ಮೈತ್ರಿ ಸರ್ಕಾರ ಪತನ ವಿಚಾರ |ಬಾಂಬೆ ಬಾಯ್ಸ್ ಟೀಂನಲ್ಲಿ ಭಿನ್ನಮತ; ಸುಧಾಕರ್‌ಗೆ ಸವಾಲೆಸೆದ ಎಂಟಿಬಿ

Date:

ಸುಧಾಕರ್ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದ ಎಂಟಿಬಿ
ಮನೆ ದೇವರ ಮೇಲೆ ಆಣಿ ಮಾಡಲಿ ಎಂದ ಮಾಜಿ ಸಚಿವ

ವಿಪಕ್ಷ ನಾಯಕ ಸಿದ್ದರಾಮಯ್ಯರಿಂದಲೇ ಮೈತ್ರಿ ಸರ್ಕಾರ ಪತನವಾಯಿತು ಎಂದಿದ್ದ ಮಾಜಿ ಸಚಿವ ಡಾ. ಸುಧಾಕರ್ ಹೇಳಿಕೆಗೆ ಅವರ ಗೆಳೆಯರ ಬಳಗದಲ್ಲೇ ಆಕ್ಷೇಪ ವ್ಯಕ್ತವಾಗಿದೆ.

ಮೈತ್ರಿ ಸರ್ಕಾರ ಪತನದ ವೇಳೆ ಸುಧಾಕರ್ಗೆ ಜೊತೆಯಾಗಿ ಬಾಂಬೆ ಟೀಂ ಸೇರಿದ್ದ ಮತ್ತೋರ್ವ ಸಚಿವ ಎಂಟಿಬಿ ನಾಗರಾಜ್ ಈಗ ಸುಧಾಕರ್ ಹೇಳಿಕೆಯನ್ನು ಅಲ್ಲಗೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾವೂ ಕೂಡ ಟ್ವೀಟ್ ಮೂಲಕ ಸುಧಾಕರ್ ವಿಚಾರ ಪ್ರಸ್ತಾಪಕ್ಕೆ ತಿರುಗೇಟು ನೀಡಿರುವ ಅವರು ಆರೋಗ್ಯ ಸಚಿವರ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಎಂದಿದ್ದಾರೆ.

ಇದೇ ವೇಳೆ ಸುಧಾಕರ್ಗೆ ಸವಾಲೆಸೆದಿರುವ ನಾಗರಾಜ್, ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು. ಅದನ್ನು ಬಿಟ್ಟು ಬೇರೇನನ್ನೂ ಹೇಳಿರಲಿಲ್ಲ. ಇದೇ ಸತ್ಯ ಎಂದಿದ್ದಾರೆ.

ಆದರೆ ಇಂದು ಸುಧಾಕರ್ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದೆ. ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಅವರು ಈ ಮಾತುಗಳನ್ನು ಹೇಳಿದ್ದಾರೆನಿಸುತ್ತದೆ. ಅಷ್ಟೊಂದು ನೋವಿದ್ದವರು ಇಷ್ಟು ದಿನ ಏಕೆ ಸುಮ್ಮನಿದ್ದರು? ಎಂದು ಎಂಟಿಬಿ ನಾಗರಾಜ್ ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಕಾಂಗ್ರೆಸ್ ಲಿಂಗಾಯತರಿಗೆ ಯಾವ ಹುದ್ದೆ ನೀಡಲಿದೆ ನೋಡೋಣ: ಬಸವರಾಜ ಬೊಮ್ಮಾಯಿ

ಇನ್ನು ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದಿರುವ ಸುಧಾಕರ್, ಈ ವಿಚಾರವನ್ನು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು?ಈಗ ಇದರ ಪ್ರಸ್ತಾಪ ಮಾಡಿರುವುದರ ಹಿಂದಿನ ಮರ್ಮವೇನು ಎಂದು ಎಂಟಿಬಿ ನಾಗರಾಜ್ ಸುಧಾಕರ್ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...