ಅಸಮಾಧಾನಗೊಂಡಿರುವ ಶಾಸಕರನ್ನು ಸಿಎಂ ಸಮಾಧಾನ ಮಾಡುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

Date:

“ಅಸಮಾಧಾನಗೊಂಡ ಎಲ್ಲರನ್ನೂ ಸಮಾಧಾನ ಪಡಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಾರೆ. ಮುಖ್ಯಮಂತ್ರಿಗಳು ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತಿದ್ದಾರೆ. ಅನುದಾನ ವಿಚಾರವಾಗಿ ಮುಖ್ಯಮಂತ್ರಿ ಅವರು ಹಾಗೂ ಉಪಮುಖ್ಯಮಂತ್ರಿಯವರು ಚರ್ಚೆ ಮಾಡಿ ಎಲ್ಲರಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡುತ್ತಾರೆ” ಎಂದು ಮಾಜಿ ಸಂಸದ, ಬಮೂಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದರು.

ಜಲ ಸಂಪನ್ಮೂಲ ಇಲಾಖೆಯಿಂದ ನನ್ನ ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲ ಎನ್ನುವ ಬಗ್ಗೆ ಶಾಸಕ ರಾಜುಕಾಗೆ ಅವರ ಅಸಮಾಧಾನದ ಬಗ್ಗೆ ಕೇಳಿದಾಗ, “ನೀರಾವರಿ ಇಲಾಖೆಯಲ್ಲಿ ಹಿಂದಿನ ಸರ್ಕಾರವೇ ಸಾಕಷ್ಟು ಕಾಮಗಾರಿ ಹಂಚಿಕೆ ಮಾಡಿತ್ತು. ಕನಿಷ್ಠ 300 ಕೋಟಿ, 500 ಕೋಟಿ, 1 ಸಾವಿರ ಕೋಟಿ ನೀಡಲಾಗುತ್ತಿದೆ. ಈ ದೃಷ್ಟಿಯಿಂದ ಎಲ್ಲರನ್ನೂ ಸಮಾಧಾನಗೊಳಿಸುವ ಕೆಲಸ ನಡೆಯುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ರಾಜಣ್ಣ ಅವರು ಪವರ್ ಸೆಂಟರ್ ಗಳ ಹೆಚ್ಚಳವಾಗಿದೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ರಾಜಣ್ಣ ಅವರು ಸರ್ಕಾರದ ಒಂದು ಭಾಗ. ಅವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಅವರನ್ನೇ ಕೇಳಬೇಕೇ ಹೊರತು ಬೇರೆಯವರನ್ನಲ್ಲ” ಎಂದರು.

ವರ್ಗಾವಣೆ ಹೆಚ್ಚಾಗಿರುವ ಕಾರಣಕ್ಕೆ ಆಡಳಿತ ಹಳಿ ತಪ್ಪಿದೆ ಎನ್ನುವ ಹೇಳಿಕೆಯ ಬಗ್ಗೆ ಕೇಳಿದಾಗ, “ರಾಜಣ್ಣ ಅವರು ಹಿರಿಯ ಸಚಿವರು. ಅವರು ಯಾವ ಅರ್ಥದಲ್ಲಿ ಇದನ್ನು ಹೇಳಿದ್ದಾರೋ ನನಗೂ ಗೊತ್ತಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಯವರು, ಪಕ್ಷದ ವರಿಷ್ಠರು ಹಾಗೂ ರಾಜಣ್ಣ ಅವರನ್ನೇ ಕೇಳಬೇಕು” ಎಂದರು.

ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗಕ್ಕೆ ಹೆಚ್ಚಿನ ಅನುದಾನ ನೀಡಲಾತ್ತಿದೆ ಉತ್ತರ ಕರ್ನಾಟಕ, ತುಮಕೂರು ಭಾಗಕ್ಕೆ ನೀರಾವರಿ ಇಲಾಖೆಯ ಅನುದಾನ ತಲುಪಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಇದು ಮಾಧ್ಯಮಗಳು ಸೃಷ್ಟಿಸುತ್ತಿರುವ ವ್ಯಾಖ್ಯಾನವೇ ಹೊರತು ಶಾಸಕರು ಹೇಳುತ್ತಿರುವುದಲ್ಲ. ಕಾವೇರಿ ಜಲಾನಯನ ಪ್ರದೇಶಕ್ಕೆ ಕಳೆದ 30 ವರ್ಷಗಳಿಂದ ಅನ್ಯಾಯವಾಗಿದೆ. ಕಾವೇರಿ ಟ್ರಿಬ್ಯುನಲ್ ಕಾರಣಕ್ಕೆ ಹೆಚ್ಚಿನ ಅನುದಾನಗಳು, ನೀರಿನ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ” ಎಂದು ತಿಳಿಸಿದರು.

“ರಾಮನಗರ ಬಯಲು ಸೀಮೆ ಪ್ರದೇಶಕ್ಕೆ ಸೇರಿದೆ. ಈ ಜಿಲ್ಲೆಗೆ ಯಾವುದೇ ನೀರಾವರಿ ಮೂಲ ಇಲ್ಲದೇ ಇರುವ ಕಾರಣಕ್ಕೆ ಒಂದಷ್ಟು ಸಣ್ಣ ಯೋಜನೆಗಳನ್ನು ತಗೆದುಕೊಳ್ಳಲಾಗಿದೆ ಹೊರತು ಬೃಹತ್ ಗಾತ್ರದ ಯೋಜನೆಗಳನ್ನು ತೆಗೆದುಕೊಂಡಿಲ್ಲ. ಈ ಹಿಂದೆ ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ನೀರಿನ ಮೂಲ ಇಲ್ಲದೇ ಇರುವ ಕಾರಣಕ್ಕೆ ಯಾವುದೇ ಕಾಲದಲ್ಲೂ ಹೆಚ್ಚಿನ ಒತ್ತು ಕೊಟ್ಟಿಲ್ಲ. ಈಗ ಇರುವಂತಹ ಮೂಲಗಳನ್ನು ಸದುಪಯೋಗ ಪಡೆದುಕೊಳ್ಳಲು ಮುಂದಾಗಿದ್ದೇವೆ” ಎಂದರು.

ಇದನ್ನು ಓದಿದ್ದೀರಾ? ವಿಜಯಪುರ | 10 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಗ್ಯಾಂಗ್‌ ಕೊನೆಗೂ ಪೊಲೀಸರ ಬಲೆಗೆ: ಬ್ಯಾಂಕ್‌ನ ಮ್ಯಾನೇಜರೇ ಸೂತ್ರಧಾರ!

ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವಿನ ಬಗ್ಗೆ ಕೇಳಿದಾಗ, “ಈ ವಿಚಾರವನ್ನು ನಾನು ಮಾಧ್ಯಮಗಳಲ್ಲಿ ನೋಡಿದೆ. ಇದು ಬಹಳ ಆಘಾತಕಾರಿ ವಿಚಾರ. ಇದು ಕಿಡಿಗೇಡಿಗಳ ಕೃತ್ಯ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತದೆ. ಪ್ರಾಣಿ-ಮಾನವ ಸಂಘರ್ಷ ಸಾಮಾನ್ಯ. ಆದರೆ ಈ ರೀತಿಯ ಘಟನೆ ದುರದೃಷ್ಟಕರ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಮಾಡಬೇಕು. ಅರಣ್ಯ ಅಂಚಿನ ಗ್ರಾಮಸ್ಥರಲ್ಲಿ ವಿಶ್ವಾಸ, ಅರಿವು, ತಿಳುವಳಿಕೆ ಮೂಡಿಸುವ ಕೆಲಸ ಮಾಡಬೇಕಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...