ಅನಂತ ಕುಮಾರ್‌ರವರ ಸಂವಿಧಾನ ಬದಲಾವಣೆ ಹೇಳಿಕೆ ಮನುಸ್ಮೃತಿ ಜಾರಿಯ ಆಲೋಚನೆ: ಸಿಎಂ ಸಿದ್ದರಾಮಯ್ಯ

Date:

“ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು” ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗವೇ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಸಿಎಂ, “ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂ ಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟ ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.”

ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಅವರಿಗೆ ಇದೆ ಎನ್ನುವುದು ಸ್ಪಷ್ಟ” ಎಂದು ಸಿಎಂ ತಿಳಿಸಿದ್ದಾರೆ.”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಗಡೆ ಅಭಿಪ್ರಾಯವನ್ನು ಮೋದಿಯವರು ಒಪ್ಪದೆ ಇದ್ದರೆ ಅವರನ್ನು ಮೊದಲು ಪಕ್ಷದಿಂದ ಕಿತ್ತು ಹಾಕಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತ ಇದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರಿಂದ ‘ಗೋ ಬ್ಯಾಕ್ ಶೋಭಕ್ಕ’ ಅಭಿಯಾನ ತೀವ್ರ: ಟಿಕೆಟ್ ನೀಡಿದರೆ ಬಹಿಷ್ಕಾರದ ಎಚ್ಚರಿಕೆ

“ಪಕ್ಷದ ವರಿಷ್ಠರ ಬೆಂಬಲ ಇಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯ ಇಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಇದನ್ನು ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು” ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...