ಆರ್‌ಪಿಎಫ್‌ ಕಾನ್‌ಸ್ಟೆಬಲ್‌ನಿಂದ ಹತ್ಯೆ : ಬೀದರ್‌ನ ಸೈಫುದ್ದೀನ್ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Date:

  • ಪರಿಹಾರ ನೀಡಲು ಸಮ್ಮತಿ ಸೂಚಿಸಿದ ಸಿಎಂ: ಸಚಿವ ಈಶ್ವರ್ ಖಂಡ್ರೆ
  • ದೇಶವನ್ನೇ ಬೆಚ್ಚಿ ಬೀಳಿಸಿದ್ದ ಘಟನೆಯಲ್ಲಿ ನಾಲ್ವರ ಹತ್ಯೆ, ಒಬ್ಬರು ಬೀದರ್

ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್‌ನಿಂದ ಕೊಲ್ಲಲ್ಪಟ್ಟ ಬೀದರ್ ತಾಲೂಕಿನ ಹಮಿಲಾಪುರ್ ಗ್ರಾಮದ ಸೈಯದ್ ಸೈಫುದ್ದೀನ್ ಕುಟುಂಬಕ್ಕೆ ಸಿದ್ದರಾಮಯ್ಯ ಸರ್ಕಾರ ₹10 ಲಕ್ಷ ಪರಿಹಾರ ನೀಡಲಿದೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅರಣ್ಯ ಮತ್ತು ಪರಿಸರ ಹಾಗೂ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ‘ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲುಗಾಡಿಯಲ್ಲಿ ಆರ್‌ಪಿಎಫ್‌ ಪೇದೆ ಚೇತನ್ ಸಿಂಗ್ ಕ್ಷುಲ್ಲಕ ಕಾರಣಕ್ಕೆ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಬೀದರ್ ಜಿಲ್ಲೆಯ ಬೀದರ್ ಗಾದಗಿ ಬಳಿಯ ಹಮಿಲಾಪುರದ ಮುಗ್ದ ಪ್ರಯಾಣಿಕ ಸೈಯದ್ ಸೈಫುದ್ದೀನ್ ಕುಟುಂಬದವರಿಗೆ ₹10 ಲಕ್ಷ ಪರಿಹಾರವನ್ನು ಸರ್ಕಾರದ ವತಿಯಿಂದ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿಸಿದ್ದಾರೆ. ಮೃತರ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ. ಈ ನೋವಿನ ಸಂದರ್ಭದಲ್ಲಿ ನಾವು ಅವರ ಜೊತೆಗೆ ಇರುತ್ತೇವೆ.” ಎಂದು ತಿಳಿಸಿದ್ದಾರೆ.

ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಆರ್‌ಪಿಎಫ್ ಕಾನ್‌ಸ್ಟೆಬಲ್ ತನ್ನ ಸ್ವಯಂಚಾಲಿತ ರೈಫಲ್‌ನಿಂದ ಗುಂಡು ಹಾರಿಸಿ, ನಾಲ್ವರನ್ನು ಕೊಂದಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
bidar victim
ಸೈಯದ್ ಸೈಫುದ್ದೀನ್

ಆರ್‌ಪಿಎಫ್ ಸಹೋದ್ಯೋಗಿಯಾಗಿದ್ದ ಎಎಸ್‌ಐ ಟಿಕಾ ರಾಮ್ ಮೀನಾ, ಅಬ್ದುಲ್ ಕದಿರ್, ಅಸ್ಗರ್ ಕೈ, ಸೈಯದ್ ಸೈಫುದ್ದೀನ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದನು.

ಇದನ್ನು ಓದಿದ್ದೀರಾ? ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲ್ ಹತ್ಯೆ: ‘ಗಡ್ಡ ನೋಡಿ ಗುಂಡಿಟ್ಟು ಸಾಯಿಸಲಾಗಿದೆ’ ಎಂದ ಸಹೋದರ

ಸೈಯದ್ ಸೈಫುದ್ದೀನ್ ಹೈದರಾಬಾದ್‌ನ ಮೊಬೈಲ್ ಸರ್ವಿಸ್ ಅಂಗಡಿ ಒಂದರಲ್ಲಿ ಕೆಲಸ ಮಾಡಿಕೊಂಡು, ಅಲ್ಲೇ ನೆಲೆಸಿದ್ದರು. ಅಂಗಡಿಯ ಮಾಲೀಕರ ಜೊತೆಗೆ ಅಜ್ಮೀರ್‌ಗೆ ತೆರಳಿ ವಾಪಸ್ ಮುಂಬೈಗೆ ಬರುವ ವೇಳೆ ಈ ದುರ್ಘಟನೆ ನಡೆದಿತ್ತು. ಇವರಿಗೆ ಪತ್ನಿ, ಮೂವರು ಹೆಣ್ಣು ಮಕ್ಕಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...