ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಏರಿಸಬೇಕು: ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ

Date:

  • ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ
  • ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ

ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅವರನ್ನು ನೇಣುಗಂಬಕ್ಕೆ ಏರಿಸಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಅಶ್ವತ್ಥನಾರಾಯಣ ಸಂಫೂರ್ಣ ಹಾಳು ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ. ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಸರ್ಕಾರಿ ವಿವಿಗಳ ವಿದ್ಯಾರ್ಥಿಗಳ ಗುಣಮಟ್ಟದ ಬಗ್ಗೆ ಅನುಮಾನಪಡುವಂತೆ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ವಿವಿಗಳಲ್ಲಿ ಮೂಲ ಸೌಕರ್ಯ, ಉಪನ್ಯಾಸಕರು ಹಾಗೂ ಸಿಬ್ಬಂದಿಗಳ ನೇಮಕ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸರ್ಕಾರಿ ಸ್ವಾಮ್ಯದ ವಿವಿಗಳಲ್ಲಿ ತಕ್ಷಣ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯ ಮಾಜಿ ಸಚಿವ ಅಶ್ವತ್ಥನಾರಾಯಣ ಮಂತ್ರಿಯಾಗಿದ್ದಾಗ ಏನೂ ಮಾಡಿಲ್ಲ. ಶಿಕ್ಷಣದ ಹೆಸರಿನಲ್ಲಿಯೂ ರಾಜಕೀಯ ಮಾಡಿದ್ದಾರೆ” ಎಂದು ಮೊಯ್ಲಿ ಕಿಡಿ ಕಾರಿದ್ದಾರೆ.

“ವಿಧಾನಮಂಡಲ ಅಧಿವೇಶನ ನಂತರ ನಿಗಮ ಮಂಡಳಿಗಳ ನೇಮಕ ಆಗಲಿದೆ. ಪಕ್ಷಕ್ಕೆ ದುಡಿದ ಕಾರ್ಯಕರ್ತರು ಹಾಗೂ ಮುಖಂಡರ ನೇಮಕ ಆಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಬೀರಲಿದೆ. ರಾಜ್ಯದಲ್ಲಿ ಈ ಬಾರಿ ಇಪ್ಪತ್ತೈದಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ” ಎಂದು ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್ ಬಿಡುಗಡೆ: ಎಚ್​ ಡಿ ಕುಮಾರಸ್ವಾಮಿ

“ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳನ್ನು ಬೆದರಿಸಬಹುದು. ಆದರೆ, ಜನರನ್ನು ಬೆದರಿಸಲು ಸಾಧ್ಯವಿಲ್ಲ. ಜನರ ಆಕ್ರೋಶ ಬಿಜೆಪಿ ವಿರುದ್ದ ಜ್ವಾಲಾಮುಖಿಯಾಗಿ ಸಿಡಿಯಲಿದೆ. ದೇಶದ ಸಂಪನ್ಮೂಲಗಳು ಕೆಲವೇ ಶ್ರೀಮಂತರ ಬಳಿ ಸೇರಿವೆ. ಬಿಜೆಪಿ ಶ್ರೀಮಂತ ಪರ ಇರುವ ಪಕ್ಷ. ಕಾಂಗ್ರೆಸ್ ಬಡವರ ಪರ ಇರುವ ಪಕ್ಷ. ಬಿಜೆಪಿಗರು ದೇಶಭಕ್ತರಲ್ಲ ದೇಶ ದ್ರೋಹಿಗಳು. ಮೋದಿ ಯಾವಾಗ ಏನು ಮಹಾಕಾರ್ಯ ಮಾಡಿದ್ದಾರೆ ಹೇಳಿ? ಅವರು ದೇಶವನ್ನು ಮುನ್ನಡೆಸುವುದಲ್ಲ ಹಿಂದೆ ನೂಕುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಎಚ್ ​​ಡಿ ಕುಮಾರಸ್ವಾಮಿ ಪೆನ್ ಡ್ರೈವ್​​ನಲ್ಲಿ ಇರುವುದು ಬಾಂಬ್ ಅಲ್ಲ ಟುಸ್ ಪಟಾಕಿ. ಕುಮಾರಸ್ವಾಮಿ ಈ ರೀತಿ ಹಲವು ಬಾರಿ ನಡೆದುಕೊಂಡಿದ್ದಾರೆ. ಅವರು ಬಿಜೆಪಿ ಜೊತೆ ಸೇರಿ ಈ ರೀತಿ ವರ್ತಿಸುತ್ತಿದ್ದಾರೆ. ಚುನಾವಣೆಯ ಸೋಲಿನ ಹತಾಶೆಯಿಂದ ಜನರ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...