ಬೆಂಗಳೂರು ಟೌನ್‌ಹಾಲ್ ಮುಂದೆ ಜನಪರ ಪ್ರತಿಭಟನೆಗೆ ಅವಕಾಶ: ಸಿಎಂ ಸಿದ್ದರಾಮಯ್ಯ ಭರವಸೆ

Date:

ಬೆಂಗಳೂರಿನ ಟೌನ್‌ಹಾಲ್ ಮುಂದೆ ಜನಪರ ಪ್ರತಿಭಟನೆ, ಹೋರಾಟಗಳಿಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ “ಪ್ರಗತಿಪರ ಚಳವಳಿಗಳ ನೈತಿಕ ಶಕ್ತಿ-ಡಾ.ಮರುಳಸಿದ್ದಪ್ಪ” ಅವರ ಗೌರವ ಗ್ರಂಥ ಲೋಕಾರ್ಪಣೆಗೊಳಿಸಿದ ಬಳಿಕ ಕೆ.ಎಂ.ಎಸ್ ದಂಪತಿಯನ್ನು ಅಭಿನಂದಿಸಿ, ಅವರು ಮಾತನಾಡಿದರು.

ಸರ್ಕಾರವನ್ನು ಎಚ್ಚರಿಸುವ, ನಿಜವಾದ ಜನಪರವಾದ ಚಳವಳಿಗಳು ಸಮಾಜಕ್ಕೆ ಅತ್ಯಗತ್ಯ. ಇಂಥಾ ಪ್ರತಿಭಟನೆ, ಚಳವಳಿಗಳನ್ನು ನಾನು ಬೆಂಬಲಿಸುತ್ತೇನೆ. ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಭೆಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಷ್ಟು ಶೀರ್ಘವಾಗಿ ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ಟೌನ್ ಹಾಲ್ ಎದುರು ಮತ್ತೆ ಪ್ರತಿಭಟನೆಗಳಿಗೆ, ಹೋರಾಟಗಳಿಗೆ ಅವಕಾಶ ಆಗುವ ದಿಕ್ಕಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

ಅಸಮಾನತೆ ತುಂಬಿರುವ ಜಡ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಈ ಬದಲಾವಣೆ ಜನಪರ ಹೋರಾಟ, ಚಳವಳಿಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಸರ್ಕಾರವನ್ನು ಎಚ್ಚರಿಸುವ, ನಿಜವಾದ ಜನಪರತೆಯಿಂದ ಕೂಡಿದ ಹೋರಾಟ, ಪ್ರತಿಭಟನೆಗಳು ನಡೆಯಬೇಕು. ಸಮಾಜ ಮತ್ತು ಸರ್ಕಾರವನ್ನು ಎಚ್ಚರಿಸುವ ಹೋರಾಟಗಳಿಗೆ ಸ್ವಾಗತಿಸುವುದು ಮಾತ್ರವಲ್ಲದೆ, ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮರುಳಸಿದ್ದಪ್ಪ ಅವರು ನಿಜವಾದ ಶರಣರು: ಸಿಎಂ ಮೆಚ್ಚುಗೆ

ಬಸವಣ್ಣನವರ ಕೆಲವು ಆರಾಧಕರು ಬಸವಣ್ಣರ ವೈಚಾರಿಕತೆಯನ್ನು ಆಚರಿಸುವುದಿಲ್ಲ. ಮೌಢ್ಯ ವಿರೋಧಿ ಬಸವಣ್ಣನವರ ಮೌಲ್ಯಗಳನ್ನು ಆಚರಿಸುವುದಿಲ್ಲ. ಆದರೆ ಕೆ.ಮರುಳಸಿದ್ದಪ್ಪ ಅವರು ನಿಜವಾದ ಶರಣರು. ನುಡಿದಂತೆ, ಬರೆದಂತೆ ಬದುಕುತ್ತಿದ್ದಾರೆ ಎಂದು ಸಿಎಂ ಸಭೆಯಲ್ಲಿ ಮೆಚ್ಚುಗೆ ಸೂಚಿಸಿದರು.

ಬಿಜೆಪಿ ವಿರೋಧಿಸಿ ನಾವು-ದೇವೇಗೌಡರು ಜೆಡಿಎಸ್ ಮಾಡಿದೆವು. ಆಮೇಲೆ ನನ್ನನ್ನು ಉಚ್ಛಾಟಣೆ ಮಾಡಿಬಿಟ್ಟರು. ಆ ಸಂದರ್ಭದಲ್ಲಿ ನಾನು ಕೆ.ಮರುಳ ಸಿದ್ದಪ್ಪ ಅವರನ್ನು ಭೇಟಿಯಾದೆ ಎಂದು ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸ್ಮರಿಸಿಕೊಂಡರು.

ಡಾ. ಕೆ.ಎಂ.ಎಸ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನಾ ಗ್ರಂಥದ ಸಂಪಾದಕರಾದ ಎಚ್.ದಂಡಪ್ಪ, ಶ್ರೀನಿವಾಸ್ ಜಿ.ಕಪ್ಪಣ್ಣ ಸೇರಿ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...