ವಾಟ್ಸ್‌ಆಪ್‌ಗೂ ತಟ್ಟಿದ ನೀತಿ ಸಂಹಿತೆ ಬಿಸಿ: ಅಡ್ಮಿನ್‌ಗೆ ನೋಟಿಸ್ ಜಾರಿ ಮಾಡಿದ ಆಯೋಗ

Date:

  • ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾದ ವಾಟ್ಸ್‌ಅಪ್‌ ಅಡ್ಮಿನ್
  • ನೀತಿ ಸಂಹಿತೆ ಉಲ್ಲಂಘನೆ;ಕಾರಣ ಕೇಳಿ ಆಯೋಗದಿಂದ ನೊಟೀಸ್ ಜಾರಿ

ಚುನಾವಣಾ ಆಯೋಗದ ನೀತಿ ಸಂಹಿತೆಯ ಬಿಸಿ ಸಾಮಾಜಿಕ ಜಾಲತಾಣ ವಾಟ್ಸ್‌ಆಪ್‌ಗೂ ತಟ್ಟಿದೆ.

ಮತದಾನದ ಹಬ್ಬಕ್ಕೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಫರ್ಮಾನು ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮಗಳ ಮೇಲೆ ಕಣ್ಣಿಟ್ಟಿದ್ದ ಆಯೋಗ ಈಗ ಒಂದು ಹೆಜ್ಜೆ ಮುಂದೆ ಹೋಗಿ ಸೋಷಿಯಲ್ ಮೀಡಿಯಾಗಳನ್ನು ಹದ್ದಿನ ಕಣ್ಣಿನಿಂದ ವೀಕ್ಷಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪರಿಣಾಮ ನಿಯಮ ಮೀರಿ ಮೆಸೇಜ್ ಒಂದನ್ನು ಗ್ರೂಪ್‌ನಲ್ಲಿ ಹಂಚಿಕೊಂಡಿದ್ದ ಕಾರಣ ವಾಟ್ಸ್‌ಆಪ್‌ ಗ್ರೂಪ್‌ನ ಅಡ್ಮಿನ್ ಒಬ್ಬರಿಗೆ ಆಯೋಗ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

ಅಂದಹಾಗೆ ಆಯೋಗದ ಸೂಚನಾ ಪತ್ರ ಪಡೆದುಕೊಂಡವರು ಕೊಡಗು ಜಿಲ್ಲೆಯ ಕುಶಾಲನಗರ ನಿವಾಸಿ ವಿ ಪಿ ಶ್ರೀಧರ್.

ಶ್ರೀಧರ್ ಅಡ್ಮಿನ್ ಆಗಿರುವ ನಮ್ಮ ಕುಶಾಲನಗರ ವಾಟ್ಸ್‌ಆಪ್‌ ಗ್ರೂಪ್ ನಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗುವ ರೀತಿಯ ರಾಜಕೀಯ ಹೇಳಿಕೆ ಹೊಂದಿರುವ ವೀಡಿಯೋ ಒಂದು ಪ್ರಸಾರವಾಗಿತ್ತು. ಇದನ್ನು ಆಧಾರವಾಗಿಟ್ಟುಕೊಂಡ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಜೊತೆಗೆ ಈ ಬಗ್ಗೆ ವಿವರಣೆ ಕೇಳಿರುವ ಆಯೋಗ, ಪ್ರಜಾಪ್ರತಿನಿಧಿ ಕಾಯ್ದೆ 1951ರ ಪ್ರಕಾರ ನಿಮ್ಮ ಮೇಲೆ ಏಕೆ ಕಾನೂನು ಕ್ರಮ ಜರುಗಿಸಬಾರದು ಎಂದು ಪ್ರಶ್ನಿಸಿದೆ. ಹಾಗೆಯೇ ಸೂಚನಾ ಪತ್ರ ಕೈ ಸೇರಿದ 24 ಗಂಟೆಗಳೊಳಗಾಗಿ ಉತ್ತರಿಸುವಂತೆ ಅವರಿಗೆ ತಾಕೀತು ಮಾಡಿದೆ.

ಈ ಸುದ್ದಿ ಓದಿದ್ದೀರಾ? :ಚುನಾವಣೆ 2023 | 10 ದಿನಗಳಲ್ಲಿ 38 ಕೋಟಿ…

ಈ ಬೆಳವಣಿಗೆ ಬೆನ್ನಲ್ಲಿ ಈಗ ಪ್ರಜ್ಞಾವಂತ ವಾಟ್ಸ್‌ಆಪ್‌ ಅಡ್ಮಿನ್ ಬಳಗವೊಂದು ತಮ್ಮ ವ್ಯಾಪ್ತಿಯ ಗ್ರೂಪ್‌ಗೆ ಮನವಿ ಸಂದೇಶ ರವಾನಿಸಿ, ನಿಮ್ಮ ನಿಮ್ಮ ಪೋಸ್ಟಗಳಿಗೆ ನೀವೇ ಹೊಣೆ ಎಂದು ಎಚ್ಚರಿಕೆಯನ್ನೂ ನೀಡಿ, ಆಯೋಗದ ಕೆಂಗಣ್ಣಿಗೆ ಗುರಿಯಾಗದಂತೆ ಮಾಹಿತಿ ಹಂಚಿಕೊಳ್ಳಲು ತಿಳಿಸಿದೆ. ಆ ಮನವಿ ಈ ಕೆಳಗಿನಂತಿದೆ.

ಸ್ನೇಹಿತರೆ, ತಮಗೆಲ್ಲರಿಗೂ ತಿಳಿದಿರುವಂತೆ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಹೀಗಾಗಿ ಗ್ರೂಪಿನ ಚಟುವಟಿಕೆಗಳು ಕೂಡಾ ಇಲಾಖೆಯ ಕಣ್ಗಾವಲಿನಡಿಯಲ್ಲಿಯೇ ಬರುತ್ತವೆ.

ಆದುದರಿಂದ ತಾವುಗಳು ದಯಮಾಡಿ ಯಾವುದೇ ರೀತಿಯ “ರಾಜಕೀಯ ಪ್ರೇರಿತ ಪ್ರಚಾರ/ವಿರೋಧದ ಮಾಹಿತಿಯನ್ನು ಅಥವಾ ಅನ್ಯ ಮಾರ್ಗ ಬಳಸಿ ಕಾನೂನಿನ ಕಣ್ಣು ತಪ್ಪಿಸಿ ಪ್ರಚಾರ ನಡೆಸುವುದನ್ನು ಮಾಡಬಾರದು” ಎಂದು ಈ ಮೂಲಕ ತಮ್ಮಗಳ ಗಮನಕ್ಕೆ ತರಬಯಸುತ್ತೇವೆ.

ಅದಾಗ್ಯೂ ಅಕಸ್ಮಾತ್ ಈ ವೇದಿಕೆಯನ್ನು ತಪ್ಪಾಗಿ ಬಳಸಿಕೊಂಡವರ ವಿರುದ್ಧ ಇಲಾಖೆಗಳು ತೆಗೆದುಕೊಳ್ಳುವ ಕಠಿಣ ಕಾನೂನು ಕ್ರಮಗಳಿಗೆ ಅಡ್ಮಿನ್ ಜವಾಬ್ದಾರರಾಗಿರುವುದಿಲ್ಲವೆಂದು ತಿಳಿಸಬಯಸುತ್ತೇವೆ. ಎಂದಿದ್ದಾರೆ.

ವಾಟ್ಸ್‌ಆಪ್‌ ಅಡ್ಮಿನ್ ಮಾಡಿರುವ ಈ ಮನವಿ ಇತರೆ ಸಾಮಾಜಿಕ ಜಾಲತಾಣಗಳಲ್ಲೀಗ ವೈರಲ್ ಮಾಹಿತಿಯಾಗಿ ಹರಿದಾಡುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...