗಳನ್ನು ಪ್ರಾರಂಭಿಸಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...