ನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ದ್ವಿಮುಖ ನೀತಿ: ಬಸವರಾಜ ಬೊಮ್ಮಾಯಿ ಟೀಕೆ

Date:

ಹಾವೇರಿ ನೈತಿಕ ಪೊಲಿಸ್ ಗಿರಿ ಬಗ್ಗೆ ಈ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ನೈತಿಕ ಪೊಲಿಸ್ ಗಿರಿ ನಡೆದಾಗ ಜೋರಾಗಿ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದ ಕುರಿತು ಸಿಎಂ ಯಾವುದೇ ಮಾತನಾಡುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹರಿಹಾಯ್ದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಲೈಂಗಿಕ ದೌರ್ಜನ್ಯಕ್ಕೆ ಒಳಗಾದವಳು ಅಲ್ಪ ಸಂಖ್ಯಾತ ಮಹಿಳೆ. ಅವಳಿಗೂ ರಕ್ಷಣೆ ನೀಡದೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಆರಂಭದಲ್ಲಿ ಪೊಲೀಸರು ಅದನ್ನು ತಳ್ಳಿ ಹಾಕುವ ಪ್ರಯತ್ನ ‌ನಡೆಸಿದರು. ಆರೋಪಿಗಳಿಗೆ ಜಾಮೀನು ಸಿಗುವಂತ ಪ್ರಕರಣ ದಾಖಲಿಸಿದರು. ಯುವತಿ ದೈರ್ಯವಾಗಿ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದ್ದಾಳೆ. ಇದರಿಂದ ಪ್ರಕರಣ ಗಂಭೀರವಾಗಿದೆ. ಮತ್ತೊಂದು ಬಾರಿ ಯುವತಿಯ ಮೆಡಿಕೆಲ್ ಟೆಸ್ಟ್ ಆಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತರ ಚಾಂಪಿಯನ್. ಇಲ್ಲಿ ಅಲ್ಪಸಂಖ್ಯಾತ ಯುವತಿಯ ಮೇಲೆ ಅತ್ಯಾಚಾರವಾಗಿದೆ. ಆ ಯುವತಿಯ ರಕ್ಷಣೆಗೂ ಮುಂದಾಗುತ್ತಿಲ್ಲ. ರಾಜ್ಯದಲ್ಲಿ ಒಂಬತ್ತು ತಿಂಗಳಲ್ಲಿ ಶೇ. 30 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಳವಾಗಿವೆ. ಈ ಗ್ಯಾಂಗ್ ಈ ಹಿಂದೆಯೂ ಇದೇ ರೀತಿಯ ಪ್ರಕರಣದಲ್ಲಿ ಭಾಗಿಯಾಗಿದೆ. ಅದನ್ನು ಮುಚ್ಚಿ ಹಾಕಲಾಗಿದೆ. ಅದನ್ನೂ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಈ ಪ್ರಕರಣಗಳ ಕುರಿತು ತನಿಖೆ ನಡೆಸಲು ಪ್ರತ್ಯೇಕ ತಂಡ ರಚನೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬದುಕಿನಲ್ಲಿ ಬದಲಾವಣೆ ತರಲು ಯುವನಿಧಿ ಜಾರಿಗೆ ತಂದಿದ್ದೇವೆ: ಡಿಸಿಎಂ ಡಿ ಕೆ ಶಿವಕುಮಾರ್

ಕಾನೂನು ಬಾಹಿರ ಹುದ್ದೆ

“ರಾಜ್ಯದಲ್ಲಿ ದೊಡ್ಡ ಮಟ್ಟದ ಬರ ಬಿದ್ದಿದೆ. ಸಿಎಂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಿಎಂ ಆರ್ಥಿಕ ಪರಿಸ್ಥಿತಿ ಸರಿಯಾಗಿದೆ ಎಂದು ಹೇಳುತ್ತಾರೆ. ಹಾಗಿದ್ದರೆ ಬರ ಪರಿಹಾರ, ಶಾಲಾ ಕಟ್ಟಡ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಗಳಿಗೆ ಅನುದಾನ ಬಿಡುಗಡೆ ಮಾಡುತ್ತಿದ್ದರು. ಕಲ್ಯಾಣ ಕರ್ನಾಟಕ ಭಾಗಕ್ಕೆ 3000 ಕೊಟಿ ರೂ.ಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಅದನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕೆ ಬಂದ ಮೆಲೆ ಕಾರ್ಯಕರ್ತರನ್ನು ಮರೆತಿದ್ದರು. ಅವರು ಆಕ್ರೊಶಗೊಂಡಿದ್ದರಿಂದ ಅವರನ್ನು ಸಮಾಧಾನಪಡಿಸಲು ಕಾನೂನು ಬಾಹಿರವಾಗಿ ಸಂವಿಧಾನ ಬಾಹಿರವಾಗಿ ಈ ಹುದ್ದೆ ನೀಡುತ್ತಿದ್ದಾರೆ” ಎಂದು ಆರೋಪಿಸಿದರು.

“ಗ್ಯಾರಂಟಿ ಉಸ್ತುವಾರಿಗೆ ಸಂಪುಟ ಶ್ರೇಣಿ ನೀಡುವುದು ಸಂವಿಧಾನ ಬಾಹಿರ. ಇದನ್ನು ಸಂಪುಟದ ಸಚಿವರು ಗಂಭಿರವಾಗಿ ಯೋಚಿಸಬೇಕು. ಸಂಪುಟದ ಮರ್ಯಾದೆ ಹಾಳಾಗುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...