ನ.25-26ರಂದು ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಕರಾವಳಿಯ ‘ಕಂಬಳ’

Date:

  • ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ
  • ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ ಕುಮಾರ್‌ ರೈ ಮಾಹಿತಿ

‘ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್‌ 25 ಮತ್ತು 26ರಂದು ಪ್ರಥಮ ಬಾರಿಗೆ ‘ನಮ್ಮ ಕಂಬಳ’ ನಡೆಯಲಿದೆ. ಇದರಲ್ಲಿ ಅಂದಾಜು 125 ಜೋಡಿ ಕೋಣಗಳು ಭಾಗವಹಿಸಲಿವೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್‌ ರೈ ತಿಳಿಸಿದರು.

ಬೆಂಗಳೂರು ಕಂಬಳಕ್ಕೆ ಕೋಣಗಳನ್ನು ಕೊಂಡೊಯ್ಯುವ ಕುರಿತು ಅವುಗಳನ್ನು ಸಾಕುವ ಯಜಮಾನರ ಜೊತೆ ಮಂಗಳೂರಿನಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ರೈ, ‘ಅಂದಾಜು 125 ಜೋಡಿ ಕೋಣಗಳು ಭಾಗವಹಿಸಲಿವೆ. ಈ ಕೋಣಗಳನ್ನು ನ.23ರಂದು ಬೆಂಗಳೂರಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. 6 ಕೋಟಿ ವೆಚ್ಚವಾಗಲಿದ್ದು, ಎರಡು ದಿನದಲ್ಲಿ 8ರಿಂದ 9 ಲಕ್ಷ ಜನರು ಭೇಟಿ ನೀಡುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

‘ಕಂಬಳ ಕೋಣಗಳನ್ನು ಲಾರಿಗಳಲ್ಲಿ ಬೆಂಗಾವಲು ವಾಹನ ವ್ಯವಸ್ಥೆಯೊಂದಿಗೆ ಕೊಂಡೊಯ್ಯಲಾಗುವುದು. ಪಶು ಆಂಬುಲೆನ್ಸ್‌ಗಳು ಹಾಗೂ ಪಶು ವೈದ್ಯರು ಜೊತೆಯಲ್ಲಿರುತ್ತಾರೆ. ಕೋಣಗಳಿಗೆ ಹಾಸನದಲ್ಲಿ 2 ಗಂಟೆ ವಿಶ್ರಾಂತಿ ಒದಗಿಸಲಾಗುವುದು. ಕೋಣಗಳಿಗೆ ಕುಡಿಯುವ ನೀರು ಹಾಗೂ ಮೇವುಗಳನ್ನೂ ಮಂಗಳೂರಿನಿಂದಲೇ ಕೊಂಡೊಯ್ಯಲಾಗುತ್ತದೆ ಎಂದು ಅಶೋಕ್ ಕುಮಾರ್‌ ರೈ ಮಾಹಿತಿ ನೀಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಮ್ಮ ಕಂಬಳ’ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳ ಉದ್ಘಾಟಿಸುವರು. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರು, ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

mla ashok kumar rai

ನಟಿ ಐಶ್ವರ್ಯ ರೈ ಹಾಗೂ ನಟ ರಜನಿಕಾಂತ್‌ ಅವರನ್ನು ಸಂಪರ್ಕಿಸಲಾಗಿದ್ದು, ಅವರೂ ಭಾಗವಹಿಸುವ ನಿರೀಕ್ಷೆ ಇದೆ. ಬಾಲಿವುಡ್‌ ಹಾಗೂ ಸ್ಯಾಂಡಲ್‌ವುಡ್‌ನ ತಾರೆಯರು ಕೂಡ ಭಾಗವಹಿಸಲಿದ್ದಾರೆ. ನಟ ರಿಷಬ್‌ ಶೆಟ್ಟಿ, ಅನುಷ್ಕಾ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್‌ ಭಾಗವಹಿಸಲು ಒಪ್ಪಿದ್ದಾರೆ. ಕಂಬಳದಲ್ಲಿ ತಾರಾ ಮೆರುಗು ಇರಲಿದೆ ಎಂದು ಶಾಸಕರು ತಿಳಿಸಿದರು.

‘ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ. 145 ಮೀ ಉದ್ದದ ಕಂಬಳದ ಕರೆ ನಿರ್ಮಿಸಲಾಗುತ್ತದೆ. ಸುಮಾರು 15 ಸಾವಿರ ಆಸನಗಳ ಗ್ಯಾಲರಿ ನಿರ್ಮಾಣವಾಗಲಿದೆ. 2 ಸಾವಿರ ಅತಿಥಿ ಗಣ್ಯರಿಗೆ ಆಸನ ಕಲ್ಪಿಸಲಾಗುತ್ತಿದೆ. 6 ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಕರಾವಳಿಯ ಸೊಗಡನ್ನು ಬಿಂಬಿಸುವ 150ಕ್ಕೂ ಹೆಚ್ಚು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುತ್ತದೆ’ ಎಂದರು.

‘ಕಾನೂನು ಚೌಕಟ್ಟಿನಡಿಯಲ್ಲೇ ಕಂಬಳ ನಡೆಯಲಿದ್ದು, ಸುಪ್ರೀಂ ಕೋರ್ಟ್ ಆದೇಶ ಪಾಲಿಸಲಿದ್ದೇವೆ. ಈ ಕಂಬಳಕ್ಕೆ ₹6 ಕೋಟಿ ವೆಚ್ಚವಾಗುವ ನಿರೀಕ್ಷೆ ಇದೆ. ಕರಾವಳಿಯ ಈ ಕ್ರೀಡೆ ಜಗದ್ವಿಖ್ಯಾತವಾಗಬೇಕು ಎಂಬ ಆಶಯ ನಮ್ಮದು. ಬೆಂಗಳೂರಿನಲ್ಲಿ 1 ಎಕರೆ ವಿಶಾಲ ಪ್ರದೇಶದಲ್ಲಿ ತುಳುಭವನ, ಪಿಲಿಕುಳದಲ್ಲಿ ಕಂಬಳ ಭವನ ನಿರ್ಮಿ ಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತೇವೆ’ ಎಂದರು.

‘ತುಳು ಮತ್ತು ಕನ್ನಡ ಭಾಷೆಗಳೆರಡರಲ್ಲೂ ಕಂಬಳದ ಧಾಟಿಯಲ್ಲೇ ವೀಕ್ಷಕ ವಿವರಣೆ ನೀಡಲಾಗುತ್ತದೆ. ಮೊದಲ ಬಹುಮಾನ ಗೆದ್ದ ಕೋಣಗಳಿಗೆ ಎರಡು ಪವನ್‌ (16 ಗ್ರಾಂ) ಚಿನ್ನ, ದ್ವಿತೀಯ ಸ್ಥಾನ ಪಡೆದ ಕೋಣಗಳಿಗೆ ಒಂದು ಪವನ್ (8 ಗ್ರಾಂ) ಚಿನ್ನ ನೀಡಲಿದ್ದೇವೆ’ ಎಂದು ಬಹುಮಾನದ ನೀಡುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಗೌರವಾಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಪದಾಧಿಕಾರಿಗಳಾದ ಚಂದ್ರಹಾಸ ಸಾಧು ಸನಿಲ್, ವಿಜಯ ಕುಮಾರ್ ಜೈನ್‌, ಮುರಳೀಧರ ರೈ, ರೋಹಿತ್‌ ಹೆಗ್ಡೆ, ಲೋಕೇಶ್‌ ಶೆಟ್ಟಿ ಮುಚ್ಚೂರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...